ಆಪ್ತ ಬಾಂಧವ ಧನ್ವೀರ್ ಸಹಾಯಕ್ಕೂ ಬರ್ಲಿಲ್ಲ ದರ್ಶನ್.. 'ವಾಮನ'ನಿಂದಲೂ ದೂರ ಉಳಿದ್ದಿದ್ದೇಕೆ?

Published : Mar 27, 2025, 06:44 PM ISTUpdated : Mar 27, 2025, 09:21 PM IST
ಆಪ್ತ ಬಾಂಧವ ಧನ್ವೀರ್ ಸಹಾಯಕ್ಕೂ ಬರ್ಲಿಲ್ಲ ದರ್ಶನ್.. 'ವಾಮನ'ನಿಂದಲೂ ದೂರ ಉಳಿದ್ದಿದ್ದೇಕೆ?

ಸಾರಾಂಶ

ಪ್ರಸನ್ನ ಚಿತ್ರಮಂದಿರದಲ್ಲಿ ದರ್ಶನ್ ಬರುವ ನಿರೀಕ್ಷೆಯೊಂದಿಗೆ ಸಾವಿರಾರು ಅಭಿಮಾನಿಗಳು ಸೇರಿದ್ದರು. ಆದರೆ, ಅಲ್ಲಿಗೆ ದರ್ಶನ್ ಬರಲಿಲ್ಲ. ಧನ್ವೀರ್ ನಟನೆಯ ವಾಮನ ಟ್ರೈಲರ್ ರಿಲೀಸ್ ಆಗಿದೆ. ದರ್ಶನ್ ಅಭಿಮಾನಿಗಳು ಧನ್ವೀರ್ ಗೌಡ..

ಹೌದು, ಕನ್ನಡದ ಸ್ಟಾರ್ ನಟ ದರ್ಶನ್ (Darshan Thoogudeepa) ಅವರು 'ವಾಮನ' ಸಿನಿಮಾದ 'ಟ್ರೈಲರ್ ಲಾಂಚ್​​'ಗೂ ಬರಲಿಲ್ಲ. ಧನ್ವಿರ್ ಗೌಡ (Dhanveer Gowda) ನಟನೆಯ 'ವಾಮನ' (Vamana Trailer) ಚಿತ್ರದ ಟ್ರೈಲರ್ ರಿಲೀಸ್ ಈವೆಂಟ್‌ನಿಂದಲೂ ನಟ ದರ್ಶನ್ ದೂರ ಉಳಿಇದ್ದು ಹಲವು ಊಹಾಪೋಹಗಳಿಗೆ ಕಾರಣ ಆಗಲಿರುವುದಂತೂ ಖಂಡಿತ. ಇಂದು ನಟ ಹಾಗೂ ದರ್ಶನ್ ಆಪ್ತಮಿತ್ರ, ಆಪ್ತ ಬಾಂಧವ ಧನ್ವೀರ್ ಗೌಡ ನಟನೆಯ 'ವಾಮನ ಚಿತ್ರದ ಟ್ರೈಲರ್ ಬಿಡುಗಡೆ ಆಗಿದೆ. ಅಲ್ಲಿ ಖಂಡಿತವಾಗಿಯೂ ನಟ ದರ್ಶನ್‌ ತೂಗುದೀಪ ಅವರ 'ದರ್ಶನ' ಆಗಲಿದೆ ಎಂದೇ ಎಲ್ಲರೂ ಭಾವಿಸಿದ್ದರು. ಅದರೆ.. ದರ್ಶನ್ ಬರಲೇ ಇಲ್ಲ. 

ಹೌದು, ಧನ್ವೀರ್ ನಟನೆಯ ವಾಮನ ಟ್ರೈಲರ್ ಲಾಂಚ್​ಗೆ ಇವೆಂಟ್​ ನಿಂದಲೂ ನಟ ದರ್ಶನ್ ದೂರವುಳಿದಿದ್ದಾರೆ. ಅಲ್ಲಿಗೆ ನಟ ದರ್ಶನ್‌ ಬಗೆಗಿನ ಹಲವರ ಲೆಕ್ಕಾಚಾರ ಸುಳ್ಆಗಿದೆ. ದರ್ಶನ್ ಅಲ್ಲಿಗೆ ಬರಲಿಲ್ಲ, ಕೇಳಬೇಕಾಗಿದ್ದ ಪ್ರಶ್ನೆ, ಸಿಗಬೇಕಾಗಿದ್ದ ಉತ್ತರ ಯಾವುದೂ ಕೂಡ ಸಿಗಲಿಲ್ಲ. ಆದರೆ, ಟ್ರೈಲರ್ ನೋಡಿ, ವಿಡಿಯೋ ಬೈಟ್  ಮೂಲಕ ವಾಮನ ತಂಡಕ್ಕೆ ಆಲ್ ದಿ ಬೆಸ್ಟ್ ಹೇಳಿದ ದರ್ಶನ್. ಅಲ್ಲಿಗೆ 'ಇಲ್ಲಿಗೀ ಈ ಕಥೆ ಮುಗಿಯಿತು..' ಎಂಬಂತೆ ಆಟ ಆಡಿದ್ದಾರೆ ದರ್ಶನ್.

ಅಭಿಷೇಕ್ ಅಂಬರೀಷ್ ಮಗನ ನಾಮಕರಣ ಶಾಸ್ತ್ರ, 'ಮದರ್ ಇಂಡಿಯಾ' ಮನೆ ಫಂಕ್ಷನ್‌ಗೆ ಜೋಡೆತ್ತು ಬರಲಿಲ್ಲ..! 

ಪ್ರಸನ್ನ ಚಿತ್ರಮಂದಿರದಲ್ಲಿ ದರ್ಶನ್ ಬರುವ ನಿರೀಕ್ಷೆಯೊಂದಿಗೆ ಸಾವಿರಾರು ಅಭಿಮಾನಿಗಳು ಸೇರಿದ್ದರು. ಆದರೆ, ಅಲ್ಲಿಗೆ ದರ್ಶನ್ ಬರಲಿಲ್ಲ. ಧನ್ವೀರ್ ನಟನೆಯ ವಾಮನ ಟ್ರೈಲರ್ ರಿಲೀಸ್ ಆಗಿದೆ. ದರ್ಶನ್ ಅಭಿಮಾನಿಗಳು ಧನ್ವೀರ್ ಗೌಡ ಅವರ ಅಭಿಮಾನಿಗಳೂ ಸಹ ಆಗಿರುವುದರಿಂದ ದರ್ಶನ್ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಅಲ್ಲಿ ಸೇರಿದ್ದಾರೆ. ಆದರೆ, ಅವರ 'ಡಿ ಬಾಸ್' ಅಲ್ಲಿ ಬರಲೇ ಇಲ್ಲ. ನಿಜ ಹೇಳಬೇಕು ಎಂದರೆ, ನಟ ದರ್ಶನ್ ಇವತ್ತು ಬೆಂಗಳೂರಿನಲ್ಲಿ ಇಲ್ಲ. ಅವರು ರಾಜಸ್ಥಾನದಲ್ಲಿ 'ದಿ ಡೆವಿಲ್' ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ.

ವಕೀಲರ ಸಲಹೆ ಮೇರೆಗೆ ಇನ್ನಷ್ಟು ಕಾಲ ಸಾರ್ವಜನಿಕ ಕಾರ್ಯಕ್ರಮಗಳಿಂದ ದೂರ ಉಳಿಯಲು ದರ್ಶನ್ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಅವರು ಆಪ್ತ ಧನ್ವೀರ್ ಗೌಡ ಸೇರಿದಂತೆ ಯಾವುದೇ ಕಾರ್ಯಕ್ರಮಗಳೀಗೆ ಸದ್ಯ ಹಾಜರಿ ಹಾಕೋದಿಲ್ಲ ಎನ್ನಲಾಗಿದೆ. ಇವಿಷ್ಟ ನಟ ದರ್ಶನ್, ಧನ್ವೀರ್ ಹಾಗೂ ವಾಮನ ಟ್ರೈಲರ್ ಲಾಂಚ್ ಕಥೆ.. ಇಲ್ಲಿಗೆ ಈ ಕಥೆ ಮುಗಿಯಿತು..!

ಶಿವರಾಜ್‌ಕುಮಾರ್‌ಗೆ 'ಬಾರಿಸಿ' ಎಂದಿದ್ದ ಡಾ ರಾಜ್‌ಕುಮಾರ್.. ಸಿಹಿ ಕಹಿ ಚಂದ್ರು ಹೊಡೆದ್ರು, ಆದ್ರೆ..

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ವೆಡ್ಡಿಂಗ್ ಸೀಸನ್ ಶುರು, ಆದ್ರೆ ನನ್ನ ಮದುವೆ...... ಏನ್ ಹೇಳಿದ್ರು Sanvi Sudeep
ಡಿಸೆಂಬರ್‌ಗೆ ಸ್ಯಾಂಡಲ್‌ವುಡ್‌ ದಬ್ಬಾಳಿಕೆ: ಡೆವಿಲ್‌, 45, ಮಾರ್ಕ್‌ ಮೂವರು ಸೂಪರ್‌ಸ್ಟಾರ್‌ಗಳ ಮಹಾಯುದ್ಧ