ಅಂಗಾಂಗ ದಾನ ಆರಂಭ,  ಸಂದೇಶ ಕೊಟ್ಟು ಪಯಣ ಮುಗಿಸಲಿರುವ ಸಂಚಾರಿ

Published : Jun 14, 2021, 10:08 PM ISTUpdated : Jun 14, 2021, 10:11 PM IST
ಅಂಗಾಂಗ ದಾನ ಆರಂಭ,  ಸಂದೇಶ ಕೊಟ್ಟು ಪಯಣ ಮುಗಿಸಲಿರುವ ಸಂಚಾರಿ

ಸಾರಾಂಶ

* ಸಂಚಾರಿ ವಿಜಯ್ ಇನ್ನಿಲ್ಲ ಎಂಬ ಸುದ್ದಿ ಪ್ರಕಟಣೆ ಅನಿವಾರ್ಯ * ಅಂಗಾಂಗ ದಾನ ಮಾಡಲು ಮುಂದಾದ ಕುಟುಂಬ * ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಟ * ಸ್ಯಾಂಡಲ್ ವುಡ್ ನೋವನ್ನು ತಡೆದುಕೊಳ್ಳಲೇಬೇಕು

ಬೆಂಗಳೂರು(ಜೂ.  14)  ಭಾರವಾದ ಮನಸ್ಸಿನಿಂಲೇ ಈ ಸುದ್ದಿ ಬರೆಯಬೇಕಾಗಿದೆ. ನಟ ಸಂಚಾರಿ ವಿಜಯ್ ಮಂಗಳವಾರ ನಸುಕಿನ ಜಾವ ಪ್ರಾಣ ಬಿಡಲಿದ್ದಾರೆ. ಕನ್ನಡ ಚಿತ್ರರಂಗ ಅಧಿಕೃತವಾಗಿ ಅತ್ಯುತ್ತಮ ನಟ, ಒಳ್ಳೆಯ ಮನುಷ್ಯನನ್ನು ಕಳೆದುಕೊಳ್ಳಲಿದೆ.

ಬೈಕ್ ಅಪಘಾತದದಲ್ಲಿ ಗಂಭೀರ ಗಾಯಗೊಂಡಿದ್ದ ವಿಜಯ್ ಮಿದುಳು ಕೆಲಸ ಮಾಡುವುದನ್ನು ನಿಲ್ಲಿಸಿದೆ. ದೇಹದ ಉಳಿದ ಅಂಗಗಳು ಕೆಲಸ ಮಾಡುತ್ತಲೇ ಇವೆ. ಸ್ನೇಹಿತರು ಮತ್ತು ಕುಟುಂಬದ  ತೀರ್ಮಾನದಂತೆ ಅಂಗಾಂಗ ದಾನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಸಂಚಾರಿ ವಿಜಯ್ ಅಪ್ನಿಯಾ ‌ಟೆಸ್ಟ್ ಮಾಡಿದ್ದೇವೆ. ಮಧ್ಯಾಹ್ನ ಹಾಗೂ ಸಂಜೆ ಎರಡೂ ಟೆಸ್ಟ್ ನಲ್ಲಿ ಪಾಸಿಟಿವ್‌ ಆಗಿದೆ. ಹಾಗಾಗಿ ಈ ಪರಿಸ್ಥಿತಿಯಲ್ಲಿ ಏನು ಹೇಳಲು ಅಸಾಧ್ಯ. ಜೀವ ಸಾರ್ಥಕತೆ ತಂಡದಿಂದ ಅಂಗಾಂಗ ದಾನ ಕುರಿತು ‌ಮುಂದಿನ ಪ್ರಕ್ರಿಯೆ ‌ನಡೆಯಲಿದೆ ಎಂದು ಡಾ.ಅರುಣ್ ನಾಯ್ಕ್ ತಿಳಿಸಿದ್ದಾರೆ.

ಬದುಕಿ ಬರುವ ಆಸೆಯೊಂದು ಮೂಡಿತ್ತು

ಲಿವರ್, ಎರಡು ಕಿಡ್ನಿ,‌ ಎರಡು ಕಣ್ಣು ಸದ್ಯ ಟ್ರಾನ್ಸ್ ಪ್ಲಾಂಟ್ ಮಾಡಲಾಗುತ್ತದೆ. ಹಾರ್ಟ್‌ನ ಟಿಶ್ಯು ವಾಲ್ವ್ ಕೂಡ ಟ್ರಾನ್ಸ್ ಪ್ಲಾಂಟ್ ಗೆ ಹೋಗಲಿದೆ. ಬೆಳಿಗ್ಗೆ ಕುಟುಂಬದವರಿಗೆ ಮೃತದೇಹ ಹಸ್ತಾಂತರ ಮಾಡಲಾಗುತ್ತದೆ ಎಂದಿದ್ದಾರೆ.

ಅಂತಿಮ ದರ್ಶನ;  ಮಂಗಳವಾರ ಬೆಳಿಗ್ಗೆ 8-10 ಗಂಟೆವರೆಗೂ ಅಂತಿಮ ದರ್ಶನಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ  ಅವಕಾಶ ಮಾಡಿಕೊಡಲಾಗಿದೆ.  ಸರ್ಕಾರದ ಕಡೆಯಿಂದಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಬಳಿಕ ಚಿಕ್ಕಮಗಳೂರಿನ ಕಡೂರು ತಾಲೂಕಿನ ಪಂಚನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.  ಬೈಕ್ ನಲ್ಲಿ ಪ್ರಯಾಣಿಸುವಾಗ ಸುರಕ್ಷಿತ ಹೆಲ್ಮೆಟ್ ಬಳಸಿ ಎಂಬ ಸಂದೇಶವನ್ನು ಮತ್ತೊಮ್ಮೆ ನೀಡುತ್ತಿದ್ದೇವೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ರಗಡ್‌ ಕಾಪ್‌, ಮ್ಯಾಕ್ಸಿಮಮ್‌ ಮಾಸ್‌.. 'ಮಾರ್ಕ್' ಕಥೆ ಬಗ್ಗೆ ಸ್ಫೋಟಕ ಸತ್ಯ ಬಿಚ್ಚಿಟ್ಟ ಕಿಚ್ಚ ಸುದೀಪ್!
ಸುದೀಪ್​ಗೆ ಸ್ತ್ರೀದೋಷ ಇದೆಯಾ? ಬಹು ದೊಡ್ಡ ರಹಸ್ಯ ರಿವೀಲ್​ ಮಾಡಿದ ಕಿಚ್ಚ ಹೇಳಿದ್ದೇನು?