ಒಳ್ಳೆಯ ಸಾವು ಕೊಡಪ್ಪ ದೇವರೇ; 3 ವರ ಬೇಡಿದ ದ್ವಾರಕೀಶ್ ಮಾತುಗಳು ವೈರಲ್

Published : Apr 17, 2024, 11:26 AM ISTUpdated : Apr 20, 2024, 11:21 AM IST
ಒಳ್ಳೆಯ ಸಾವು ಕೊಡಪ್ಪ ದೇವರೇ; 3 ವರ ಬೇಡಿದ ದ್ವಾರಕೀಶ್ ಮಾತುಗಳು ವೈರಲ್

ಸಾರಾಂಶ

ನಟ ದ್ವಾರಕೀಶ್‌ ಹಲವು ವರ್ಷಗಳ ಹಿಂದೆ ನೀಡಿದ ಸಂದರ್ಶನದಲ್ಲಿ ಹೇಳಿದ ಮಾತುಗಳು ಈಗ ಮತ್ತೊಮ್ಮೆ ವೈರಲ್ ಆಗುತ್ತಿದೆ. ದೇವರಲ್ಲಿ ಬೇಡುವ 3 ವರ ಯಾವುದು ಗೊತ್ತಾ? 

ಪ್ರಚಂಡ ಕುಳ್ಳ ಎಂದೇ ಖ್ಯಾತಿ ಪಡೆದಿದ್ದ ಕನ್ನಡ ಚಿತ್ರರಂಗದ ಹಿರಿಯ ಕಲಾವಿದ, ನಿರ್ಮಾಪಕ ಹಾಗೂ ನಿರ್ದೇಶಕ ದ್ವಾರಕೀಶ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಸ್ವಗೃಹದಲ್ಲಿ ನಿಧನರಾಗಿರುವ ದ್ವಾರಕೀಶ್ ಅದೇ ಗೃಹ ಕೆಲವು ವರ್ಷಗಳ ಹಿಂದೆ ನೀಡಿದ ಸಂದರ್ಶನದ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ತುಂಬಾನೇ ವೈರಲ್ ಆಗುತ್ತಿದೆ. 

ಸಿನಿಮಾ ಜರ್ನಿ ಹೇಗಿತ್ತು, ಮಕ್ಕಳು-ಮೊಮ್ಮಕ್ಕಳು ಹೇಗಿದ್ದಾರೆ? ಏನು ಮಾಡುತ್ತಿದ್ದಾರೆ? ಜೀವನ ಹೇಗಿದೆ? ಆರೋಗ್ಯ ಹೇಗಿದೆ ಎಂದು ತುಂಬಾ ಕ್ಯಾಶುಯಲ್ ಆಗಿ ಮಾತನಾಡಿರುವ ಸಂದರ್ಶನದಲ್ಲಿ ನಿರೂಪಕ ಕೇಳಿದ ಪ್ರಶ್ನೆ 'ಭಗವಂತ ದ್ವಾರಕೀಶ್ ಅವರ ಮುಂದೆ ನಿಂತುಕೊಳ್ಳುತ್ತಾರೆ, ಏನು ಬೇಕು ಎಂದು ಕೇಳಿದರೆ ಏನು ಕೇಳುತ್ತೀರಿ?'. ಇದ್ದಕ್ಕೆ ಕೊಟ್ಟ ಉತ್ತರ ಇಲ್ಲಿದೆ.

ಹುಣಸೂರು ದ್ವಾರಕೀಶ್ ಚುನಾವಣಾ ನಂಟು

'ನಾನು ಹೇಳುವ ಉತ್ತರ ಆಶ್ಚರ್ಯ ಆಗುತ್ತೆ ನಿಮಗೆ. ಯಾರಿಗೂ ತೊಂದರೆ ಕೊಡದೆ ನೆಮ್ಮದಿಯಾಗಿ ಹೋಗಬೇಕು ಅನ್ನೋದು ಅವನ ಅಭಿಲಾಷೆ. ಹೇಗೆ ಮನೆ ಮಾಡಬೇಕು, ಕಾರು ಖರೀದಿಸಬೇಕು ಮತ್ತು ಬಂಗಲೇ ಕಟ್ಟಬೇಕು ಅಂತ ಆಸೆ ಕಟ್ಟಿಕೊಂಡಿರುತ್ತಾನೆ ಅದೇ ತರ ಒಳ್ಳೆಯ ಸಾವು ಬರಲಿ ಎಂದು ದೇವರಲ್ಲಿ ಬೇಡಿಕೊಳ್ಳುತ್ತಾರೆ. ನಾನು ಕೂಡ ಅದನ್ನು ಕೇಳುತ್ತೀನಿ. ನನ್ನ ಮಗ ಸಿನಿಮಾ ಮಾಡುತ್ತಿದ್ದಾನೆ ಅವನಿಗೆ ಯಶಸ್ಸು ಕೊಡಲಿ ದೇವರು ಅವನಿಗೆ ಒಳ್ಳೆಯದು ಮಾಡಿ ಆಶೀರ್ವಾದ ಮಾಡಲಿ ದೇವರು ಅಂತ ಕೇಳಿಕೊಳ್ಳುತ್ತೀನಿ. ಇರೋವರೆಗೂ ಒಳ್ಳೆ ಅರೋಗ್ಯ ಕೊಡು ಅಂತ ದೇವರಲ್ಲಿ ಕೇಳಿಕೊಳ್ಳುತ್ತೀನಿ. ಈ ಮೂರನ್ನು ಕೇಳಿಕೊಳ್ಳುವುದು ಎಂದು ದ್ವಾರಕೀಶ್ ಹೇಳಿದ್ದಾರೆ.

 

ವಿಷ್ಣುವರ್ಧನ್‌ ಜೊತೆಗೆ ಬಿರುಕು ಮೂಡಿದ್ಯಾಕೆ? ದಾದಾ ಬಗ್ಗೆ ದ್ವಾರಕೀಶ್ ನಿಜವಾಗ್ಲೂ ಆ ಮಾತು ಹೇಳಿದ್ರಾ!

ಡಾ, ರಾಜ್‌ಕುಮಾರ್ ಕಟ್ಟಾಭಿಮಾನಿ ಆಗಿದ್ದ ದ್ವಾರಕೀಶ್ ತಮ್ಮ ಆರಂಭದ ಚಿತ್ರಗಳಲ್ಲಿ ರಾಜ್‌ಕುಮಾರ್ ಫೋಟೋ, ಸಂಭಾಷಣೆ ಕೂಡ ಬಳಸುತ್ತಿದ್ದರು. ಚಿತ್ರರಂಗದ ಬಹುತೇಕ ನಟರ ಜತೆ ಏಕವಚನದಲ್ಲಿ ಮಾತಾಡುವ ಸಲಿಗೆ ಹೊಂದಿದ್ದರು. ಪತ್ರಕರ್ತರ ಜತೆಗೂ ಸೌಹಾರ್ದ ಸಂಬಂಧ ಇಟ್ಟುಕೊಂಡಿದ್ದ ದ್ವಾರಕೀಶ್, ಚಿತ್ರರಂಗದ ರಹಸ್ಯಗಳನ್ನು ಕೂಡ ಆಗಾಗ ಹೇಳುತ್ತಿದ್ದರು.ಸಾಹಸ, ದಿಟ್ಟತನ, ಹಠಮಾರಿತನ, ಪ್ರತಿಭೆ ಇವೆಲ್ಲದರ ಸಂಗಮದಂತೆ ಇದ್ದವರು ದ್ವಾರಕೀಶ್. ಅವರು ತನ್ನನ್ನು ಕರ್ನಾಟಕದ ಕುಳ್ಳ ಅಂತಲೇ ಕರೆದುಕೊಳ್ಳುತ್ತಿದ್ದರು. ಆದರೆ ಎಲ್ಲರಿಗಿಂತ ಎತ್ತರಕ್ಕೆ ಬೆಳೆದು ನಿಂತರು. ಮಹಾನ್ ನಟರ ಚಿತ್ರಗಳನ್ನು ನಿರ್ಮಿಸಿದರು, ನಿರ್ದೇಶಿಸಿದರು. ಕನ್ನಡ ಚಿತ್ರರಂಗದ ಸಾಧ್ಯತೆಗಳನ್ನು ತೋರಿಸಿದರು. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಈಗ್ಲೇ ದರ್ಶನ್ 'ಡೆವಿಲ್'ಗೆ ಯಾಕೆ ಟೆನ್ಷನ್..? ನರ್ತಕಿ ಚಿತ್ರಮಂದಿರದ ಮೇಲೆ ಬೇರೆ ಸ್ಟಾರ್‌ಗಳ ಕಣ್ಣು ಬಿತ್ತಾ?
ಬೆಂಗಳೂರಿನಲ್ಲಿ ಬಿಗ್ ಮ್ಯೂಸಿಕಲ್ ನೈಟ್; JAM JUNXION"ನಲ್ಲಿ ಚಂದನ್ ಶೆಟ್ಟಿ ಸೇರಿದಂತೆ ಪ್ರಸಿದ್ಧ ಬ್ಯಾಂಡ್ ಧಮಾಕಾ!