
ಸ್ಯಾಂಡಲ್ವುಡ್ ಆ್ಯಕ್ಷನ್ ಪ್ರಿನ್ಸ್ ಎಂದೇ ಫೇಮಸ್ ಆಗಿರುವ ಧ್ರುವ ಸರ್ಜಾ ಅಂದರೆ, ಜನವರಿ 22 ರಂದು ತಮ್ಮ ಇಬ್ಬರು ಮಕ್ಕಳಿಗೆ ಅದ್ಧೂರಿಯಾಗಿ ನಾಮಕರಣ ಮಾಡಿದ್ದು, ಕಾರ್ಯಕ್ರಮದಲ್ಲಿ ಬಂಧುಗಳು ಮತ್ತು ಸಿನಿಮಾ ತಾರೆಯರು ಆಗಮಿಸಿದ್ದರು. ಧ್ರುವ ಸರ್ಜಾ ಮತ್ತು ಪ್ರೇರಣಾ (Prerana) ದಂಪತಿ ಮಕ್ಕಳಿಗೆ ದೇವರ ಹೆಸರನ್ನಿಡುವ ಮೂಲಕ ಅಭಿಮಾನಿಗಳ ಕುತೂಹಲಕ್ಕೆ ತೆರೆ ಎಳೆದಿದ್ದರು. ಮಗಳಿಗೆ ರುದ್ರಾಕ್ಷಿ ಮತ್ತು ಮಗನಿಗೆ ಹಯಗ್ರೀವ ಎಂದು ನಾಮಕರಣ ಮಾಡಿದ್ದಾರೆ. ಅಷ್ಟಕ್ಕೂ ಹನುಮ ಭಕ್ತನಾಗಿರುವ ಧ್ರುವ ಸರ್ಜಾ ಅವರು ಮಕ್ಕಳ ನಾಮಕರಣಕ್ಕೆ ಜನವರಿ 22 ಆಯ್ಕೆ ಮಾಡಿಕೊಳ್ಳುವ ಹಿಂದೆಯೂ ಬಹುದೊಡ್ಡ ಉದ್ದೇಶವೇ ಇದೆ. ಅದು ಎಲ್ಲರಿಗೂ ತಿಳಿದಿರುವಂತೆ ಅಯೋಧ್ಯೆಯಲ್ಲಿ ಅಂದು ಬಾಲರಾಮನ ಪ್ರಾಣಪ್ರತಿಷ್ಠಾಪನೆ ನಡೆದಿತ್ತು. ಅದೇ ದಿನ ಹನುಮ ಭಕ್ತ ಧ್ರುವ ಮಕ್ಕಳಿಗೆ ನಾಮಕರಣ ನೆರವೇರಿಸಿದ್ದಾರೆ. ಧ್ರುವ ಸರ್ಜಾ ಮಕ್ಕಳ ನಾಮಕರಣವನ್ನು ಮಾವ ಅರ್ಜುನ್ ಸರ್ಜಾ ಮುಂದೆ ನಿಂತು ನಡೆಸಿಕೊಟ್ಟಿದ್ದಾರೆ.
ಆಗ್ಗಾಗ್ಗೆ ಹನುಮಾನ ದೇಗುಲಗಳಿಗೆ ಭೇಟಿ ಕೊಟ್ಟು ವಿಶೇಷ ಪೂಜೆಯನ್ನೂ ನೆರವೇರಿಸುತ್ತಿರುತ್ತಾರೆ. 24 ನವೆಂಬರ್ 2019ರಂದು ಧ್ರುವ ಸರ್ಜಾ ಹಾಗೂ ಪ್ರೇರಣಾ ಶಂಕರ್ ಮದುವೆಯಾಗಿದ್ದರು. ಮದುವೆಯಾಗಿ ಮೂರು ವರ್ಷಗಳ ನಂತರ, ಅಂದರೆ 2022ರ ಅಕ್ಟೋಬರ್ 2 ರಂದು ಪ್ರೇರಣಾ, ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಇದಾದ ಬಳಿಕ ಕಳೆದ ಸಪ್ಟೆಂಬರ್ 18ರಂದು ಎರಡನೆಯ ಮಗುವಿನ ಪಾಲಕರಾಗಿದ್ದಾರೆ ಧ್ರುವ ಮತ್ತು ಪ್ರೇರಣಾ. ಇದೀಗ ಎರಡೂ ಮಕ್ಕಳ ಲಾಲನೆ ಪಾಲನೆಯಲ್ಲಿದ್ದಾರೆ ಪ್ರೇರಣಾ. ಆಗಾಗ್ಗೆ ಮಗಳ ಕ್ಯೂಟ್ ವಿಡಿಯೋಗಳನ್ನು ಶೇರ್ ಮಾಡಿಕೊಳ್ಳುತ್ತಿರುತ್ತಾರೆ. ಎರಡನೆಯ ಮಗು ಹುಟ್ಟಿದರೂ ಮೊದಲ ಮಗಳ ಹೆಸರನ್ನು ಇವರು ರಿವೀಲ್ ಮಾಡಿರಲಿಲ್ಲ. ಕೊನೆಗೂ ಇಬ್ಬರ ನಾಮಕರಣ ಮಾಡಿ ಫ್ಯಾನ್ಸ್ ಕಾತರಕ್ಕೆ ತೆರೆ ಎಳೆದರು.
ಸೀತಾರಾಮ ಲವ್ ಸ್ಟೋರಿ ಶೂಟಿಂಗ್ ಹೇಗಿತ್ತು? ಸುಂದರ ಕ್ಷಣಗಳ ವಿಡಿಯೋ ರಿಲೀಸ್ ಮಾಡಿದ ವಾಹಿನಿ...
ಇದೀಗ ಪುಟಾಣಿ ತಮ್ಮನಿಗೆ ರುದ್ರಾಕ್ಷಿ ಲಾಲಿ ಹಾಡುತ್ತಾ ತೊಟ್ಟಿಲಲ್ಲಿ ಮಲಗಿಸುತ್ತಿದ್ದು ಅದರ ವಿಡಿಯೋ ವೈರಲ್ ಆಗಿದೆ. ತಮ್ಮ ಪುಟ್ಟು ತಮ್ಮನನ್ನು ಮುದ್ದುಮಾಡುವ ಈ ಪುಟಾಣಿ ಅಕ್ಕನ ಲಾಲಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಹಾರ್ಟ್ ಇಮೋಜಿಗಳಿಂದ ಕಮೆಂಟ್ ಬಾಕ್ಸ್ ತುಂಬಿ ಹೋಗಿದೆ.
ಅಷ್ಟಕ್ಕೂ ತಮ್ಮ ಮಕ್ಕಳಿಗೆ ರುದ್ರಾಕ್ಷಿ (Rudrakshi) ಮತ್ತು ಹಯಗ್ರೀವ (Hayagreeva) ಹೆಸರು ಇಟ್ಟಿರುವ ಬಗ್ಗೆ ಈ ಹಿಂದೆಯೇ ದಂಪತಿ ಹೇಳಿದ್ದರು.ಮಕ್ಕಳಿಗೆ ಯಾವುದೇ ಫ್ಯಾನ್ಸಿ ಹೆಸರು ಇಡಬಾರದು, ಜೊತೆಗೆ ಒತ್ತಕ್ಷರ ಇರುವಂತಹ ಹೆಸರು ಇಟ್ಟರೆ ಒಳ್ಳೆಯದು ಎನ್ನುವ ಕಾರಣಕ್ಕೆ ಮಕ್ಕಳಿಗೆ ದೇವರಿಗೆ ಸಂಬಂಧಿಸಿದ ಹೆಸರನ್ನು ಇಡಲಾಗಿದೆ ಎಂದಿದ್ದರು. ನಾಮಕರಣದ ಹಿನ್ನೆಲೆಯಲ್ಲಿ ಫೋಟೋ ಮಕ್ಕಳ ಜೊತೆ ಫೋಟೋ ಶೂಟ್ (Photoshoot) ಮಾಡಿಸಿಕೊಂಡಿರುವ ಧ್ರುವ ಸರ್ಜಾ ದಂಪತಿಗಳು, ಅವುಗಳ ವಿಡಿಯೋ ಮಾಡಿ ಮಕ್ಕಳ ಹೆಸರುಗಳನ್ನು ರಿವೀಲ್ ಮಾಡುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದಕ್ಕೂ ಶ್ಲಾಘನೆಗಳ ಮಹಾಪೂರವೇ ಹರಿದು ಬಂದಿತ್ತು.
ಅಮೂಲ್ಯ ಮಕ್ಕಳಿಗೆ 2ನೇ ಹುಟ್ಟುಹಬ್ಬ: ಮೊದಲ ಬಾರಿ ವಿಮಾನ ಹತ್ತಿ ಶಿರಡಿ ದರ್ಶನ- ನಟಿ ಹೇಳಿದ್ದೇನು?
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.