ಡಿ ಬೀಟ್ಸ್ ತೆಕ್ಕೆಗೆ ಬಿದ್ದ 'ಕೆಂಡ' ಆಡಿಯೋ ರೈಟ್ಸ್; ಮೆಚ್ಚಿ ಖರೀದಿಸಿದ ಸಂಗೀತ ನಿರ್ದೇಶಕ ವಿ ಹರಿಕೃಷ್ಣ

Published : Mar 09, 2024, 06:41 PM ISTUpdated : Mar 09, 2024, 06:44 PM IST
ಡಿ ಬೀಟ್ಸ್ ತೆಕ್ಕೆಗೆ ಬಿದ್ದ 'ಕೆಂಡ' ಆಡಿಯೋ ರೈಟ್ಸ್; ಮೆಚ್ಚಿ ಖರೀದಿಸಿದ ಸಂಗೀತ ನಿರ್ದೇಶಕ ವಿ ಹರಿಕೃಷ್ಣ

ಸಾರಾಂಶ

ಸಂಗೀತ ನಿರ್ದೇಶಕ ಕಂ ಈ ಸಂಸ್ಥೆಯ ಮುಖ್ಯಸ್ಥರಾದ ವಿ. ಹರಿಕೃಷ್ಣ ಅವರೇ ಕೆಂಡದ ಹಾಡುಗಳನ್ನು ಕೇಳಿ, ಬಹುವಾಗಿ ಮೆಚ್ಚಿಕೊಂಡು ಆಡಿಯೋ ಹಕ್ಕುಗಳನ್ನು ಖರೀದಿಸಿದ್ದಾರೆ. ಈ ಸಂದರ್ಭದಲ್ಲಿ ಹರಿಕೃಷ್ಣ ಅವರ ಕಡೆಯಿಂದ ಬಂದಿರುವ ಮೆಚ್ಚುಗೆಯ ಮಾತುಗಳು ಚಿತ್ರತಂಡಕ್ಕೆ ಮತ್ತಷ್ಟು ಹುರುಪು ತುಂಬಿವೆ.


ಸಹದೇವ್ ಕೆಲವಡಿ ನಿರ್ದೇಶನದಲ್ಲಿ ಮೂಡಿ ಬಂದಿರುವ 'ಕೆಂಡ' ಚಿತ್ರದ ಕಡೆಯಿಂದ ಹಂತ ಹಂತವಾಗಿ ಒಂದಷ್ಟು ಅಚ್ಚರಿಯ ಸುದ್ದಿಗಳು ಜಾಹೀರಾಗುತ್ತಲೇ ಬರುತ್ತಿವೆ. ಗಂಟುಮೂಟೆ ಖ್ಯಾತಿಯ ರೂಪಾ ರಾವ್ ನಿರ್ಮಾಣದ ಈ ಸಿನಿಮಾ ಎಲ್ಲ ರೀತಿಯತಿಂದಲೂ ಭಿನ್ನ ಜಾಡಿನದ್ದೆಂಬ ವಿಚಾರ ಈಗಾಗಲೇ ಪ್ರೇಕ್ಷಕ ವಲಯಕ್ಕೆ ದಾಟಿಕೊಂಡಿದೆ. ಇದೀಗ ಕೆಂಡದ ಆಡಿಯೋ ಹಕ್ಕುಗಳ ವಿಚಾರದಲ್ಲಿ ಖುಷಿಯ ಸಂಗತಿಯೊಂದನ್ನು ಚಿತ್ರತಂಡ ಹಂಚಿಕೊಂಡಿದೆ.

ಹೆಸರಲ್ಲೇ ನಿಗಿನಿಗಿಸುವ ಆವೇಗವೊಂದನ್ನು ಬಚ್ಚಿಟ್ಟುಕೊಂಡಂತಿರೋ ಸಿನಿಮಾ 'ಕೆಂಡ'. ಇದರ ಮೂಲಕ ಖ್ಯಾತ ಸಾಹಿತಿ ಜಯಂತ್ ಕಾಯ್ಕಿಣಿ ಅವರ ಪುತ್ರ ರಿತ್ವಿಕ್ ಕಾಯ್ಕಿಣಿ ಸಂಗೀತ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಅವರ ಸಂಗೀತ ನೀಡಿರುವ ಹಾಡಿಗಳ ಆಡಿಯೋ ರೈಟ್ಸ್ ಅನ್ನು ಡಿ ಬೀಟ್ಸ್ ಪಡೆದುಕೊಂಡಿದೆ. ಸಿನಿಮಾ ಮ್ಯೂಸಿಕ್ ವಲಯದಲ್ಲಿ ದೊಡ್ಡ ಹೆಸರು ಮಾಡಿರುವ ಸಂಸ್ಥೆ ಡಿ ಬೀಟ್ಸ್. 

ಕುಬೇರನಾದ್ರೂ ಚೆನ್ನೈನಲ್ಲಿ ಭಿಕ್ಷೆ ಬೇಡುತ್ತಿರುವ ಧನುಷ್; ಪಕ್ಕದಲ್ಲಿ ರಶ್ಮಿಕಾ ಮಂದಣ್ಣ ಯಾಕೆ ಗುರೂ?

ಖುದ್ದು ಸಂಗೀತ ನಿರ್ದೇಶಕ ಕಂ ಈ ಸಂಸ್ಥೆಯ ಮುಖ್ಯಸ್ಥರಾದ ವಿ. ಹರಿಕೃಷ್ಣ ಅವರೇ ಕೆಂಡದ ಹಾಡುಗಳನ್ನು ಕೇಳಿ, ಬಹುವಾಗಿ ಮೆಚ್ಚಿಕೊಂಡು ಆಡಿಯೋ ಹಕ್ಕುಗಳನ್ನು ಖರೀದಿಸಿದ್ದಾರೆ. ಈ ಸಂದರ್ಭದಲ್ಲಿ ಹರಿಕೃಷ್ಣ ಅವರ ಕಡೆಯಿಂದ ಬಂದಿರುವ ಮೆಚ್ಚುಗೆಯ ಮಾತುಗಳು ಚಿತ್ರತಂಡಕ್ಕೆ ಮತ್ತಷ್ಟು ಹುರುಪು ತುಂಬಿವೆ. ಎಲ್ಲ ರೀತಿಯಿಂದಲೂ ಈ ಹಾಡುಗಳು ಅದ್ಭುತವಾಗಿ ಮೂಡಿ ಬಂದಿವೆ ಎಂಬ ಅಭಿಪ್ರಾಯ ಹರಿಕೃಷ್ಣರ ಕಡೆಯಿಂದ ರವಾನೆಯಾಗಿದೆ. 

ನಮ್ಮಂಥವರಿಗೆಲ್ಲ ಮಕ್ಕಳು ಇರಬಾರದು ಎಂದಿದ್ದರಂತೆ ನಟಿ ಕಲ್ಪನಾ; ಯಾರಿಗೆ, ಯಾಕೆ ಹಾಗೆ ಹೇಳಿದ್ರು?

ಈ ಮೂಲಕ ಮೊದಲ ಹೆಜ್ಜೆಯಲ್ಲಿಯೇ ರಿತ್ವಿಕ್ ಕಾಯ್ಕಿಣಿ ಗಮನ ಸೆಳೆದಿದ್ದಾರೆ. ಅಂದಹಾಗೆ, ಕೆಂಡ ಹಾಡುಗಳಿಗೆ ಜಯಂತ್ ಕಾಯ್ಕಿಣಿ ಸಾಹಿತ್ಯ ಬರೆದಿದ್ದಾರೆ. ಅದರಲ್ಲೊಂದು ಹಾಡನ್ನು ಖ್ಯಾತ ಸಂಗೀತ ನಿರ್ದೇಶಕ ಚರಣ್ ರಾಜ್ ಹಾಡಿರೋದು ವಿಶೇಷ. ಅದಿತಿ ಸಾಗರ್ ಕೂಡಾ ಹಾಡೊಂದಕ್ಕೆ ಧ್ವನಿಯಾಗಿದ್ದಾರೆ. ಸದ್ಯಕ್ಕೆ ಇವಿಷ್ಟು ಮಾಹಿತಿಯನ್ನಷ್ಟೇ ಚಿತ್ರತಂಡ ಜಾಹೀರು ಮಾಡಿದೆ. ಮಿಕ್ಕುಳಿದ ಮಾಹಿತಿಗಳು ಇಷ್ಟರಲ್ಲಿಯೇ ಪ್ರೇಕ್ಷಕರನ್ನು ತಲುಪಿಕೊಳ್ಳಲಿವೆ.

ಸಾಯುವುದಕ್ಕೂ ಮೊದಲು ಅದೆಂಥ ಮಾತು ಹೇಳಿದ್ರು ನೋಡಿ ನಟ ಸುಶಾಂತ್ ಸಿಂಗ್ ರಜಪೂತ್!

ಅಂದಹಾಗೆ, ಈ ಮೊದಲು ಗಂಟುಮೂಟೆ ಸಿನಿಮಾ ನಿರ್ದೇಶಿಸಿದ್ದ ಸಹದೇವ್ ಕೆಲವಡಿಯ ಮುಂಬರುವ 'ಕೆಂಡ' ಚಿತ್ರಕ್ಕೆ ರೂಪಾ ರಾವ್ ಬಂಡವಾಳ ಹೂಡಿದ್ದಾರೆ. ಈ ಚಿತ್ರದಲ್ಲಿ ಬಿವಿ ಭರತ್, ಪ್ರಣವ್ ಶ್ರೀಧರ್, ವನೋದ್ ರವಿಂದ್ರನ್, ಗೋಪಾಲಕೃಷ್ಣ ದೇಶಪಾಂಡೆ ಮುಖ್ಯ ಭೂಮಿಕೆಯಲ್ಲಿದ್ದಾರೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

'ಕೆಡಿ' ಸಾಂಗ್ ಕಿಚ್ಚು: ಕೊನೆಗೂ ಮೌನ ಮುರಿದ ಜೋಗಿ ಪ್ರೇಮ್; ಕ್ಷಮೆಯಾಚಿಸಿ ಭಾರಿ ದೊಡ್ಡ ನಿರ್ಧಾರ ಪ್ರಕಟಿಸಿದ ನಿರ್ದೇಶಕ!
'ನನ್ನ ಮರ್ಯಾದೆ ಪ್ರಶ್ನೆ ಅಂದಿದ್ದೆ, ಆದ್ರೂ ಕೇಳಲಿಲ್ಲ..': ನಿರ್ದೇಶಕ ಪ್ರೇಮ್ ವಿರುದ್ಧ ತಿರುಗಿಬಿದ್ದ ನೋರಾ ಫತೇಹಿ!