ಸ್ಮಶಾನ ಕಾರ್ಮಿಕರ ಪರ ನಿಂತ ನಟ ಚೇತನ್; ಸಿಎಂಗೆ ಪತ್ರ!

Suvarna News   | Asianet News
Published : May 18, 2021, 04:03 PM IST
ಸ್ಮಶಾನ ಕಾರ್ಮಿಕರ ಪರ ನಿಂತ ನಟ ಚೇತನ್; ಸಿಎಂಗೆ ಪತ್ರ!

ಸಾರಾಂಶ

ಕೋವಿಡ್‌ ವಾರಿಯರ್‌ಗಳಾಗಿ ಕೆಲಸ ಮಾಡುತ್ತಿರುವ ಸ್ಮಶಾನ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ನಟ ಚೇತನ್‌ ಸಿಎಂಗೆ ಪತ್ರ ಬರೆದಿದ್ದಾರೆ. 

ಸ್ಯಾಂಡಲ್‌ವುಡ್‌ ನಟ ಚೇತನ್‌ ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಜನರ ಸೇವೆ ಮಾಡುತ್ತಿರುವ ಚೇತನ್‌, ಇದೀಗ ಸ್ಮಶಾನ ಕಾರ್ಮಿಕರ ಪರ ಧ್ವನಿ ಎತ್ತಿದ್ದಾರೆ. ತಲೆ ಮಾರುಗಳಿಂದ ಅವರು ಮುಂದಿಟ್ಟಿರುವ ಬೇಡಿಕೆಯನ್ನು ಸರ್ಕಾರ ನಿರ್ಲಕ್ಷ್ಯ ಮಾಡಿದೆ, ಈ ಪರಿಸ್ಥಿತಿಯಲ್ಲಿ ಅವರು ಸರ್ಕಾರದ ಜೊತೆ ನಿಂತು ಕೆಲಸ ಮಾಡುತ್ತಿರವುದಕ್ಕೆ ತಕ್ಷಣವೇ ಅವರ ದೀರ್ಘಕಾಲದ ಬೇಡಿಕೆ ಈಡೇರಿಸಲು ಸರಕಾರ ಮುಂದಾಗಬೇಕೆಂದು ಆಗ್ರಹಿಸಿ, ಮುಖ್ಯಮಂತ್ರಿ ಹಾಗೂ ಸಮಾಜಕಲ್ಯಾಣ ಸಚಿವರಿಗೆ ಪತ್ರ ಬರೆದಿದ್ದಾರೆ. 

ಪತ್ರದಲ್ಲಿರುವ ಶವಗಾರ ಕಾರ್ಮಿಕರ ಅಗತ್ಯಗಳು:

- ವೈದ್ಯಕೀಯ ವಿಮೆ

- ಕೋವಿಡ್‌ ವಾರಿಯರ್ಸ್ ಆದ ಇವರಿಗೆ ಆದ್ಯತೆ ಮೇರೆಗೆ ಆಸ್ಪತ್ರೆಯಲ್ಲಿ ಹಾಸಿಗೆ ಹಂಚಿಕೆ

- ಆದ್ಯತೆಯ ವ್ಯಾಕ್ಸಿನೇಷನ್.

- ಈಗಾಗಲೇ ಒದಗಿಸಿರುವ ಪಿಪಿಇ ಕಿಟ್‌ಗಳ ಜೊತೆ, ಕೈಗವಸುಗಳು  ಮತ್ತು ಮುಖವಾಡಗಳು

ರೈತರ ಪರ ಧ್ವನಿ ಎತ್ತಿದ ನಟ ಚೇತನ್; ಅದ್ಭುತ ಮಾತುಗಳಿಗೆ ನೆಟ್ಟಿಗರು ಫಿದಾ! 

- ಕೆಲಸದ ಅವಧಿಗಿಂತ ಹೆಚ್ಚಿನ ಸಮಯ ಕೆಲಸ ಮಾಡಿದರೆ, ಅದಕ್ಕೆ ಅವರ ಪಾವತಿಯನ್ನು ಹೆಚ್ಚಿಸಬೇಕು.

- ಕೆಲಸದ ಹೊರೆ ಹೆಚ್ಚಿಗೆಯಾದ ಕಾರಣ ಉದ್ಯೋಗಿಗಳ ಸಂಖ್ಯೆಯನ್ನು ಹೆಚ್ಚಿಸಬೇಕು.

- 4ನೇ ದರ್ಜೆಯ, ಡಿ-ಗ್ರೂಪ್ ಸರ್ಕಾರಿ ನೌಕರರಾಗಿ ಶಾಶ್ವತ ಉದ್ಯೋಗ ಕಲ್ಪಿಸಬೇಕು.

- ಇಎಸ್‌ಐ ಮತ್ತು ಪಿಎಸ್‌ಗೆ ಅವಕಾಶ ಕಲ್ಪಿಸಿಕೊಡು.

- ಸ್ಮಶಾನದ ಆವರಣದ ಹೊರಗೆ ವಸತಿ ಕಲ್ಪಿಸಬೇಕು.

- ಕೆಲಸದ ಸಮಯವನ್ನು 8 ಗಂಟೆ ಶಿಫ್ಟ್‌ಗೆ ಸೀಮಿತಗೊಳಿಸಬೇಕು.

- ಸ್ಮಶಾನ ಕಾರ್ಮಿಕರ ಮಕ್ಕಳಿಗೆ ಗುಣಮಟ್ಟದ ಶಾಲೆಗಳಲ್ಲಿ ಉಚಿತ ಶಿಕ್ಷಣ ನೀಡಬೇಕು.

- ಎಲ್ಲಾ ಧಾರ್ಮಿಕ ಸಮುದಾಯಗಳ ಸ್ಮಶಾನ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳು ದೊರೆಯಬೇಕು.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಭಾರತೀಯ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಸಿನಿಮಾ: ‘45’ ಟ್ರೇಲರ್ ಬಿಡುಗಡೆಗೆ ಕೌಂಟ್‌ಡೌನ್
ಶಾರುಖ್ ಪುತ್ರ ಆರ್ಯನ್ ಖಾನ್ ಕನ್ನಡಿಗರ ಜೊತೆ ಅಸಭ್ಯ ವರ್ತನೆ ಮಾಡಿಲ್ಲ: ಸಚಿವ ಜಮೀರ್ ಪುತ್ರ ಹೇಳಿದ್ದೇನು?