ಕನ್ನಡ ಚಿತ್ರರಂಗದ 'ಮಯೂರ'ನಿಗೆ ಹುಟ್ಟುಹಬ್ಬದ ಶುಭಾಶಯಗಳು ಹೇಳಿದ ದರ್ಶನ್!

Suvarna News   | Asianet News
Published : Apr 24, 2020, 04:19 PM ISTUpdated : Apr 24, 2020, 04:41 PM IST
ಕನ್ನಡ ಚಿತ್ರರಂಗದ 'ಮಯೂರ'ನಿಗೆ ಹುಟ್ಟುಹಬ್ಬದ ಶುಭಾಶಯಗಳು ಹೇಳಿದ ದರ್ಶನ್!

ಸಾರಾಂಶ

ವರನಟ ಡಾ.ರಾಜ್‌ಕುಮಾರ್‌ ಹುಟ್ಟುಹಬ್ಬದ ಸವಿನೆನಪಿನಲ್ಲಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌.

ಡಾ.ರಾಜ್‌ಕುಮಾರ್ ಅವರ ಪುಣ್ಯತಿಥಿ  ಹಾಗೂ ಹುಟ್ಟಿದ ಹಬ್ಬ ಎರಡೂ ಒಂದೇ ತಿಂಗಳಲ್ಲಿ ಬರುವುದರಿಂದ ಏಪ್ರಿಲ್ ತಿಂಗಳನ್ನೂ  ಕನ್ನಡ ಸಿನಿ ರಸಿಕರು ರಾಜ್‌ ಮಾಸ ಅಂತಲೇ ಆಚರಿಸುತ್ತಾರೆ.  ಏಪ್ರಿಲ್‌ 24 ಚಿತ್ರರಂಗಕ್ಕೆ ಶುಭ ದಿನವೆಂದು ಭಾವಿಸಿ ಸಿನಿಮಾ  ಮುಹೂರ್ತ, ಪೋಸ್ಟರ್‌ ರಿಲೀಸ್‌ ಹಾಗೂ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾರೆ. 

ಕೊರೋನಾ ಲಾಕ್‌ಡೌನ್‌ ಇರುವ ಕಾರಣ ಕುಟುಂಬಸ್ಥರು ಅಣ್ಣಾವ್ರ  ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಾರೆ. ಈಗಾಗಲೇ  ಶಿವರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್ ಹಾಗೂ ಪುನೀತ್‌ ಕುಟುಂಬ ಪೂಜೆ ಸಲ್ಲಿಸಿದ್ದಾರೆ. ಈ ವಿಶೇಷ ದಿನದಂದು ರಾಜ್‌ಕುಮಾರ್‌ ಮೊಮ್ಮಗ ಯುವರಾಜ್‌ಕುಮಾರ್ ಅವರ ಚೊಚ್ಚಲ ಸಿನಿಮಾದ ಪೋಸ್ಟರ್‌ ರಿಲೀಸ್‌ ಮಾಡುತ್ತಿದ್ದಾರೆ ಈ  ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ . 

ಬದುಕಿನ ಸ್ಫೂರ್ತಿ ಈ 'ಬಂಗಾರದ ಮನುಷ್ಯ'; ಮುತ್ತುರಾಜರ ಭಂಡಾರದಿಂದ ಮುತ್ತಿನ ಮಾತು!

ಸ್ಯಾಂಡಲ್‌ವುಡ್‌ ಬಾಕ್ಸ್ ಆಫೀಸ್‌ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ರಾಜ್‌ಕುಮಾರ್‌ ಹುಟ್ಟುಹಬ್ಬಕ್ಕೆ  ಟ್ಟಿಟರ್‌ನಲ್ಲಿ ಶುಭಕೋರಿದ್ದಾರೆ. 'ವರನಟ ಡಾ|| ರಾಜ್ ಕುಮಾರ್ ರವರ ಹುಟ್ಟುಹಬ್ಬದ ಸವಿನೆನಪಿನಲ್ಲಿ. ಅಣ್ಣಾವ್ರು ತಮ್ಮ ಪಾತ್ರಗಳ ಹಾಗೂ ಆದರ್ಶಮಯ ಜೀವನದ ಮೂಲಕ ಕನ್ನಡ ನಾಡಿನ ಮನೆ ಮನಗಳಲ್ಲಿ ಚಿರಸ್ಥಾಯಿಯಾಗಿ ಉಳಿದಿದ್ದಾರೆ. ನಿಮ್ಮ ದಾಸ ದರ್ಶನ್ ' ಎಂದು ರಾಬರ್ಟ್‌ ಚಿತ್ರತಂಡದ ವತಿಯಿಂದ ಶುಭಕೋರಿದ್ದಾರೆ.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಭಾರತೀಯ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಸಿನಿಮಾ: ‘45’ ಟ್ರೇಲರ್ ಬಿಡುಗಡೆಗೆ ಕೌಂಟ್‌ಡೌನ್
ಶಾರುಖ್ ಪುತ್ರ ಆರ್ಯನ್ ಖಾನ್ ಕನ್ನಡಿಗರ ಜೊತೆ ಅಸಭ್ಯ ವರ್ತನೆ ಮಾಡಿಲ್ಲ: ಸಚಿವ ಜಮೀರ್ ಪುತ್ರ ಹೇಳಿದ್ದೇನು?