ಮೇಘನಾ ರಾಜ್‌ ಭೇಟಿ ಮಾಡಲು ಬರೋದಾ ಎಂದ ಪನ್ನಗಾಭರಣ ಪುತ್ರ; ವಿಡಿಯೋ ವೈರಲ್!

By Suvarna NewsFirst Published Nov 29, 2020, 12:05 PM IST
Highlights

 ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ ಪನ್ನಗಾಭರಣ ಪುತ್ರನ ವಿಡಿಯೋ. ಜೂನಿಯರ್ ಚಿರು ನೋಡಲು ಮನೆಗೆ ಬರಬೋದಾ? 

ಸ್ಯಾಂಡಲ್‌ವುಡ್‌ ಯುವ ನಟ ಚಿರಂಜೀವಿ ಸರ್ಜಾ ನಮ್ಮಿಂದ ಅಗಲಿದರೂ ಇನ್ನೂ ಇಲ್ಲೇ ಎಲ್ಲೋ ಇದ್ದಾರೆ ಎಂಬ ಭಾವನೆ ಹುಟ್ಟುತ್ತದೆ. ಜೂನಿಯರ್ ಚಿರು ಆಗಮನದ ನಂತರ ಸರ್ಜಾ ಹಾಗೂ ಸುಂದರ್ ರಾಜ್‌ ಕುಟುಂಬದಲ್ಲಿ ಸಂತೋಷದ ವಾತಾವರಣ ಸೃಷ್ಟಿಯಾಗಿದೆ.  ಕಷ್ಟದ ಸಮಯದಲ್ಲಿ ಮೇಘನಾಗೆ ಬೆನ್ನೆಲುಬಾಗಿ ನಿಂತ ಸ್ನೇಹಿತರು ಅಪಾರ. 

ಮೇಘನಾ ರಾಜ್‌ ಪುತ್ರನಿಗೆ ಕಿಚ್ಚ ಸುದೀಪ್‌ ಕೊಟ್ಟ ಸ್ಪೇಷಲ್ ಗಿಫ್ಟ್! 

ಇತ್ತೀಚಿಗೆ ನಿರ್ದೇಶಕ ಪನ್ನಗಾಭರಣ ಪುತ್ರ ವೇದ್ ಮೇಘನಾ ರಾಜ್‌ ಹಾಗೂ ಜೂನಿಯರ್ ಚಿರುನನ್ನು ಭೇಟಿ ಮಾಡಬೇಕೆಂದು ಮಾಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಅಗುತ್ತಿದೆ. 'ಬಾಕ್ಸ್‌ ನೋಡೋಕೆ ಬರೋದು. ಪಾಪ ನೋಡೋಕೆ ಬರೋದ ಮೇಘು' ಎಂದು ನಗು ನಗುತ್ತಾ ಕಂದಮ್ಮ ಮಾತನಾಡಿದೆ. ಈ ವಿಡಿಯೋವನ್ನು ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಮೇಘನಾ ಶೇರ್ ಮಾಡಿಕೊಂಡಿದ್ದಾರೆ.

 

ಕೆಲವು ದಿನಗಳ ಹಿಂದೆ ಜೂನಿಯರ್‌ ಚಿರು ತೊಟ್ಟಿಲು ಶಾಸ್ತ್ರ ಮಾಡಲಾಗಿತ್ತು. ಮಗುವಿಗೆ ಹೆಸರು ಇನ್ನೂ ಫೈನಲ್ ಮಾಡಿಲ್ಲ ಎಂದು ಮೇಘನಾ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.  ಚಿರು ಸ್ನೇಹಿತರು ಮೇಘನಾಗೆ ಜೊತೆಯಾಗಿ ನಿಂತಿದ್ದಾರೆ. ಸೀಮಂತ ಶಾಸ್ತ್ರದಲ್ಲಿ ಚಿರು ಫೋಟೋವನ್ನು ಪೋಸ್ಟರ್ ರೀತಿಯಲ್ಲಿ ನಿಲ್ಲಿಸುವ ಪ್ಲಾನ್ ಮಾಡಿದ್ದೇ ಪನ್ನಗಾಭರಣ ಎನ್ನಲಾಗಿದೆ.

ಮೇಘನಾ ಇನ್ನು ನಾಲ್ಕು ತಿಂಗಳ ಗರ್ಭಿಣಿಯಾಗಿರುವಾಗಲೇ ಪತಿ, ಸ್ಯಾಂಡಲ್‌ವುಡ್‌ನ ಭರವಸೆಯ ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಕೊನೆಯುಸಿರೆಳೆದರು.

click me!