ಕಾಪಿ ರೈಟ್ ಉಲ್ಲಂಘಟನೆ: ರಕ್ಷಿತ್ ಶೆಟ್ಟಿ 20 ಲಕ್ಷ ಠೇವಣಿ ಇಡುವಂತೆ ದೆಹಲಿ ಹೈಕೋರ್ಟ್ ಆದೇಶ!

Published : Aug 17, 2024, 03:44 PM ISTUpdated : Aug 17, 2024, 04:02 PM IST
ಕಾಪಿ ರೈಟ್ ಉಲ್ಲಂಘಟನೆ: ರಕ್ಷಿತ್ ಶೆಟ್ಟಿ 20 ಲಕ್ಷ ಠೇವಣಿ ಇಡುವಂತೆ ದೆಹಲಿ ಹೈಕೋರ್ಟ್ ಆದೇಶ!

ಸಾರಾಂಶ

ನಟ, ನಿರ್ದೇಶಕ ರಕ್ಷಿತ್ ಶೆಟ್ಟಿಗೆ ಕಾಪಿ ರೈಟ್ಸ್ ಉಲ್ಲಂಘನೆ ಆರೋಪದಲ್ಲಿ ದೆಹಲಿ ಹೈಕೋರ್ಟ್ 20 ಲಕ್ಷ ರೂಪಾಯಿ ಠೇವಣಿ ಇಡುವಂತೆ ಸೂಚಿಸಿದೆ. 'ಬ್ಯಾಚುಲರ್ ಪಾರ್ಟಿ' ಸಿನಿಮಾದಲ್ಲಿ ಹಾಡುಗಳನ್ನು ಅನಧಿಕೃತವಾಗಿ ಬಳಸಿಕೊಂಡ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು (ಆ.17): ನಟ,ನಿರ್ದೇಶಕ ರಕ್ಷಿತ್ ಶೆಟ್ಟಿಗೆ 20 ಲಕ್ಷ ರೂಪಾಯಿ ಠೇವಣಿ ಇಡುವಂತೆ ದೆಹಲಿ ಹೈಕೋರ್ಟ್ ನಿರ್ದೇಶನ ನೀಡಿದೆ. ಕಾಪಿ ರೈಟ್ಸ್ ಉಲ್ಲಂಘನೆ ಆರೋಪದಲ್ಲಿ ರಕ್ಷಿತ್ ಶೆಟ್ಟಿ ಸಿಲುಕಿದ್ದು,  ಎಂಆರ್.ಟಿ ಮ್ಯೂಸಿಕ್ ಸಂಸ್ಥೆ ದೆಹಲಿ ಹೈಕೋರ್ಟ್ ಮೆಟ್ಟಿಲು ಏರಿತ್ತು. ಆದರೆ ರಕ್ಷಿತ್ ಶೆಟ್ಟಿ ದೆಹಲಿ ಕೋರ್ಟ್ ಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ರಕ್ಷಿತ್ ಶೆಟ್ಟಿ ಮತ್ತು ಪರಂವಾ ಸ್ಟುಡಿಯೋಗೆ  ಕಾಪಿ ರೈಟ್‍ ಉಲ್ಲಂಘನೆಗಾಗಿ 20 ಲಕ್ಷ ಠೇವಣಿ ಇಡಲು ಮತ್ತು ಇನ್ಸ್ಟಾದಲ್ಲಿ ಶೇರ್ ಮಾಡಿರೋ ಹಾಡು ತಗೆಯುವಂತೆ ಆದೇಶ ಹೊರಡಿಸಿದೆ.

ರಕ್ಷಿತ್ ಶೆಟ್ಟಿ ವಿರುದ್ಧ ನ್ಯಾಯ ಎಲ್ಲಿದೆ ಸಾಂಗ್ ಕಾಪಿ ರೈಟ್ಸ್ ಉಲ್ಲಂಘನೆಯ ಆರೋಪ  ಇದ್ದು,  ಬ್ಯಾಚುಲರ್ಸ್ ಪಾರ್ಟಿ ಸಿನಿಮಾಗಾಗಿ  ನ್ಯಾಯ ಎಲ್ಲಿದೆ ಸಾಂಗ್ ಅನಧಿಕೃತವಾಗಿ ಬಳಕೆ ಮಾಡಿದ್ದಾರೆಂಬ ದೂರಿದೆ. ರಕ್ಷಿತ್ ಶೆಟ್ಟಿ ಒಡೆತನದ ಪರಂವಾ ಸ್ಟುಡಿಯೋಸ್ ನಿರ್ಮಾಣ ಮಾಡಿರುವ  ‘ಬ್ಯಾಚುಲರ್‌ ಪಾರ್ಟಿ’ ಸಿನಿಮಾದಲ್ಲಿ ‘ನ್ಯಾಯ ಎಲ್ಲಿದೆ’, ‘ಒಮ್ಮೆ ನಿನ್ನನ್ನು..’ ಹಾಡುಗಳನ್ನು ಅನುಮತಿ ಪಡೆಯದೆ ,ಕಾನೂನು ಬಾಹಿರವಾಗಿ ಬಳಕೆ ಮಾಡಿಕೊಂಡಿದ್ದಾರೆಂದು ಆರೋಪಿಸಿ ಕೇಸ್ ದಾಖಲಾಗಿತ್ತು.

ಗಿಚ್ಚಿಗಿಲಿ ಗಿಲಿ ಧನರಾಜ್‌ ಆಚಾರ್‌ ಸ್ಟ್ರಗಲ್‌ ಸ್ಟೋರಿ, ಊಟಕ್ಕೂ ಪರದಾಡುವಾಗ ಹಣಕ್ಕಾಗಿ ಕಳ್ಳರ ದಾಳಿ!

ಈ ಸಂಬಂಧ MRT ಮ್ಯೂಸಿಕ್ ಸಂಸ್ಥೆಯ ನವೀನ್ ಕುಮಾರ್ ದೂರು ನೀಡಿದ್ದರು. ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಆಗಿತ್ತು. ಕಾಪಿ ರೈಟ್ಸ್ ಆ್ಯಕ್ಸ್ ಸೆ. 63 ರಡಿ ಅನುಮತಿ ಇಲ್ಲದೇ ಹಾಡು ಬಳಕೆ ಮಾಡಿದ ಆರೋಪದಲ್ಲಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಕೇಸ್ ದಾಖಲು ಮಾಡಲಾಗಿತ್ತು. ನಟ ರಕ್ಷಿತ್ ಠಾಣೆಗೆ ವಿಚಾರಣೆಗೆ ಕೂಡ ಹಾಜರಾಗಿದ್ದರು.

ಸೋನಲ್ ಜೊತೆಗೆ ಬ್ಲಾಕ್ ಬಸ್ಟರ್ ಜೀವನ ಆರಂಭಿಸೋಕೆ ತರುಣ್ ಸುಧೀರ್ ರೆಡಿ, ಮುದ್ದಾದ ಫೋಟೊ ಹಂಚಿಕೊಂಡ ಜೋಡಿ

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಭಾರತೀಯ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಸಿನಿಮಾ: ‘45’ ಟ್ರೇಲರ್ ಬಿಡುಗಡೆಗೆ ಕೌಂಟ್‌ಡೌನ್
ಶಾರುಖ್ ಪುತ್ರ ಆರ್ಯನ್ ಖಾನ್ ಕನ್ನಡಿಗರ ಜೊತೆ ಅಸಭ್ಯ ವರ್ತನೆ ಮಾಡಿಲ್ಲ: ಸಚಿವ ಜಮೀರ್ ಪುತ್ರ ಹೇಳಿದ್ದೇನು?