ಬಿಗ್‌ ಬಾಸ್‌ ಜಯಶ್ರೀ ಕೇಶ ಮುಂಡನಕ್ಕೇನು ಕಾರಣ? ಹೊಸ ಬಾಳಿಗೆ ಹೆಜ್ಜೆ ಇಟ್ಟ ನಟಿ!

Published : Jul 28, 2020, 09:20 PM ISTUpdated : Jul 28, 2020, 09:52 PM IST
ಬಿಗ್‌ ಬಾಸ್‌ ಜಯಶ್ರೀ ಕೇಶ ಮುಂಡನಕ್ಕೇನು ಕಾರಣ? ಹೊಸ ಬಾಳಿಗೆ ಹೆಜ್ಜೆ ಇಟ್ಟ ನಟಿ!

ಸಾರಾಂಶ

ಕಿಚ್ಚ ಸುದೀಪ್ ಮಾತಿನ ನಂತರ ಜಯಶ್ರೀ ಬದಲಾದ್ರಾ/  ಸೋಶಿಯಲ್ ಮೀಡಿಯಾದಲ್ಲಿ ಕೇಶ ಮಂಡನ ಮಾಡಿಕೊಂಡ ಪೋಟೋ ಅಪ್ ಲೋಡ್ ಮಾಡಿದ ನಟಿ/ ಸಾಯುವ ನಿರ್ಧಾರ ಮಾಡಿದ್ದೆ ಎಂದು ಹೇಳಿ ಆಸ್ಪತ್ರೆ ಸೇರಿದ್ದರು

ಬೆಂಗಳೂರು(ಜು. 27)  ಸೋಶಿಯಲ್ ಮೀಡಿಯಾದಲ್ಲಿ ಈ ಪ್ರಪಂಚಕ್ಕೆ ಗುಡ್ ಬೈ ಎಂದು ಹೇಳಿ ಶಾಕಿಂಗ್ ನ್ಯೂಸ್ ನೀಡಿದ್ದ ಬಿಗ್ ಬಾಸ್ ಜಯಶ್ರೀ ನಂತರ ಸ್ನೇಹಿತರ ಕಮೆಂಟ್ ಗಳು, ಭರವಸೆ ಮಾತಿನಿಂದ ನಾನು ಸುರಕ್ಷಿತವಾಗಿದ್ದೇನೆ ಎಂದು ತಿಳಿಸಿದ್ದರು. ಆದರೆ ಮತ್ತೆ ಫೇಸ್ ಬುಕ್ ಲೈವ್ ಬಂದು ನನಗೆ ಬದುಕಲು ಇಷ್ಟವಿಲ್ಲ ಸಾಯುತ್ತಿದ್ದೇನೆ ಎಂದು ಹೇಳಿದ್ದು ದೊಡ್ಡ ಸುದ್ದಿಯಾಗಿತ್ತು.

ನಾನು ಕಿಚ್ಚ ಸುದೀಪ್ ಜತೆ ಮಾತನಾಡಬೇಕು ಎಂದು ಹೇಳಿಕೊಂಡಿದ್ದರು. ಅದೆಲ್ಲ ಆದ ಮೇಲೆ ವಾತಾವರಣ ಈಗ ತಿಳಿಯಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಪೋಟೋ ಒಂದನ್ನು ಅಪ್ ಲೋಡ್ ಮಾಡಿರುವ ಜಯಶ್ರೀ ಹೊಸ ಬೆಳಗಿಗೆ ಮೊದಲಿನ ಹೆಜ್ಜೆ ಎಂದು ಕಮೆಂಟ್ ಬರೆದು ಪೋಟೋ ಒಂದನ್ನು ಹಾಕಿದ್ದಾರೆ.

ಈ ಒಂದು ಕಾರಣಕ್ಕೆ ಕಿಚ್ಚ ಸುದೀಪ್ ಭೇಟಿ ಮಾಡಬೇಕು ಎಂದಿದ್ದ ಜಯಶ್ರೀ

ಕೇಶ ಮಂಡನ ಮಾಡಿಸಿಕೊಂಡಿರುವ ಪೋಟೋ ಅಪ್ ಲೋಡ್ ಮಾಡಿದ್ದಾರೆ. ಕ್ಯಾನ್ಸರ್ ರೋಗಿಗಳ ನೆರವಿಗಾಗಿ ಕೂದಲನ್ನು ದಾನ ಮಾಡಿದ್ದಾರೆಂತೆ. ಏನೇ ಇರಲಿ ಕೆಟ್ಟ ನಿರ್ಧಾರದ ಕಡೆ ಹೊರಟಿದ್ದ ಜಯಶ್ರೀ ಹೊಸ ಬೆಳಗನ್ನು ನೋಡಿದ್ದು ಒಳ್ಳೆಯ ಸಂಗತಿ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಬಸ್‌ ಅಪಘಾತದಿಂದ ಪವಾಡಸದೃಶ್ಯವಾಗಿ ಪಾರಾದ 'ರಾಧಾ ಮಿಸ್‌' ಶ್ವೇತಾ ಪ್ರಸಾದ್‌!
ಮುಸ್ಲಿಮರ ವಿರುದ್ಧ ದ್ವೇಷದ ಅಸ್ತ್ರವಾಗಿ ವಂದೇ ಮಾತರಂ ಬಳಸಲಾಗ್ತಿದೆ: ನಟ ಕಿಶೋರ್‌ ಆಕ್ರೋಶ!