ತುಂಬಾ ಬೇಜಾರು, ಸಂಕಟ ಆಗುತ್ತಿದೆ: ಕಣ್ಣೀರಾದ ರಚಿತಾ ರಾಮ್

Suvarna News   | Asianet News
Published : Oct 30, 2021, 07:28 PM IST
ತುಂಬಾ ಬೇಜಾರು, ಸಂಕಟ ಆಗುತ್ತಿದೆ: ಕಣ್ಣೀರಾದ ರಚಿತಾ ರಾಮ್

ಸಾರಾಂಶ

ಕೈ ನಡುಗುತ್ತಿದೆ. ಮಾತು ಬರುತ್ತಿಲ್ಲ. ಗುರುಕಿರಣ್ ಬರ್ತ್‌ಡೇ ಪಾರ್ಟಿಯಲ್ಲಿ ಸಿಕ್ಕಿ, ಬಾಯ್ ಎಂದಿದ್ದೆ. ಹುಷಾರು ಎಂದಿದ್ದೆ, ಮೂರು ವರ್ಷ ಆದ ನಂತರ ನನಗೆ ಅವರು ಸಿಕ್ಕಿದ್ದರು ಎಂದು ನಟಿ ರಚಿತಾ ರಾಮ್ ಕಣ್ಣೀರು ಹಾಕಿದ್ದಾರೆ.

ಪುನೀತ್ ರಾಜ್ ಕುಮಾರ್ (Puneeth Rajkumar) ಜೊತೆ ಕಡೆಯದಾಗಿ ಭೇಟಿ ಮಾಡಿದಾಗ ಟೇಕ್ ಕೇರ್, ಬಾಯ್ ಅಂತಾ ನಾನು ಹೇಳಿದ್ದೆ. ಈಗ ಅವರು ಬಾರದ ಲೋಕಕ್ಕೇ ಹೋಗಿ ಬಿಟ್ಟಿದ್ದಾರೆ ಎನ್ನುತ್ತಾ ಅಳು ತಡೆಯದೆ ನಟಿ ರಚಿತಾ ರಾಮ್ (Rachita Ram) ಕಣ್ಣೀರು ಹಾಕಿದ್ದಾರೆ.

ಕಂಠೀರವ ಕ್ರೀಡಾಂಗಣದಲ್ಲಿ ಪುನೀತ್ ರಾಜ್​​​ಕುಮಾರ್ ಪಾರ್ಥೀವ ಶರೀರದ ದರ್ಶನ ಮಾಡಿದ ನಂತರ ಮಾತನಾಡಿದ ಅವರು, ಕೈ ನಡುಗುತ್ತಿದೆ. ಮಾತು ಬರುತ್ತಿಲ್ಲ ಎಂದು ಬೇಸರಗೊಂಡರು. ಗುರುಕಿರಣ್ ಬರ್ತ್‌ಡೇ ಪಾರ್ಟಿಯಲ್ಲಿ ಸಿಕ್ಕಿ, ಬಾಯ್ ಎಂದಿದ್ದೆ. ಹುಷಾರು ಎಂದಿದ್ದೆ, ಮೂರು ವರ್ಷ ಆದ ನಂತರ ನನಗೆ ಅವರು ಸಿಕ್ಕಿದ್ದರು. ಮೊನ್ನೆ ರಾತ್ರಿ 11.45ಕ್ಕೆ ಅವರು ಮತ್ತು ಅಶ್ವಿನಿ ಲಿಫ್ಟ್‌ನಲ್ಲಿ ಹೋಗುವಾಗ ಟೇಕ್ ಕೇರ್ ಬಾಯ್ ಅಂತಾ ಹೇಳಿದ್ದೆ. 

ಆದರೆ, ಈಗ ಹೀಗಾಗಿದೆ ತುಂಬಾ ಬೇಜಾರು, ಸಂಕಟ ಆಗುತ್ತಿದೆ. ಹೇಳೋದಕ್ಕೆ ಆಗ್ತಾ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಹಾಗೂ ನಾನು ಅಣ್ಣಾವ್ರ ಮಕ್ಕಳ ಜೊತೆ ಕೆಲಸ ಮಾಡಬೇಕು ಎಂದು ನಮ್ಮ ತಾಯಿಗೆ ಆಸೆ ಇತ್ತು. ಅದಕ್ಕೆ ಅವಕಾಶವನ್ನೂ ರಾಜ್ ಕುಟುಂಬ ಕಲ್ಪಿಸಿತ್ತು. ಹಾಗಾಗಿ, ದೇವರಿಗೆ ಎಷ್ಟು ಧನ್ಯವಾದ ಹೇಳಿದರೂ ಸಾಲದು ಎಂದರು.

ಪುನೀತ್ ನಿಧನಕ್ಕೆ ಆನಂದ್ ಆಡಿಯೋ ಯೂಟ್ಯೂಬ್‌ ಚಾನೆಲ್‌ನಿಂದ ವಿಶೇಷ ಹಾಡು

ಪುನೀತ್ ರಾಜ್‌ ಕುಮಾರ್ ಅವರ ಅಕಾಲಿಕ ನಿಧನ ಎಲ್ಲರನ್ನೂ ಆಘಾತಕ್ಕೆ ದೂಡಿದೆ. ನಂಬಲಾಗದ ಸತ್ಯವನ್ನು ಅರಗಿಸಿಕೊಳ್ಳಲು ಚಿತ್ರರಂಗದವರು, ಅಭಿಮಾನಿಗಳು ಕಷ್ಟಪಡುತ್ತಿದ್ದಾರೆ. ಪುನೀತ್ ಅವರು ಬಾಲನಟನಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದರು. ರಾಜ್‌ಕುಮಾರ್ ಕುಟುಂಬದಿಂದ ಬಂದಿರುವ ಪ್ರತಿಭಾವಂತ ನಟನಾಗಿದ್ದ ಪುನೀತ್, ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದರು. ಪುನೀತ್ ಅವರ ಪಾರ್ಥಿವ ಶರೀರವನ್ನು ಕಂಠೀರವ ಸ್ಟೇಡಿಯಂನಲ್ಲಿ ಸಾರ್ವಜನಿಕ ದರ್ಶನಕ್ಕಾಗಿ ಇಡಲಾಗಿದೆ. ಸಹಸ್ರಾರು ಅಭಿಮಾನಿಗಳು ಅಗಲಿದ ಪುನೀತ್ ರಾಜ್ ಕುಮಾರ್ ಅವರ ದರ್ಶನ ಮಾಡುತ್ತಿದ್ದಾರೆ. 

ಪುನೀತ್‌ ರಾಜ್‌ಕುಮಾರ್‌ಗೆ ಭಾವುಕ ಪತ್ರ ಬರೆದ ಕಿಚ್ಚ ಸುದೀಪ್!

ನಾನಾ ಊರುಗಳಿಂದ ಬಂದು ಪ್ರೀತಿಯ ನಟ ಅಪ್ಪು ಅಗಲಿಕೆಯನ್ನು ನೋಡಿ ಕಣ್ಣೀರು ಸುರಿಸುತ್ತಿದ್ದಾರೆ. ಕನ್ನಡ ಚಿತ್ರರಂಗದ ತಾರೆಯರು ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಪುನೀತ್ ಅಗಲಿಕೆ ಬಗ್ಗೆ ನೋವನ್ನು ಹೊರಹಾಕುತ್ತಿದ್ದಾರೆ. ಮತ್ತು ಪುನೀತ್​ ರಾಜ್​ಕುಮಾರ್ ಅಂತ್ಯ ಸಂಸ್ಕಾರ ಭಾನುವಾರ  ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನೆರವೇರಲಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಕೆ ಮಾಡಲಾಗುವುದು.

"

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಆರ್ಯನ್ ಖಾನ್‌ಗೆ ಝೈದ್ ಖಾನ್ ಸಪೋರ್ಟ್; ಆದ್ರೂ ಪಬ್ಲಿಕ್‌ ಪ್ಲೇಸ್‌ನಲ್ಲಿ 'ಮಿಡ್ಲ್ ಫಿಂಗರ್' ಎತ್ತಿದ್ದು ತಪ್ಪು ಅಂತಿರೋ ನೆಟ್ಟಿಗರು!
ರಿಷಬ್ ಶೆಟ್ಟಿ ದೈವದ ಮುಂದೆ ಅತ್ಬಿಟ್ರಾ? ಅಳಬೇಡ ಅಂತ ಸಂತೈಸಿದ್ದೇಕೆ ಪಂಜುರ್ಲಿ ದೈವ?