
‘ಕನ್ನಡ ಚಲನಚಿತ್ರ ರಂಗದ ಸಾವಿರಾರು ಕಾರ್ಮಿಕರು, ಕಲಾವಿದರು ಕೆಲಸವಿಲ್ಲದೇ ಕೋವಿಡ್ ಹೊಡೆತಕ್ಕೆ ತತ್ತರಿಸಿ ಹೋಗಿದ್ದಾರೆ. ಈ ಕಾರಣ ಒಕ್ಕೂಟದ ಎಲ್ಲ ಸಂಘಗಳ ಸುಮಾರು 3000 ಕುಟುಂಬಕ್ಕೆ ದಿನಸಿ ಕಿಟ್ ನೀಡಲು ನಿರ್ಧರಿಸಿದ್ದೇನೆ’ ಎಂದು ಉಪೇಂದ್ರ ಟ್ವೀಟ್ ಮಾಡಿದ್ದಾರೆ. ಉಪೇಂದ್ರ ಅವರ ಈ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗುತ್ತಿದೆ.
ಸುದೀಪ್, ಲೀಲಾವತಿಯಿಂದ ಸಹಾಯ: ‘ಕಿಚ್ಚನ ಕೈತುತ್ತು’. ಇದು ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ನ ಹೊಸ ಯೋಜನೆ. ಕೊರೋನಾ ವಾರಿಯರ್ಸ್ ಹಾಗೂ ಹಸಿದವರಿಗೆ ಒಂದು ಹೊತ್ತಿನ ಊಟ ನೀಡುವ ಯೋಜನೆ ಇದಾಗಿದೆ. ಕೊರೋನಾ ಪರಿಸ್ಥಿತಿ ನಿಯಂತ್ರಣಕ್ಕೆ ಬರುವವರೆಗೂ ಅವಶ್ಯಕತೆ ಇರುವವರಿಗೆ ಟ್ರಸ್ಟ್ ವತಿಯಿಂದ ಊಟ ನೀಡಲಾಗುತ್ತದೆ. ಈಗಾಗಲೇ ಕಷ್ಟದಲ್ಲಿರುವ ಕಲಾವಿದರಿಗೆ ಸಹಾಯ, ಆಕ್ಸಿಜನ್ ಸಿಲಿಂಡರ್ ವಿತರಣೆ ಮೂಲಕ ಸಾಮಾಜಿಕ ಕಾರ್ಯಗಳಲ್ಲಿ ಟ್ರಸ್ಟ್ ತೊಡಗಿಸಿಕೊಂಡಿದೆ.
ಹುಟ್ಟೂರು ಮಂಡ್ಯದ ನೆರವಿಗೆ ಮುಂದಾದ ಕೆಜಿಎಫ್ ನಿರ್ಮಾಪಕ
ಹಿರಿಯ ನಟಿ ಲೀಲಾವತಿ ಕಷ್ಟದಲ್ಲಿರುವ ಕಿರಿಯ ಕಲಾವಿದರ ಸಹಾಯಕ್ಕೆ ಮುಂದಾಗಿದ್ದಾರೆ. ಸುಮಾರು 200 ಮಂದಿ ನಟ ನಟಿಯರಿಗೆ ಕಿಟ್ ವಿತರಿಸಿದ್ದಾರೆ. ನಟ ವಿನೋದ್ ರಾಜ್ ಅವರೂ ತಾಯಿಯ ಜೊತೆಗೆ ಸಮಾಜ ಸೇವೆ ಕಾರ್ಯದಲ್ಲಿ ಕೈಜೋಡಿಸಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.