ನರೇಂದ್ರ ಮೋದಿ ತವರಲ್ಲಿ 'ಜಸ್ಟ್ ಪಾಸ್' ಹಾಡಿನ ಮೋಡಿ; 'ನೋಡಿದ ಕೂಡಲೇ' ಏನಾಯ್ತು ಹೇಳ್ತೀರಾ!?

Published : Jan 14, 2024, 08:32 PM ISTUpdated : Jan 14, 2024, 08:39 PM IST
ನರೇಂದ್ರ ಮೋದಿ ತವರಲ್ಲಿ 'ಜಸ್ಟ್ ಪಾಸ್' ಹಾಡಿನ ಮೋಡಿ; 'ನೋಡಿದ ಕೂಡಲೇ' ಏನಾಯ್ತು ಹೇಳ್ತೀರಾ!?

ಸಾರಾಂಶ

ಕಲಾವಿದರಾದ ಶ್ರೀ ಹಾಗೂ ಪ್ರಣತಿ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ರಂಗಾಯಣ ರಘು, ಸಾಧುಕೋಕಿಲಾ, ಸುಚೇಂದ್ರ ಪ್ರಸಾದ್, ಪ್ರಕಾಶ್ ತುಮಿನಾಡು, ದೀಪಕ್ ರೈ, ಗೋವಿಂದೇಗೌಡ, ದಾನಪ್ಪ ಸೇರಿದಂತೇ ಹಲವರು 'ಜಸ್ಟ್ ಪಾಸ್' ತಾರಬಳಗದಲ್ಲಿದ್ದಾರೆ.

ಗುಜರಾತ್, ಸದ್ಯ ಇಡೀ ದೇಶದ ಗಮನ ಸೆಳೆದಿರೋ ಪ್ರಧಾನ ರಾಜ್ಯ. ಇಡೀ ಭಾರತದ ಆಡಳಿತ ಚುಕ್ಕಾಣಿ ಹಿಡಿದಿರೋ ಶ್ರೀ ನರೇಂದ್ರ ಮೋದಿಯವರ ತವರಿನ ಸಿರಿ. ಅಂಥ ಅದ್ಭುತ ನಾಡಲ್ಲಿ ಕನ್ನಡ ನಾಡಿನ ಹಾಡೊಂದರ ಚಿತ್ರೀಕರಣ ನಡೆದಿದೆ ಎಂದರೆ ನೀವು ನಂಬುತ್ತೀರಾ?! ಹೌದು, ಸದ್ಯ ಯುವ ಜೀವಗಳ ಹೆಗಲು ಕುಣಿಸಲು ರೆಡಿ ಆಗಿರೋ ಕೆ.ಎಂ. ರಘು ನಿರ್ದೇಶನದ ಜಸ್ಟ್ ಪಾಸ್ ಚಿತ್ರದ ‘ನೋಡಿದ ಕೂಡಲೇ’ ಎನ್ನೋ ಹಾಡನ್ನು ಅದೇ ಗುಜರಾತ್‌ನಲ್ಲಿ ಶೂಟ್ ಮಾಡಲಾಗಿದೆ. 

ಅಲ್ಲಿನ ರನ್ ಆಫ್ ಕಚ್, ಕಾಡಿಯಾದ್ರಿಯೋ,  ಮಾಂಡ್ವಿ ಬೀಚ್ ಸೇರಿದಂತೇ ಸಾಕಷ್ಟು ರಮ್ಯ ರಮಣೀಯ ನ್ಯಾಚುರಲ್ ಜಾಗಗಳಲ್ಲಿ ಚಿತ್ರೀಕರಣ ಮಾಡಲಾಗಿದೆ!
ಈ ಸುಮಧುರ ಹಾಡಿಗೆ ಯುವ ಸಂಗೀತ ನಿರ್ದೇಶಕ ಹರ್ಷವರ್ಧನ್ ರಾಜ್ ಸಂಗೀತ  ಸಂಯೋಜನೆ ಮಾಡಿದ್ದು, ಕಲರ್‌ಫುಲ್ ಗಾಯಕ ಕಾರ್ತಿಕ್ ದನಿಯಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ತನ್ನದೇ ಆದ ವಿಭಿನ್ನ ಶೈಲಿಯ ಮೂಲಕ ಹೆಸರು ಮಾಡಿರುವ ಡ್ಯಾನ್ಸ್ ಮಾಸ್ಟರ್ ಭೂಷಣ್ ನೃತ್ಯ ನಿರ್ದೇಶನ ಮಾಡಿದ್ದಾರೆ. 

ವರ್ತೂರು ಸಂತೋಷ್ ಔಟ್, ಸುತ್ತಾಡುತ್ತಿದೆ ಸುದ್ದಿ; ಗ್ರಾಂಡ್‌ ಫಿನಾಲೆ ಹೊಸ್ತಿಲಲ್ಲಿ ಎಡವಿಬಿದ್ರಾ ಸಂತು?!

ಸುಜಯ್ ಕುಮಾರ್ ಕ್ಯಾಮೆರಾ ಕೈಚಳಕದಲ್ಲಿ ಅದ್ಭುತ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ. ಕಾಂತಾರ ಖ್ಯಾತಿಯ ಗೀತ ರಚನೆಕಾರ ಪ್ರಮೋದ್ ಮರವಂತೆ ತುಂಬಾ ಚೆನ್ನಾಗಿ ಸಾಹಿತ್ಯ ಬರೆದಿದ್ದಾರಂತೆ! ಜಸ್ಟ್ ಪಾಸ್ ಚಿತ್ರವನ್ನ ರಾಯ್ಸ್ ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ಕೆ.ವಿ.ಶಶಿಧರ್ ನಿರ್ಮಾಣ ಮಾಡಿದ್ದು, ಕಾಂತಾರ, ಕಾಟೇರ ಮೊದಲಾದ ಯಶಸ್ವೀ ಚಿತ್ರಗಳ ಸಂಕಲನಕಾರ ಕೆ.ಎಂ. ಪ್ರಕಾಶ್ ಈ ಚಿತ್ರಕ್ಕೆ ಕತ್ತರಿ ಆಡಿಸಿದ್ದಾರೆ. 

ಕಾರ್ತಿಕ್-ಸಂಗೀತಾ ಬ್ರೇಕ್‌-ಅಪ್ ಕನ್ಫರ್ಮ್‌; ಮತ್ತೆ ಪ್ಯಾಚ್‌-ಅಪ್ ಆಗೋ ಬಗ್ಗೆ ಏನ್ ಹೇಳಿದ್ರು ಸಂಗೀತಾ!?

ಕಲಾವಿದರಾದ ಶ್ರೀ ಹಾಗೂ ಪ್ರಣತಿ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ರಂಗಾಯಣ ರಘು, ಸಾಧುಕೋಕಿಲಾ, ಸುಚೇಂದ್ರ ಪ್ರಸಾದ್, ಪ್ರಕಾಶ್ ತುಮಿನಾಡು, ದೀಪಕ್ ರೈ, ಗೋವಿಂದೇಗೌಡ, ದಾನಪ್ಪ ಸೇರಿದಂತೇ ಸಾಕಷ್ಟು ಪೋಷಕ ನಟರು ಜಸ್ಟ್ ಪಾಸ್ ಚಿತ್ರದ ಫಸ್ಟ್ ಕ್ಲಾಸ್ ತಾರಬಳಗದಲ್ಲಿದ್ದಾರೆ. ಫೆಬ್ರವರಿ ಮೊದಲ ವಾರದಲ್ಲಿ ಜಸ್ಟ್ ಪಾಸ್ ಚಿತ್ರ ರಾಜ್ಯಾದ್ಯಂತ ತೆರೆ ಕಾಣಲಿದ್ದು, ಈಗಾಗಲೇ ಚಿತ್ರದ ಟೀಸರ್ ಸಾಕಷ್ಟು ಸದ್ದು ಮಾಡಿ, ಯುವಕರಲ್ಲಿ ಹೆಚ್ಚಿನ ನಿರೀಕ್ಷೆ ಮೂಡಿಸಿದೆ.

ಬೀಟ್ ಗುರೂಸ್ ಸಂಗೀತ ಸಂಸ್ಥೆಯ ಮ್ಯೂಸಿಕ್ ಮಸ್ತಿಗೆ ಜೈ; ಸ್ಯಾಂಡಲ್‌ವುಡ್‌ ಅಂಗಳದಲ್ಲೂ 'ಡಿಜೆಂಬೆ' ಕಲರವ!

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಭಾರತೀಯ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಸಿನಿಮಾ: ‘45’ ಟ್ರೇಲರ್ ಬಿಡುಗಡೆಗೆ ಕೌಂಟ್‌ಡೌನ್
ಶಾರುಖ್ ಪುತ್ರ ಆರ್ಯನ್ ಖಾನ್ ಕನ್ನಡಿಗರ ಜೊತೆ ಅಸಭ್ಯ ವರ್ತನೆ ಮಾಡಿಲ್ಲ: ಸಚಿವ ಜಮೀರ್ ಪುತ್ರ ಹೇಳಿದ್ದೇನು?