ಡಿ-ಬಾಸ್‌ ಫಿಲ್ಮ್‌ಗೆ ಕರೋನಾ ವೈರಸ್ ಭೀತಿ: ಜನ್ಯಾ ಆನಾರೋಗ್ಯ ಎಫೆಕ್ಟ್‌?

Suvarna News   | Asianet News
Published : Feb 28, 2020, 12:54 PM IST
ಡಿ-ಬಾಸ್‌ ಫಿಲ್ಮ್‌ಗೆ ಕರೋನಾ ವೈರಸ್ ಭೀತಿ: ಜನ್ಯಾ ಆನಾರೋಗ್ಯ ಎಫೆಕ್ಟ್‌?

ಸಾರಾಂಶ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ರಾಬರ್ಟ್' ಸಿನಿಮಾ ಶೂಟಿಂಗ್ ನಡೆಯುತ್ತಿದ್ದು, ಕರೋನಾ ವೈರಸ್‌ ಭೀತಿ ಇದಕ್ಕೂ ಎದುರಾಗಿದೆ. ಅದ್ಹೇಗೆ?

ಸ್ಯಾಂಡಲ್‌ವುಡ್ ಬಾಕ್ಸ್‌ ಆಫೀಸ್‌ ಸುಲ್ತಾನ್‌ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಭದ್ರಾವತಿ ಬೆಡಗಿ, ಸುಪ್ರಾ ಇಂಟರ್‌ನ್ಯಾಷನಲ್ ಪ್ರಶಸ್ತಿ ವಿಜೇತೆ ಆಶಾ ಭಟ್ ನಟನೆಯ ಬಹು ನಿರೀಕ್ಷಿತ ಸಿನಿಮಾ 'ರಾಬರ್ಟ್' ತೆರೆ ಕಾಣಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಈಗಾಗಲೇ ಪೋಸ್ಟರ್ ಲುಕ್‌ ಮೂಲಕ ಕುತೂಹಲ ಹೆಚ್ಚಿಸಿರುವ ಸಿನಿಮಾ ಕಡೇ ಹಂತದ ಶೂಟಿಂಗ್ ವೇಳೆ ವಿಘ್ನ ಎದುರಿಸುತ್ತಿದೆ. ಚಿತ್ರದ ಮಖ್ಯ ಸನ್ನಿವೇಷಗಳನ್ನು ವಾರಣಾಸಿಯಲ್ಲಿ ಚಿತ್ರೀಕರಿಸಲಾಗಿದೆ. ಕ್ಲೈಮ್ಯಾಕ್ಸ್ ದೃಶ್ಯಗಳನ್ನು ಯುರೋಪ್‌ನಲ್ಲಿ ಚಿತ್ರೀಕರಿಸಲು ತಂಡ ನಿರ್ಧರಿಸಿತ್ತು. ಆದರೆ ಅಲ್ಲಿ ಕರೋನಾ ವೈರಸ್‌ ಭೀತಿ ಇರೋದ್ರಿಂದ ಶೂಟಿಂಗ್ ಕ್ಯಾನ್ಸಲ್ ಮಾಡಲಾಗಿದೆ, ಎಂದು ರಾಬರ್ಟ್ ಟೀಂ ತಿಳಿಸಿದೆ.

ದರ್ಶನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್; ರಾಬರ್ಟ್ ರಿಲೀಸ್‌ಗೆ ಡೇಟ್‌ ಫಿಕ್ಸ್!

ಸ್ಪೇನ್‌ನಲ್ಲಿ ಚಿತ್ರದ ಮುಖ್ಯ ಹಾಡೊಂದನ್ನು ಚಿತ್ರೀಕರಿಸಲು ನಿರ್ಧರಿಸಲಾಗಿತ್ತು. ಅದನ್ನೂ ಮತ್ತೊಂದು ಸ್ಥಳದಲ್ಲಿ ಚಿತ್ರೀಕರಿಸಲು ನಿರ್ಮಾಪಕರು ನಿರ್ಧಿರಿಸಿದ್ದು, ಸ್ಥಳ ಶೋಧ ನಡೆಸಲಾಗುತ್ತಿದೆ. 

ಎರಡು ಭಾಷೆಗಳಲ್ಲಿ ತೆರೆ ಕಾಣುತ್ತಿರುವ ಈ ಚಿತ್ರದಲ್ಲಿ ದರ್ಶನ್‌ಗೆ ಜೋಡಿಯಾಗಿ ಆಶಾ ಭಟ್ ಕಾಣಿಸಿಕೊಂಡರೆ ಸಿನಿಮಾ ವಿಶೇಷತೆಯನ್ನು ಎತ್ತಿ ಹಿಡಿಯುವುದು ಹಾಡುಗಳು. ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ ಕಮಾಲ್‌ಗೆ ತಲೆದೂಗಲು ಅಭಿಮಾನಿಗಳು ಕಾತುರದಲ್ಲಿದ್ದಾರೆ. 

ಬರ್ತಡೇ ದಿನ ದರ್ಶನ್ ಹೊಡೆದ ಆ ವ್ಯಕ್ತಿ ಯಾರು?

ಮೈಸೂರಿನಲ್ಲಿ ಅರ್ಜುನ್ ಜನ್ಯಗೆ ಹೃದಯಾಘಾತವಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೊಳಗಾಗಿದ್ದು, ವಿಶ್ರಾಂತಿಯಲ್ಲಿದ್ದಾರೆ. ಮಾರ್ಚ್ 21ಕ್ಕೆ ಅರ್ಜುನ್ ಜನ್ಯ ನೈಟ್ಸ್‌ನೊಂದಿಗೆ ರಾಬರ್ಟ್ ಆಡಿಯೋ ಲಾಂಚ್ ಮಾಡುವ ಯೋಚನೆ ಚಿತ್ರ ತಂಡಕ್ಕಿದೆ. ನಂತರ ಟ್ರೇಲರ್ ಲಾಂಚ್ ಮಾಡಿ, ಚಿತ್ರ ಪ್ರಚಾರ ಮಾಡುವ ಯೋಜನೆ ಇದೆ. 

ಈ ಶೆಡ್ಯೂಲ್‌ಗೆ ಅರ್ಜುನ್ ಜನ್ಯಾ ಅನಾರೋಗ್ಯದಿಂದ ಯಾವುದೇ ರೀತಿಯ ತೊಂದರೆಯಾಗುವುದಿಲ್ಲವೆಂದು ನಿರ್ಮಾಪಕರು ಸ್ಪಷ್ಟಪಡಿಸಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಮುಂಬೈನಲ್ಲಿ ಮಂಗಳೂರು ಬೆಡಗಿ ಶಿಲ್ಪಾ ಶೆಟ್ಟಿ ಮೊದಲ ಬೀಚ್ ಕ್ಲಬ್ ಶುರು; ದೇವಲೋಕವೋ ಪ್ರೇಮಲೋಕವೋ ಎಂಬಂತಿದೆ!
Photos: ರಶ್ಮಿಕಾ ಮಂದಣ್ಣರನ್ನೇ ಯಾಕೆ ಮದುವೆಯಾದೆ? ವಿವಾಹವಾಗಿ ಕ್ಲಾರಿಟಿ ಕೊಟ್ಟ Vijay Deverakonda