ವೀರ ಯೋಧನಾದ ಸೂಪರ್ ಹೀರೋ, ಅಶೋಕ ಚಕ್ರವರ್ತಿಯ 9 ರಹಸ್ಯಕಥೆ ಹೇಳಲಿರುವ ತೇಜ್ ಸಜ್ಜಾ!

Published : Apr 19, 2024, 12:29 PM ISTUpdated : Apr 19, 2024, 12:32 PM IST
ವೀರ ಯೋಧನಾದ ಸೂಪರ್ ಹೀರೋ, ಅಶೋಕ ಚಕ್ರವರ್ತಿಯ 9 ರಹಸ್ಯಕಥೆ ಹೇಳಲಿರುವ ತೇಜ್ ಸಜ್ಜಾ!

ಸಾರಾಂಶ

ಹನುಮಾನ್ ನಲ್ಲಿ ಸೂಪರ್ ಹೀರೋ ಆಗಿದ್ದ ತೇಜ್ ಸಜ್ಜಾ ಈಗ ಸೂಪರ್ ಯೋಧನಾಗಿ ಪ್ರತ್ಯಕ್ಷರಾಗಿದ್ದಾರೆ. ಕೈಯಲ್ಲಿ ಸ್ಟಾಫ್ಟ್ ಸ್ಟಿಕ್ ಹಿಡಿದು ದುಷ್ಟರನ್ನು ಸಂಹರಿಸಲು ಪಣ ತೊಟ್ಟಿದ್ದಾರೆ..

ಹನುಮಾನ್ ಸಿನಿಮಾ ಮೂಲಕ ಸೂಪರ್ ಸಕ್ಸಸ್ ಕಂಡಿರುವ ತೆಲುಗಿನ ಯುವ ನಟ ತೇಜ್ ಸಜ್ಜಾ ಹೊಸ ಸಿನಿಮಾ ಅನೌನ್ಸ್ ಆಗಿದೆ. ಕಾರ್ತಿಕೇಯ, ಕಾರ್ತಿಕೇಯ-2 , ಧಮಾಕ ಸೇರಿದಂತೆ ಹಲವು ಹಿಟ್ ಚಿತ್ರ ಕೊಟ್ಟಿರುವ ಕಾರ್ತಿಕ್ ಗಟ್ಟಮ್ನೇನಿ ತೇಜ್ ಸಜ್ಜಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಜೋಡಿಯ ಹೊಸ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಝಲಕ್ ಇಂದು ಅನಾವರಣಗೊಂಡಿದೆ.

ಹನುಮಾನ್ ನಲ್ಲಿ ಸೂಪರ್ ಹೀರೋ ಆಗಿದ್ದ ತೇಜ್ ಸಜ್ಜಾ ಈಗ ಸೂಪರ್ ಯೋಧನಾಗಿ ಪ್ರತ್ಯಕ್ಷರಾಗಿದ್ದಾರೆ. ಕೈಯಲ್ಲಿ ಸ್ಟಾಫ್ಟ್ ಸ್ಟಿಕ್ ಹಿಡಿದು ದುಷ್ಟರನ್ನು ಸಂಹರಿಸಲು ಪಣ ತೊಟ್ಟಿದ್ದಾರೆ. ಅದಕ್ಕಾಗಿ ತೇಜ್ ಸಜ್ಜಾ ಹೊಸ ಅವತಾರವನ್ನೇ ತಾಳಿದ್ದಾರೆ. 

ನಟ ಕುಮಾರ್ ಗೋವಿಂದ್‌ಗೆ 'ಓಂ' ಸಿನಿಮಾ ಕೈ ತಪ್ಪಿಸಿದ್ಯಾರು, 'ಶ್' ಸಿನಿಮಾ ಮಾಡುವಂತಾಗಿದ್ದು ಯಾಕೆ?

ಕಾರ್ತಿಕ್ ಗಟ್ಟಮ್ನೇನಿ ಹಾಗೂ ತೇಜ್ ಸಜ್ಜಾ ಹೊಸ ಸಿನಿಮಾ ಮಿರಾಯ್ ಎಂಬ ಟೈಟಲ್ ಇಡಲಾಗಿದೆ. ಮಿರಾಯ್ ಎಂದರೆ ಭವಿಷ್ಯ ಎಂದರ್ಥ. ಅಶೋಕ ಚಕ್ರವರ್ತಿ ಹಾಗೂ ಆತನ 9 ರಹಸ್ಯದ ಕಥೆಯನ್ನು ಬಿಚ್ಚಿಡುವ ಮಿರಾಯ್ ವಿಷ್ಯುವಲ್ ಟ್ರೀಟ್ ನೋಡುಗರಿಗೆ ಹಬ್ಬದಂತಿದೆ. 

ಅಂಬರೀಷ್ ಕೈ ತಪ್ಪಿ 'ಬಂಧನ' ಸಿನಿಮಾ ವಿಷ್ಣುವರ್ಧನ್ ಪಾಲಾಗಿದ್ದು ಹೇಗೆ, ಘಟನೆ ಹಿಂದಿನ ಅಸಲಿಯತ್ತೇನು ?

ಮಿರಾಯ್ ಸಿನಿಮಾಗಾಗಿ ತೇಜ್ ಸಜ್ಜಾ ಕೋಲು ಕಾಳಗ ಕಲಿತಿದ್ದಾರೆ. ಪ್ರತಿ ಫ್ರೇಮ್ ನ್ನು ಕಾರ್ತಿಕ್ ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ. ಗೌರ ಹರಿ ಸಂಗೀತ ತೂಕ ಹೆಚ್ಚಿಸಿದೆ. ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿಯಡಿ ಟಿಜಿ ವಿಶ್ವಪ್ರಸಾದ್ ಮಿರಾಯ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ನಟ ಮೋಹನ್‌ಲಾಲ್‌ ಭೇಟಿಯಾದ 'ಕಾಂತಾರ' ರಿಷಬ್ ಶೆಟ್ಟಿ; ಸಡನ್ ಭೇಟಿ-ಮಾತುಕತೆ ಮರ್ಮವೇನು?

ಕಾರ್ತಿಕ್ ಗಟ್ಟಮ್ನೇನಿ ಮಿರಾಯ್ ಗೆ ಚಿತ್ರಕಥೆಯನ್ನು ಬರೆದು ನಿರ್ದೇಶನ ಮಾಡುತ್ತಿದ್ದು, ಮಣಿಬಾಬು ಕರಣಂ ಅವರು ಸಂಭಾಷಣೆ ಬರೆದಿದ್ದಾರೆ. ಶ್ರೀ ನಾಗೇಂದ್ರ ತಂಗಳ ಕಲಾ ನಿರ್ದೇಶಕನ, ವಿವೇಕ್ ಕೂಚಿಭೋಟ್ಲ ಸಹ ನಿರ್ಮಾಪಕರಾಗಿದ್ದಾರೆ. ಕೃತಿ ಪ್ರಸಾದ್ ಕ್ರಿಯೇಟಿವ್ ನಿರ್ಮಾಪಕರಾಗಿದ್ದು, ಸುಜಿತ್ ಕುಮಾರ್ ಕೊಲ್ಲಿ ಕಾರ್ಯಕಾರಿ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮೂಡಿ ಬರ್ತಿರುವ ಮರೈ ಸಿನಿಮಾವನ್ನು ಏಪ್ರಿಲ್ 18 2025ರಂದು ತೆರೆಗೆ ತರಲು ಚಿತ್ರತಂಡ ಸಜ್ಜಾಗಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಕನ್ನಡಿಗರ ಪ್ರೀತಿಯ ಪುಟ್ಟಿ ಯಾಕ್ ಹೀಗಾದ್ರು? Rukmini Vasanth ನ್ಯೂ ಲುಕ್ ವೈರಲ್
ರಿಷಬ್‌ ಶೆಟ್ಟಿ, ವಿಜಯ್ ಕಿರಗಂದೂರು ವ್ಯಾಪಾರಿಗಳು, ದೈವಾರಾಧನೆಯನ್ನ ವ್ಯಾಪಾರಕ್ಕೆ ಹಾಕಿದ್ದಾರೆ: ದೈವಾರಾಧಕ ಬೇಸರ