ಚಿಕಿತ್ಸೆಗೆ ಸದ್ಯದಲ್ಲೇ ಅಮೆರಿಕಾಗೆ ಹೋಗಲಿರುವ ನಟ ಶಿವರಾಜ್‌ಕುಮಾರ್

Published : Nov 07, 2024, 02:28 PM ISTUpdated : Nov 07, 2024, 07:01 PM IST
ಚಿಕಿತ್ಸೆಗೆ ಸದ್ಯದಲ್ಲೇ ಅಮೆರಿಕಾಗೆ ಹೋಗಲಿರುವ  ನಟ ಶಿವರಾಜ್‌ಕುಮಾರ್

ಸಾರಾಂಶ

ಸ್ಯಾಂಡಲ್‌ವುಡ್ ನಟ ಶಿವರಾಜ್‌ಕುಮಾರ್ ಅವರು ಅನಾರೋಗ್ಯಕ್ಕೆ    ಟ್ರೀಟ್‌ಮೆಂಟ್ ತೆಗೆದುಕೊಳ್ಳಲು ಸದ್ಯದಲ್ಲೇ ಅಮೆರಿಕಾಕ್ಕೆ ಹೋಗುತ್ತಿದ್ದಾರೆ. ಒಂದು ತಿಂಗಳು ಅಮೆರಿಕಾಕ್ಕೆ ಶಿವಣ್ಣ ತೆರಳಲಿದ್ದಾರೆ...  

ಸ್ಯಾಂಡಲ್‌ವುಡ್ ನಟ ಶಿವರಾಜ್‌ಕುಮಾರ್ (Shiva Rajkumar) ಅವರು ಅನಾರೋಗ್ಯಕ್ಕೆ ಟ್ರೀಟ್‌ಮೆಂಟ್ ತೆಗೆದುಕೊಳ್ಳಲು ಅಮೆರಿಕಾಕ್ಕೆ ಹೋಗುತ್ತಿದ್ದಾರೆ. ಸದ್ಯದಲ್ಲೇ ಒಂದು ತಿಂಗಳು ಅಮೆರಿಕಾಕ್ಕೆ ಶಿವಣ್ಣ ತೆರಳಲಿದ್ದಾರೆ. ಅಲ್ಲಿ 4 ಸೆಷನ್ ಟ್ರೀಟ್‌ಮೆಂಟ್ ನಡೆಯಲಿದ್ದು, ಬಳಿಕ ಒಂದು ಸರ್ಜರಿ ಸಹ ಆಗಬೇಕಾಗಿದೆ ಎನ್ನಲಾಗಿದೆ. ಆದರೆ ಅದನ್ನು ಇಲ್ಲಿಯೇ ಮಾಡಿಸಿಕೊಳ್ಳುವುದೋ ಅಥವಾ ಅಮೆರಿಕಾದಲ್ಲೋ ಎಂಬುದನ್ನು ಬಳಿಕ ನಿರ್ಧರಿಸಲಾಗುವುದು ಎಂದಿವೆ ಆಪ್ತ ಮೂಲಗಳು. 

ಕನ್ನಡ ಸಿನಿಮಾರಂಗದ ಹಿರಿಯ ನಟ ಶಿವರಾಜ್‌ಕುಮಾರ್ ಅವರು ಬಹಳಷ್ಟು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಅವರು ಚಿಕಿತ್ಸೆ ಪಡೆದುಕೊಳ್ಳುತ್ತಲೇ ತಮ್ಮ ನಟನೆಯ 'ಭೈರತಿ ರಣಗಲ್' ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ. ಜೊತೆಗೆ, ಕಿರುತೆರೆಯ 'ಡಿಕೆಡಿ' ರಿಯಾಲಿಟಿ ಶೋದಲ್ಲಿ ಸಹ ಪಾಲ್ಗೊಳ್ಳುತ್ತಿದ್ದಾರೆ. ಈ ಬಗ್ಗೆ ಮಾತನಾಡಿರುವ ನಟ ಶಿವಣ್ಣ ಅವರು 'ನಾನು ನನ್ನ ಅನಾರೋಗ್ಯವನ್ನು ಅಭಿಮಾನಿಗಳು ಸೇರಿದಂತೆ ಯಾರಿಂದಲೂ ಮುಚ್ಚಿಡುವ ಅಗತ್ಯವಿಲ್ಲ. ಆದರೆ, ಯಾರೂ ಅನಾವಶ್ಯಕ ಆತಂಕ ಪಡಬೇಡಿ. ಹೌದು, ಎಲ್ಲರಂತೆ ನಾನೂ ಮನುಷ್ಯ, ನನಗೂ ಅನಾರೋಗ್ಯ ಸಹಜವಾಗಿ ಕಾಡುತ್ತದೆ. 

ಹೇಳಿ, ಉಪೇಂದ್ರ ಈ ಡೈಲಾಗ್‌ಗೆ 'ಬುದ್ಧಿವಂತ' ಅಂತೀರಾ ಅಥವಾ ಇನ್ನೇನೋ ಹೆಸರಿಡ್ತೀರಾ?

ಹೌದು, ನನಗೆ ಹುಶಾರಿಲ್ಲ, ಆದರೆ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳುತ್ತಿದ್ದೇನೆ. ಸದ್ಯದಲ್ಲೇ ಟ್ರೀಟ್‌ಮೆಂಟ್‌ಗೆ ಅಮೆರಿಕಾಗೆ ಒಂದು ತಿಂಗಳು ಹೋಗಲಿದ್ದೇನೆ. ಈಗಾಗಲೇ ಚಿಕಿತ್ಸೆಯ ಹಂತಗಳಲ್ಲಿ ಎರಡು ಸೆಷನ್ ಮುಗಿದಿದೆ, ಇನ್ನು ನಾಲ್ಕು ಸೆಷನ್ ಬಾಕಿ ಇದ್ದು, ಅದಕ್ಕಾಗಿ ಅಮೆರಿಕಾಗೆ ಒಂದು ತಿಂಗಳು ಹೋಗಲಿದ್ದೇನೆ. ಬಳಿಕ ಒಮದು ಸರ್ಜರಿ ಸಹ ಆಗಬೇಕಿದೆ ಎಂದಿದ್ದಾರೆ ವೈದ್ಯರು. ಆದರೆ ಅದನ್ನು ಭಾರತದಲ್ಲಿಯೇ ಪಡೆದುಕೊಳ್ಳಬೇಕೋ ಅಥವಾ ಅಲ್ಲಿ ಅಮೆರಿಕಾದಲ್ಲಿಯೋ ಎಂಬುದು ಇನ್ನೂ ಸ್ವಲ್ಪ ಗೊಂದಲವಿದೆ. ಆ ಬಗ್ಗೆ ಬಳಿಕ ನಿರ್ಧರಿಸಲಾಗುವುದು' ಎಂದಿದ್ದಾರೆ. 

ಸಹಜವಾಗಿಯೇ ನಟ ಶಿವಣ್ಣರ ಅಭಿಮಾನಿಗಳು ಆತಂಕಕ್ಕೆ ಈಡಾಗುತ್ತಾರೆ. ಆದರೆ ಆ ಬಗ್ಗೆ ಸ್ವತಃ ಶಿವಣ್ಣ 'ನನ್ನ ಅನಾರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಈಗಲೂ ನಾನು ಶೂಟಿಂಗ್ ಹಾಗೂ ರಿಯಾಲಿಟಿ ಶೋ ಕೆಲಸದಲ್ಲಿ ತೊಡಗಿಸಿಕೊಂಡಿದ್ದೇನೆ. ಚಿಕಿತ್ಸೆಗೆ ಹೋಗಿಬಂದ ಬಳಿಕ ಮತ್ತೆ ನನ್ನ ಕೆಲಸವನ್ನು ಮುಂದುವರಿಸಲಿದ್ದೇನೆ' ಎಂದಿದ್ದಾರೆ. ಅಭಿಮಾನಿಗಳಿಂದ ಯಾವುದನ್ನೂ ಮುಚ್ಚಿಡಬೇಕಾದ ಅಗತ್ಯ ನನಗಿಲ್ಲ ಎಂದಿರುವ ನಟ ಶಿವಣ್ಣ ಅವರು, ಹೊರಗಡೆ ಜಗತ್ತಿಗೆ ಎಷ್ಟು ಮಾಹಿತಿ ನೀಡಬೇಕೋ ಅಷ್ಟನ್ನು ನೀಡಿದ್ದಾರೆ. 

ನವಗ್ರಹದ 'ಜಗ್ಗು' ಪಾತ್ರಕ್ಕೆ ದರ್ಶನ್ ನನ್ನ ಮೊದಲ ಆಯ್ಕೆಯಲ್ಲ; ದಿನಕರ್ ಹೇಳಿಕೆ ವೈರಲ್!

ನಟ ಶಿವರಾಜ್‌ಕುಮಾರ್ ಅವರೇ ಸ್ವತಃ ಹೇಳಿದಂತೆ 'ನನ್ನ ಅನಾರೋಗ್ಯ ಹಾಗು ಕಂಡೀಷನ್ ಬಗ್ಗೆ ಕನ್ನಡ ಸಿನಿಮಾ ಉದ್ಯಮದಲ್ಲಿ ಅನೇಕರಿಗೆ ತಿಳಿದಿದೆ. ಈ ಬಗ್ಗೆ ನನ್ನ ಆಪ್ತರು ಬಹಳಷ್ಟು ಧೈರ್ಯ ಹೇಳಿದ್ದಾರೆ. ಹೌದು, ನನಗೆ ಆ ಖಾಯಿಲೆ ಬಂದಿದೆ. ಆದರೆ, ಪ್ರಾರಂಭದಲ್ಲಿ ನಾನು ಭಯಪಟ್ಟರೂ ಈಗ ಧೈರ್ಯ ತಂದುಕೊಂಡಿದ್ದೇನೆ. ಚಿಕಿತ್ಸೆ ತೆಗೆದುಕೊಳ್ಳಲಿದ್ದೇನೆ, ಎಲ್ಲವೂ ಸರಿಯಾಗಲಿದೆ ಎಂಬ ವಿಶ್ವಾಸ ನನಗಿದೆ' ಎಂದಿದ್ದಾರೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

Actor Dileep Case: ಖ್ಯಾತ ನಟಿ ಮೇಲಿನ ಅ*ತ್ಯಾಚಾರ ಆರೋಪ; 8 ವರ್ಷಗಳ ಹೋರಾಟ, ನಟ ದಿಲೀಪ್‌ಗೆ ನಿರಾಳ!
ಅಂದು ಕನ್ನಡಿಗರ ಕೆಣಕಿದ್ದ ಕರಾವಳಿ ಹುಡುಗಿ ಇಂದು ಮನೆಮಗಳು ಆಗಿದ್ದು ಹೇಗೆ? ಸೀಕ್ರೆಟ್ ಸ್ಟ್ರಾಟಜಿ ಏನು?