
ಬೆಂಗಳೂರು: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಷ್ಟ್ರ ಪ್ರಶಸ್ತಿ ವಿಜೇತ ಕನ್ನಡ ನಟ ಸಂಚಾರಿ ವಿಜಯ್ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಭರಿಸಲು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಮುಂದೆ ಬಂದಿದ್ದಾರೆ.
ಇಂದು ಬೆಳಗ್ಗೆ ವಿಜಯ್ ಅವರು ಚಿಕಿತ್ಸೆ ಪಡೆಯುತ್ತಿರುವ ಅಪೋಲೋ ಆಸ್ಪತ್ರೆಯ ಆಡಳಿತ ವರ್ಗದ ಮುಖ್ಯಸ್ಥರಿಗೆ ಖುದ್ದಾಗಿ ಕರೆ ಮಾಡಿ ವಿಜಯ್ ಅವರ ಯೋಗ-ಕ್ಷೇಮ ವಿಚಾರಿಸಿದ ಡಿಸಿಎಂ, ಅವರ ಚಿಕಿತ್ಸೆ ಆಗುವ ಸಂಪೂರ್ಣ ವೆಚ್ಚವನ್ನು ತಮ್ಮ ನೇತೃತ್ವದ ಡಾ. ಸಿ.ಎನ್.ಅಶ್ವತ್ಥನಾರಾಯಣ ಫೌಂಡೇಶನ್ ಭರಿಸುತ್ತದೆ ಎಂದು ಭರವಸೆ ನೀಡಿದರು.
ಹೆಲ್ತ್ ಬುಲಿಟಿನ್ 'ಕೋಮಾದಲ್ಲಿದ್ದಾರೆ ವಿಜಯ್, ಏನೂ ಹೇಳಲು ಸಾಧ್ಯವಿಲ್ಲ'
ವಿಜಯ್ ಅವರ ಚಿಕಿತ್ಸೆಗೆ ಸಂಬಂಧಿಸಿದಂತೆ ಅವರ ಸಂಬಂಧಿಗಳಿಂದಾಗಲೀ ಅಥವಾ ಬೇರೆ ಯಾರಿಂದಲೂ ಹಣ ಪಾವತಿಸಿಕೊಳ್ಳದಂತೆ ಅವರು ಆಸ್ಪತ್ರೆ ಆಡಳಿತ ವರ್ಗಕ್ಕೆ ಸೂಚಿಸಿದ್ದಾರೆ.
"
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.