ಯಶೋಮಾರ್ಗ: ಶಿವಮೊಗ್ಗದ 16ನೇ ಶತಮಾನದ ಪುಷ್ಕರಣಿ ಸ್ವಚ್ಛತೆ

Suvarna News   | Asianet News
Published : Oct 19, 2021, 10:50 AM IST
ಯಶೋಮಾರ್ಗ:  ಶಿವಮೊಗ್ಗದ 16ನೇ ಶತಮಾನದ ಪುಷ್ಕರಣಿ ಸ್ವಚ್ಛತೆ

ಸಾರಾಂಶ

ಸಿನಿಮಾ ಕ್ಷೇತ್ರದಲ್ಲಿ ಬ್ಯುಸಿಯಾಗಿದ್ದರೂ ಯಶೋಮಾರ್ಗದ ಮೂಲಕ ಮತ್ತೊಂದು ಜನಪರ ಕೆಲಸಕ್ಕೆ ಮುಂದಾದ ರಾಕಿಂಗ್ ಸ್ಟಾರ್. ರಾಜ್ಯದಲ್ಲಿ ಎಲ್ಲೆಡೆ ನೀರು ಹರಿಸಲು ಯಶ್ ಪಣ. 

ಭಾರತೀಯ ಚಿತ್ರರಂಗವೇ ಕನ್ನಡ ಚಿತ್ರರಂಗದ ಕಡೆ ತಿರುಗಿ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ (Yash), ಇದೀಗ ವಿದೇಶದಲ್ಲೂ ರಾಖಿ ಬಾಯ್‌ ಎಂದು ಗುರುತಿಸಿಕೊಂಡಿದ್ದಾರೆ. ಬಿಗ್ ಬಜೆಟ್ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಯಶ್ ಸಮಾಜ ಸೇವೆ, ಜನರ ಸೇವೆಯಲ್ಲಿ ತೊಡಗಿಸಿಕೊಳ್ಳಲು ಯಶೋಮಾರ್ಗ (YashoMarga) ಸಂಸ್ಥೆ ಆರಂಭಿಸಿ ವರ್ಷಗಳೇ ಉರುಳಿವೆ. ಈ ಸಂಸ್ಥೆ ಮೂಲಕ ಈಗಾಗಲೇ ರಾಜ್ಯದ ಹಲವು ಕಡೆ ಬತ್ತಿದ ಕೆರೆಗೆ ನೀರು ಹರಿಸಿರುವ ಈ ಸಂಸ್ಥೆ, ಇದೀಗ ಶಿವಮೊಗ್ಗದ ಪುಷ್ಕರಣಿಯನ್ನೂ ಸ್ವಚ್ಛಗೊಳಿಸಿದ್ದಾರೆ.

ಹೌದು! ಶಿವಮೊಗ್ಗ (YashoMarga) ಜಿಲ್ಲೆ ಸಾಗರ (Sagara) ತಾಲೂಕಿನ ಆನಂದಪುರ ಬಳಿ ಇರುವ ಐತಿಹಾಸಿಕ ಪುಷ್ಕರಣಿ/ಕಲ್ಯಾಣಿಯನ್ನು ಶುಚಿಗೊಳಿಸುವ ಕಾರ್ಯಕ್ಕೆ ಯೋಶೋಮಾರ್ಗ ಮುಂದಾಗಿದೆ. 16ನೇ ಶತಮಾನದ ಈ ಪುಷ್ಕರಣಿ ಕೆಳದಿ ಅರಸರ ಕಾಲದ್ದು ಎನ್ನಲಾಗಿದೆ. ಈ ಕಲ್ಯಾಣಿ ರಾಜ್ಯದ ಕೆಳದಿ ಅರಸರ ಇತಿಹಾಸವನ್ನೇ ಹೇಳುತ್ತದೆ. ಈ ಪುಷ್ಕರಣಿಯನ್ನು ಸರಸು (Sarasu) ಎಂದು ಕರೆಯಲಾಗುತ್ತದೆ. ಈ ಸರಸು ಪುಷ್ಕರಣಿಯನ್ನು ಸ್ಥಳೀಯರ ಶುಚಿ ಮಾಡಿ ಕಾಪಾಡಿಕೊಂಡು ಬಂದಿದ್ದರು. ಆದರೆ ಜಿಲ್ಲಾಡಳಿತ, ಪ್ರಾಚ್ಯವಸ್ತು ಇಲಾಖೆ ನಿರ್ಲಕ್ಷ್ಯದಿಂದ ಈ ಸ್ಥಳದ ಬಗ್ಗೆ ಲೇಖಕ ಶಿವಾನಂದ ಕಳವೆ (Sivananda Kalave) ಅವರು ಯಶ್ ಗಮನಕ್ಕೆ ತಂದಿದ್ದರು. ತಕ್ಷಣವೇ ಯಶ್ ಈ ಐತಿಹಾಸಿಕ ಕಲ್ಯಾಣಿಯ ಪುನಶ್ಚೇತನಕ್ಕೆ ಒಪ್ಪಿಗೆ ನೀಡಿ, ಯಶೋಮಾರ್ಗದ ಮೂಲಕ ಕಾರ್ಯ ಶುರು ಮಾಡಿದ್ದಾರೆ. 

ನೆರೆ ಸಂತ್ರಸ್ತರಿಗೆ ನೆರವಾದ ಯಶ್ ’ಯಶೋಮಾರ್ಗ’

ಅಕ್ಟೋಬರ್ 17ರಂದು ಯಶೋಮಾರ್ಗದಡಿ ಶಿವಾನಂದ ಕಳವೆ ಮತ್ತು ಯಶ್ ಅಭಿಮಾನಿಗಳು ಸಣ್ಣ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಇನ್ನು ಎರಡು ವರ್ಷಗಳಲ್ಲಿ ಈ ಕಲ್ಯಾಣಿಗೆ 400 ವರ್ಷಗಳು ತುಂಬಲಿವೆ. ಹೀಗಾಗಿ ಕೊಳದ ಜಾಗದಲ್ಲಿ ಸ್ವಚ್ಛತೆ, ಕಟ್ಟೆ ದುರಸ್ತಿ, ಹಿಂಬಾಗಿಲು ರಿಪೇರಿ, ಹೊರ ಆವರಣವನ್ನು ಪ್ರವಾಸಿಗರಿಗೆ ಯೋಗ್ಯ ಸ್ಥಳವಾಗಿಸಿ, ದೇಗುಲ ಪುನಶ್ಚೇತನ,  ಗೇಟ್‌ ಮೂಲಕ ಇದಕ್ಕೆ ಭದ್ರತೆ ನೀಡುವ ಕೆಲಸಗಳನ್ನು ಯಶೋಮಾರ್ಗ ಮಾಡಿಕೊಡುವುದಾಗಿ ಒಪ್ಪಿಕೊಂಡಿದೆ. 

ರಾಯಚೂರಿನ ಜನರಿಗೆ ಭಗೀರಥನಾದ ಯಶ್!

ಸರಸು ಕಲ್ಯಾಣಿ ಬಗ್ಗೆ ಲೇಖಕ ಅರುಣ್ ಪ್ರಸಾದ್ (Arun Prasad) ಬರೆದಿರುವ  ಬೆಸ್ತರ ರಾಣಿ ಚಂಪಕ ಕೃತಿಯಲ್ಲಿ ಮಾಹಿತಿ ಲಭ್ಯವಿದೆ. ಚಂಪಕ ಸರಸು ಕಲ್ಯಾಣಿ ಬಗ್ಗೆ ನಾಲ್ಕೈದು ಕಥೆಗಳಿವೆ. ಆದರಲ್ಲಿ ಒಂದು ಕಥೆ, ಮಹರಾಜನಿಗೆ ಚಂಪಕ ಎಂಬ ಹೆಸರಿನ ಯುವತಿ ಮೇಲೆ ಮೋಹವಿತ್ತು. ಆಕೆಯನ್ನು ವರಿಸಿದ್ದ. ಈ ವಿಚಾರ ಮಹಾರಾಣಿ ಮತ್ತು ಊರಿನ ಜನರ ಗಮನಕ್ಕೆ ಬಂದ ನಂತರ ಎಲ್ಲರೂ ಆಕೆಯನ್ನು ಮೂದಲಿಸುತ್ತಿದ್ದರು. ಹೀಗಾಗಿ ಆಕೆ ಆತ್ಮಹತ್ಯೆ ಮಾಡಿಕೊಂಡಳು. ಅವಳ ನೆನಪಿನಲ್ಲಿ ಈ ಕಲ್ಯಾಣಿ ನಿರ್ಮಾಣವಾಯಿತೆಂಬ ಕಥೆ ಇದೆ. ಒಟ್ಚಿನಲ್ಲಿ ಈ ಕಲ್ಯಾಣಿ ಹಾಗೂ ಚಂಪಕ ಎಂಬ ಹೆಣ್ಣಿನ ಸುತ್ತ ಅನೇಕ ಕಥೆಗಳು ಹೆಣೆದುಕೊಂಡಿವೆ. 

ಒಟ್ಟಿನಲ್ಲಿ ಈ ಪುಷ್ಕರಣಿ ಶುಚಿಗೆ ಯಶ್ ಮುಂದಾಗಿರುವುದಕ್ಕೆ ಸ್ಥಳೀಯರ ಮತ್ತು ಅಭಿಮಾನಿಗಳು ಸಂತಸ ವ್ಯಕ್ತ ಪಡಿಸಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
'ಧಂ' ಬೇಕಲೇ ಎಂದಿದ್ದ ದರ್ಶನ್‌ಗೆ ಟಾಂಗ್ ಕೊಟ್ರಾ ಸುದೀಪ್? ಏನಿದು ಮಾರ್ಕ್ ಡೈಲಾಗ್ ಮರ್ಮ?