ಧ್ರುವ ಸರ್ಜಾ ಮದುವೆಗೆ ಸಾಕ್ಷಿಯಾದ 'ರಾಮ-ಆಂಜನೇಯ'!

Published : Nov 25, 2019, 03:53 PM IST
ಧ್ರುವ ಸರ್ಜಾ ಮದುವೆಗೆ ಸಾಕ್ಷಿಯಾದ 'ರಾಮ-ಆಂಜನೇಯ'!

ಸಾರಾಂಶ

  'ಪೊಗರು' ಹುಡುಗನ ಮದುವೆಗೆ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಬಂದು ನವಜೋಡಿಗೆ ಶುಭ ಹಾರೈಸಿದ್ದಾರೆ. ಮದುವೆಗೆ ಸಾಮಾನ್ಯವಾಗಿ ಉಡುಗೊರೆ, ಹೂಗುಚ್ಛ ಹಿಡಿದುಕೊಂಡು ಬಂದು ಹಾರೈಸಿದರು, ಅಭಿಮಾನಿಗಳು ತುಸು ಭಿನ್ನವಾಗಿ ಬಂದಿದ್ದಾರೆ. ಧ್ರುವಾ ಸರ್ಜಾ ಆರಾಧ್ಯ ದೈವ ಆಂಜನೇಯ ಹಾಗೂ ರಾಮನ ವೇಷದಲ್ಲಿ ಬಂದು ಗಮನ ಸೆಳೆದಿದ್ದಾರೆ.

 

ಕನ್ನಡ ಚಿತ್ರರಂಗದಲ್ಲಿ ಪಂಚ್‌ ಡೈಲಾಗ್‌ ಹೇಳುವ ಮೂಲಕ ಪ್ರೇಕ್ಷಕರ ಗಮನ ಸೆಳೆದಿರುವ ಧ್ರುವ ಸರ್ಜಾ ಆರತಕ್ಷತೆಗೆ ತನ್ನ ಅಭಿಮಾನಿಗಳನ್ನು ಸ್ಪೆಶಲ್ ಆಗಿ ಆಹ್ವಾನಿಸಿದ್ದಾರೆ. ಇಂದು ಜೆ.ಪಿ.ನಗರದ ಸಂಸ್ಕೃತಿ ಬೃಂದಾವನದಲ್ಲಿ ಆರತಕ್ಷತೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ಧ್ರುವ ಸರ್ಜಾ ಆರತಕ್ಷತೆಗೆ ನಿಮ್ಮ ನೆಚ್ಚಿನ ಸ್ಟಾರ್ ಬಂದಿದ್ರಾ? ಹೋಗೋಣ ಬನ್ನಿ

 

ವೈಟ್‌ ಆ್ಯಂಡ್ ಪಿಂಕ್‌ ಡಿಸೈನರ್‌ ವೇರ್‌ನಲ್ಲಿ ಕಂಗೊಳಿಸುತ್ತಿರುವ ಧ್ರುವ ಹಾಗೂ ಪ್ರೇರಣಾ ಪ್ರತಿಯೊಬ್ಬ ಅಭಿಮಾನಿಯನ್ನು ಮಾತನಾಡಿಸಿದ್ದಾರೆ. ಅವರಿಗೆ ಔತಣ ಕೂಟವನ್ನು ಹಮ್ಮಿಕೊಂಡಿದ್ದಾರೆ. ಕೆಲ ಫ್ಯಾನ್ಸ್‌ ರಿಸೆಪ್ಷನ್ ಹಾಲ್ ಮುಂಭಾಗ ಆವರಣದಲ್ಲಿ ಕಿದ್ವಾಯಿ ಅವರೊಂದಿಗೆ ಕೈ ಜೋಡಿಸಿ ರಕ್ತದಾನ ಆಯೋಜನೆ ಮಾಡಿದ್ದಾರೆ. ಇನ್ನು ಅಂಜನೇಯನ ಭಕ್ತನಾದ ಧ್ರುವಾಗೆ ಸರ್ಪ್ರೈಸ್‌ ನೀಡಲು ಅಭಿಮಾನಿಯೊಬ್ಬರು ರಾಮ-ಹನುಮನ ಅವತಾರ ಧರಿಸಿ ಬಂದು ಎಲ್ಲರ ಗಮನ ಸೆಳೆದಿದ್ದರು.

ಅಭಿಮಾನಿಗಳನ್ನು ದೇವರೆಂದು ಭಾವಿಸುವ ಧ್ರುವ ಸರ್ಜಾ ಯಾವುದೇ ಭೇದ- ಭಾವ ಮಾಡದೇ ಅವರಿಗೂ ದುಬಾರಿ ಲಗ್ನ ಪತ್ರಿಕೆಯನ್ನು ನೀಡಿದ್ದಾರೆ. ನವೆಂಬರ್ 24 ರಂದು ಧ್ರುವ-ಪ್ರೇರಣಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು ಕುಟುಂಬಸ್ಥರು ಮತ್ತು ಕನ್ನಡ ಚಿತ್ರರಂಗದ ಗಣ್ಯರು ಸಾಕ್ಷಿಯಾಗಿದ್ದರು.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಟಾಕ್ಸಿಕ್ ಪೋಸ್ಟರ್ ರಿಲೀಸ್ ಮಾಡಿ ಕುತೂಹಲ ಹೆಚ್ಚಿಸಿದ ಯಶ್, ಸಿನಿಮಾ ಬಿಡುಗಡೆ ಕೌಂಟ್‌ಡೌನ್ ಶುರು
ಕನ್ನಡಿಗರ ಪ್ರೀತಿಯ ಪುಟ್ಟಿ ಯಾಕ್ ಹೀಗಾದ್ರು? Rukmini Vasanth ನ್ಯೂ ಲುಕ್ ವೈರಲ್