ನಟ ಸಂಚಾರಿ ವಿಜಯ್‌ ಪೂರ್ಣ ಚಿಕಿತ್ಸಾ ವೆಚ್ಚ ಭರಿಸಲು ಮುಂದೆ ಬಂದ ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ

Suvarna News   | Asianet News
Published : Jun 14, 2021, 11:31 AM ISTUpdated : Jun 14, 2021, 11:32 AM IST
ನಟ ಸಂಚಾರಿ ವಿಜಯ್‌ ಪೂರ್ಣ ಚಿಕಿತ್ಸಾ ವೆಚ್ಚ ಭರಿಸಲು ಮುಂದೆ ಬಂದ ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ

ಸಾರಾಂಶ

ಅಫೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಸಂಚಾರಿ ವಿಜಯ್ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸಲು ಮುಂದಾದ ಡಿಸಿಎಂ, ಖುದ್ದು ಆಸ್ಪತ್ರೆ ಮುಖ್ಯಸ್ಥರಿಗೆ ಕರೆ ಮಾಡಿ ತಿಳಿಸಿದ ಡಾ.ಸಿ.ಎನ್.‌ಅಶ್ವತ್ಥನಾರಾಯಣ.

ಬೆಂಗಳೂರು: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಷ್ಟ್ರ ಪ್ರಶಸ್ತಿ ವಿಜೇತ ಕನ್ನಡ ನಟ ಸಂಚಾರಿ ವಿಜಯ್ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಭರಿಸಲು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಮುಂದೆ ಬಂದಿದ್ದಾರೆ.

ಇಂದು ಬೆಳಗ್ಗೆ ವಿಜಯ್‌ ಅವರು ಚಿಕಿತ್ಸೆ ಪಡೆಯುತ್ತಿರುವ ಅಪೋಲೋ ಆಸ್ಪತ್ರೆಯ ಆಡಳಿತ ವರ್ಗದ ಮುಖ್ಯಸ್ಥರಿಗೆ ಖುದ್ದಾಗಿ ಕರೆ ಮಾಡಿ ವಿಜಯ್‌ ಅವರ ಯೋಗ-ಕ್ಷೇಮ ವಿಚಾರಿಸಿದ ಡಿಸಿಎಂ, ಅವರ ಚಿಕಿತ್ಸೆ ಆಗುವ ಸಂಪೂರ್ಣ ವೆಚ್ಚವನ್ನು ತಮ್ಮ ನೇತೃತ್ವದ ಡಾ. ಸಿ.ಎನ್.ಅಶ್ವತ್ಥನಾರಾಯಣ ಫೌಂಡೇಶನ್‌ ಭರಿಸುತ್ತದೆ ಎಂದು ಭರವಸೆ ನೀಡಿದರು.

ಹೆಲ್ತ್ ಬುಲಿಟಿನ್ 'ಕೋಮಾದಲ್ಲಿದ್ದಾರೆ ವಿಜಯ್, ಏನೂ ಹೇಳಲು ಸಾಧ್ಯವಿಲ್ಲ' 

ವಿಜಯ್‌ ಅವರ ಚಿಕಿತ್ಸೆಗೆ ಸಂಬಂಧಿಸಿದಂತೆ ಅವರ ಸಂಬಂಧಿಗಳಿಂದಾಗಲೀ ಅಥವಾ ಬೇರೆ ಯಾರಿಂದಲೂ ಹಣ ಪಾವತಿಸಿಕೊಳ್ಳದಂತೆ ಅವರು ಆಸ್ಪತ್ರೆ ಆಡಳಿತ ವರ್ಗಕ್ಕೆ ಸೂಚಿಸಿದ್ದಾರೆ.

"

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Kichcha Sudeep: ರಣಹದ್ದಿನ ಬಗ್ಗೆ ಕಿಚ್ಚ ಸುದೀಪ್‌ ಹೇಳಿದ್ದೇನು? ನಿಜ ಏನು?
BBK 12 ಫಿನಾಲೆ ಬೆನ್ನಲ್ಲೇ ಹೊಸ ವಿವಾದ, ಗಿಲ್ಲಿ ನಟ ಅಶ್ವಿನಿ ಗೌಡ ಫ್ಯಾನ್ಸ್ ನಡುವೆ ಭಾಷೆ ಜೊತೆ ಜಾತಿ ಜಗಳ..!