
ಅಭಿಮಾನಿಗಳೇ ಸೇರಿಕೊಂಡು ದರ್ಶನ್ ನಿವಾಸದ ಸುತ್ತಮುತ್ತ ಕಟೌಟ್ಗಳು, ಹೂವಿನ ಅಲಂಕಾರ ಸೇರಿದಂತೆ ಹಲವು ರೀತಿಯಲ್ಲಿ ಸಿಂಗಾರ ಮಾಡಿದ್ದಾರೆ. ಈ ನಡುವೆ ದರ್ಶನ್ ಅವರ ಮನವಿ ಮೇರೆಗೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸುವ ಅಭಿಮಾನಿಗಳು ಅಕ್ಕಿ, ಬೇಳೆ, ದವಸ, ಧಾನ್ಯ ಮುಂತಾದ ಆಹಾರ ಸಾಮಗ್ರಿಗಳನ್ನು ನೀಡಲಿದ್ದು, ಅಭಿಮಾನಿಗಳು ನೀಡಿದ್ದನ್ನು ದರ್ಶನ್ ಅವರೇ ಮುಂದೆ ನಿಂತು ರಾಜ್ಯದ ಬೇರೆ ಬೇರೆ ಭಾಗಗಳಲ್ಲಿರುವ ಅನಾಥಾಶ್ರಮಗಳಿಗೆ ರವಾನಿಸಲಿದ್ದಾರೆ.
ಡಿ-ಬಾಸ್ ಬರ್ತಡೇ: 'ರಾಬರ್ಟ್' ಟೀಸರ್ ಹವಾ ಶುರು!
ಈ ಬಾರಿ ಚಾಲೆಂಜಿಂಗ್ ಸ್ಟಾರ್ ಹುಟ್ಟುಹಬ್ಬಕ್ಕೆ ತರುಣ್ ಸುಧೀರ್ ನಿರ್ದೇಶನದ ‘ರಾಬರ್ಟ್’ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಜತೆಗೆ ಒಂದಿಷ್ಟುಹೊಸ ಚಿತ್ರಗಳು ಘೋಷಣೆ ಆಗುವ ಸಾಧ್ಯತೆ ಇದೆ. ಇನ್ನು, ಬಹು ನಿರೀಕ್ಷೆಯ ‘ರಾಜವೀರ ಮದಕರಿ ನಾಯಕ’ ಚಿತ್ರತಂಡದಿಂದ ಪೋಸ್ಟರ್ ಬಿಡುಗಡೆ ಮಾಡುವ ಸಾಧ್ಯತೆಗಳು ಇವೆ. ಸದ್ಯಕ್ಕೆ ಕೇರಳದ ಕಾಡಿನಲ್ಲಿ ಈ ಚಿತ್ರದ ಶೂಟಿಂಗ್ ನಡೆಯುತ್ತಿದ್ದು, ಚಿತ್ರೀಕರಣವನ್ನು ನಿಲ್ಲಿಸಿ ಹುಟ್ಟುಹಬ್ಬಕ್ಕಾಗಿಯೇ ದರ್ಶನ್ ಬೆಂಗಳೂರಿಗೆ ಬರುತ್ತಿದ್ದಾರೆ.
ನೀವು ದರ್ಶನ್ ಫ್ಯಾನಾಗಿದ್ರೆ ಈ ಫಿಲ್ಮ್ ಮಿಸ್ ಮಾಡ್ದೇ ನೋಡ್ಬೇಕು!
ಫೆಬ್ರವರಿ 16ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.