
ನಂದ ಕಿಶೋರ್ ನಿರ್ದೇಶನದಲ್ಲಿ ನಟನೆ
ನಿರ್ದೇಶಕ ಸುಮಂತ್ ಕ್ರಾಂತಿ ಈಗ ನಿರ್ಮಾಪಕರಾಗಿದ್ದಾರೆ. ನಾನಿ, ಕಾಲಚಕ್ರ ಹಾಗೂ ಬರ್ಕ್ಲಿ ಚಿತ್ರಗಳ ನಿರ್ದೇಶಕರೇ ಈ ಸುಮಂತ್ ಕ್ರಾಂತಿ. ಈಗ ನಂದಕಿಶೋರ್ ನಿರ್ದೇಶನದ ಚಿತ್ರಕ್ಕೆ ನಿರ್ಮಾಪಕರಾಗಿದ್ದಾರೆ. ಇದು ಪ್ರಜ್ವಲ್ ದೇವರಾಜ್ ನಟನೆಯ ಚಿತ್ರ. ಹುಟ್ಟು ಹಬ್ಬದ ಅಂಗವಾಗಿ ಈ ಹೊಸ ಚಿತ್ರವನ್ನು ಘೋಷಣೆ ಮಾಡಲಾಯಿತು. ಹೊಸ ನಿರ್ದೇಶಕನೊಬ್ಬ ಬಿಗ್ ಬಜೆಟ್ ಸಿನಿಮಾ ನಿರ್ಮಿಸುತ್ತಿರುವುದು ವಿಶೇಷ. ಇದೀಗ ಪ್ರಿಪ್ರೊಡಕ್ಷನ್ ಕೆಲಸಗಳಿಗೆ ಚಾಲನೆ ದೊರೆತಿದ್ದು, ಸದ್ಯದಲ್ಲೇ ಚಿತ್ರದ ಟೈಟಲ್ ಹಾಗೂ ಫಸ್ಟ್ ಲುಕ್ ರಿಲೀಸ್ ಮಾಡುವುದಾಗಿ ನಿರ್ಮಾಪಕ ಸುಮಂತ್ ಕ್ರಾಂತಿ ತಿಳಿಸಿದ್ದಾರೆ.
ವೀರಂ ಟೀಸರ್ ಬಿಡುಗಡೆ
ಶಶಿಧರ್ ನಿರ್ಮಾಣ ಹಾಗೂ ಖದರ್ ಕುಮಾರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚಿತ್ರ ವೀರಂ. ಪ್ರಜ್ವಲ್ ದೇವರಾಜ್ ಭಿನ್ನ ಬಗೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಜ್ವಲ್ ಅವರ ಹುಟ್ಟುಹಬ್ಬದ ಪ್ರಯುಕ್ತ ಆನಂದ್ ಆಡಿಯೋ ಮೂಲಕ ಈ ಚಿತ್ರದ ಟೀಸರ್ ಬಿಡುಗಡೆ ಆಗಿದೆ. ಪ್ರಜ್ವಲ್ ದೇವರಾಜ್ಗೆ ನಾಯಕಿಯಾಗಿ ರಚಿತಾರಾಮ್ ಅವರು ಕಾಣಿಸಿಕೊಂಡಿದ್ದಾರೆ. ಗ್ಲೂಗಿ, ಶಿವಲಿಂಗ, ಶ್ರಾವಣಿ ಸುಬ್ರಹ್ಮಣ್ಯ ಮುಂತಾದ ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಖದರ್ ಕುಮಾರ್ ಈ ಚಿತ್ರದ ಮೂಲಕ ಮೊದಲ ಬಾರಿಗೆ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಇದೊಂದು ಮಾಸ್ ಎಂಟರ್ಟೈನ್ಮೆಂಟ್ ಕತೆ ಹೊಂದಿರುವ ಚಿತ್ರ. ಈ ಸಿನಿಮಾದಲ್ಲಿ ಶ್ರೀನಗರ ಕಿಟ್ಟಿ ಅವರು ವಿಶೇಷವಾದ ಪಾತ್ರವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ.
ಸಾವು ನೋವಿನಲ್ಲಿ ಹುಟ್ಟುಹಬ್ಬವೇಕೆ?: ಪ್ರಜ್ವಲ್ ದೇವರಾಜ್
ಫಸ್ಟ್ ಲುಕ್, ಟೈಟಲ್ ಬಿಡುಗಡೆ
ಗುರುದತ್ ಗಾಣಿಗ ನಿರ್ದೇಶನದಲ್ಲಿ ಪ್ರಜ್ವಲ್ ದೇವರಾಜ್ ಸಿನಿಮಾ ಮಾಡುತ್ತಾರೆಂಬುದು ಗೊತ್ತಿರುವ ಸುದ್ದಿ. ಈಗ ಚಿತ್ರದ ಹೆಸರು ಹಾಗೂ ಫಸ್ಟ್ ಲುಕ್ ಬಿಡುಗಡೆ ಆಗಿದೆ. ಚಿತ್ರಕ್ಕೆ ಮಾಫಿಯಾ ಎನ್ನುವ ಹೆಸರು ಇಡಲಾಗಿದೆ. ಪೊಲೀಸ್ ಡ್ರೆಸ್ನಲ್ಲಿ ಇದ್ದರೂ, ಕೈಗೆ ಬೇಡಿ ಹಾಕಿಕೊಂಡಿರುವ ಪ್ರಜ್ವಲ್ ಲುಕ್ಕು ಮಾಸ್ ಆಗಿದೆ. ಇದು ಪ್ರಜ್ವಲ್ ಅವರ 35ನೇ ಚಿತ್ರ. ಕುಮಾರ್ ಬಿ ಅವರು ನಿರ್ಮಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಆಗಸ್ಟ್ನಲ್ಲಿ ಆರಂಭವಾಗಲಿದೆ. ಪ್ರಜ್ವಲ್ ಅವರಿಗೆ ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸುತ್ತಿದ್ದಾರೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.