ಮತ್ತೊಬ್ಬಳ ಜತೆ ಅಫೇರ್; ಪತಿಯ ವಿರುದ್ಧ ದೂರು ನೀಡಿದ ಗರ್ಭಿಣಿ ನಟಿ ದಿವ್ಯಾ ಶ್ರೀಧರ್

Published : Oct 07, 2022, 12:01 PM IST
ಮತ್ತೊಬ್ಬಳ ಜತೆ ಅಫೇರ್; ಪತಿಯ ವಿರುದ್ಧ ದೂರು ನೀಡಿದ ಗರ್ಭಿಣಿ ನಟಿ ದಿವ್ಯಾ ಶ್ರೀಧರ್

ಸಾರಾಂಶ

ಬೀದಿಗೆ ಬಂದು ನಿಂತಿದೆ ನಟಿ ದಿವ್ಯಾ ಶ್ರೀಧರ್ ವೈವಾಹಿಕ ಜೀವನ. ಗರ್ಭಿಣಿ ಆಗಿರುವ ನಟಿ ವಿರುದ್ಧ ಪತಿಯಿಂದ ದೂರು.. 

ಕನ್ನಡ ಕಿರುತೆರೆಯ ಜನಪ್ರಿಯ 'ಆಕಾಶ ದೀಪ' ಧಾರಾವಾಹಿಯಲ್ಲಿ ಅಭಿನಯಿಸಿರುವ ನಟಿ ದಿವ್ಯಾ ಶ್ರೀಧರ್ ಇದೀಗ ತೆಲುಗು ಕಿರುತೆರೆ ಲೋಕದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಸದ್ಯಕ್ಕೆ 'ಸೇವಂತಿ' ಧಾರಾವಾಹಿಯಲ್ಲಿ ನಟಿಸುತ್ತಿರುವ ಚೆಲುವೆ ವೈವಾಹಿಕ ಜೀವನದ ಗುಟ್ಟು ರಟ್ಟು ಮಾಡಿದ್ದಾರೆ. ಪತಿ ಮೋಸ ಮಾಡುತ್ತಿದ್ದಾನೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. 

ಹೌದು! ತಮಿಳು ಸೀರಿಯಲ್‌ನಲ್ಲಿ ನಟಿಸುವಾಗ ದಿವ್ಯಾ ಶ್ರೀಧರ್‌ಗೆ ಆರ್ನವ್  ಪರಿಚಯ ಆಗಿದೆ. ದಿವ್ಯಾಳನ್ನು ಪ್ರೀತಿಸಬೇಕು ಎಂದು ಅಮ್ಜದ್ ​ಖಾನ್ ಎಂದು ನಿಜವಾದ ಹೆಸರುನ್ನು ಹೇಳದೇ ಆರ್ನವ್ ಎಂದು ಸುಳ್ಳು ಹೇಳಿ ಪರಿಚಯ ಮಾಡಿಕೊಂಡಿದ್ದಾರೆ. ಈಗ ಇದೇ ಆರ್ನವ್‌ ಜೀವನದ ಅಸಲಿ ಕಥೆ ಬೆಳಕಿಗೆ ಬಂದ ಮೇಲೆ ದೂರು ನೀಡಿದ್ದಾರೆ. ದಿವ್ಯಾ ಮೂರು ತಿಂಗಳ ಗರ್ಭಿಣಿ ಆಗಿದ್ದು ನನಗೆ ಜೀವ ಬೆದರಿಕೆ ಇದೆ ಹೀಗಾಗಿ ನನಗೆ ನನ್ನ ಮಗುವಿಗೆ ಏನೇ ಆದರೂ ಅದಕ್ಕೆ ಅರ್ನವ್‌ ಕಾರಣ ಎಂದಿದ್ದಾರೆ.

2014ರಲ್ಲಿ ಶಕ್ತಿ ಧಾರಾವಾಹಿ ಮೂಲಕ ಬಣ್ಣ ಜರ್ನಿ ಆರಂಭಿಸಿದ ಅಮ್ಜದ್ ​ಖಾನ್ ಮೊಹಮ್ಮದ್ ಅತಿ ಕಡಿಮೆ ಅವಧಿಯಲ್ಲಿ ಜನಪ್ರಿಯತೆ ಪಡೆದುಕೊಂಡಿದ್ದಾರೆ. ಈ ಸಮಯದಲ್ಲಿ ದಿವ್ಯಾಳ ಜೊತೆ ಪ್ರೀತಿಯಲ್ಲಿ ಬಿದ್ದು ಆಕೆಗೆ ಜಾತಿ ಮತಾಂತರ ಆಗುವಂತೆ ಒತ್ತಾಯ ಮಾಡಿದ್ದಾರೆ. ಪೋಷಕರಿಗೆ ಪ್ರೀತಿ ವಿಚಾರ ತಿಳಿಸಬೇಕು ಅವರಿಂದ ಮದುವೆ ಅನುಮತಿ ಪಡೆಯಬೇಕು ಎಂದು 2022ರ ಫೆಬ್ರವರಿಯಲ್ಲಿ ದಿವ್ಯಾ ಮುಸ್ಲಿಂಗೆ ಮತಾಂತರ ಆಗಿದ್ದಾರೆ. 

ಕೆಲವು ಮೂಲಗಳಿಂದ ತಿಳಿದು ಬಂದಿರುವ ಮಾಹಿತಿ ಪ್ರಕಾರ ಇಸ್ಲಾಂ ಧರ್ಮದ ಪ್ರಕಾರ ದಿವ್ಯಾ ಮತ್ತು ಅಮ್ಜದ್ ​ಖಾನ್ ಮೊಹಮ್ಮದ್ ಮದುವೆಯಾಗಿದ್ದಾರೆ. ಮದುವೆಯಿಂದ ವೃತ್ತಿ ಜೀವನದ ಮೇಲೆ ಪರಿಣಾಮ ಬೀರುತ್ತದೆ ಎಂದು ಮದುವೆ ವಿಚಾರವನ್ನು ಸೀಕ್ರೆಟ್ ಆಗಿಟ್ಟಿದ್ದಾರೆ. ಈ ನಡುವೆ ಕಿರುತೆರೆಯ ಮತ್ತೊಬ್ಬಳ ಜತೆ ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ದಿವ್ಯಾ ಸತ್ಯ ಬಿಚ್ಚಿಟ್ಟಿದ್ದಾರೆ.

ಕನ್ನಡ ಕಿರುತೆರೆ ನಟಿ ದಿವ್ಯಾ ಶ್ರೀಧರ್‌ಗೆ ಗಂಡನಿಂದ ಕಿರುಕುಳ; ಏನಿದು ಲವ್ ಜಿಹಾದ್?

ಇಸ್ಲಾಂ ಧರ್ಮದ ಪ್ರಕಾರ ಮದುವೆ ಆದ ನಂತರ ಹಿಂದು ಸಂಪ್ರದಾಯದಲ್ಲೂ ಮದುವೆ ಆಗಬೇಕು ಎಂದು ದಿವ್ಯಾ ಡಿಮ್ಯಾಂಡ್ ಮಾಡಿದ ಕಾರಣ ಕಾಂಚಿಪುರಂನಲ್ಲಿರುವ ದೇಗುಲದಲ್ಲಿ ಸರಳವಾಗಿ ಮತ್ತೊಮ್ಮೆ ಮದುವೆಯಾಗಿದ್ದಾರೆ. ಈಗ ದಿವ್ಯಾ ಗರ್ಭಿಣಿ ಎಂದು ತಿಳಿಯುತ್ತಿದ್ದಂತೆ ಅಮ್ಜದ್ ​ಖಾನ್ ಮೊಹಮ್ಮದ್ ದೂರವಾಗುತ್ತಿದ್ದಾರಂತೆ. ಅನಾರೋಗ್ಯದಿಂದ ದಿವ್ಯಾ ಕೆಲವು ದಿನಗಳ ಹಿಂದೆ ಚೆನ್ನೈನ ಸರ್ಕಾರ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.

'ನಾನು ಗರ್ಭಿಣಿ ಎಂದು ತಿಳಿಯುತ್ತಿದ್ದಂತೆ ಅಮ್ಜದ್ ​ಖಾನ್ ಮೊಹಮ್ಮದ್ ನನ್ನನ್ನು ಬಿಟ್ಟು ದೂರ ಹೋಗುತ್ತಿದ್ದಾರೆ. ಆಗಲೇ ಬಿಟ್ಟಿದ್ದಾರೆ.ಅಮ್ಜದ್ ​ಖಾನ್ ಮೊಹಮ್ಮದ್‌ಗೆ ಕಿರುತೆರೆ ನಟಿ ಹನ್ಸಿಕಾ ಜೊತೆ ಸಂಬಂಧವಿದೆ. ಆಕೆ ಕೂಡ ಮುಸ್ಲಿಂ ಸಮುದಾಯಕ್ಕೆ ಸೇರಿದವಳು' ಎಂದು ಪೊಲೀಸರ ಬಳಿ ದಿವ್ಯಾ ದೂರು ನೀಡಿದ್ದಾಳೆ. ವಕೀಲರ ಮೂಲಕ ಪತ್ರದಲ್ಲಿ ಮಗು ಮತ್ತು ನನಗೆ ಏನೇ ಆದರೂ ಅದಕ್ಕೆ ಅಮ್ಜದ್ ​ಖಾನ್ ಮೊಹಮ್ಮದ್ ಕಾರಣ ಎಂದು ತಿಳಿಸಿದ್ದಾರೆ. ವೈದ್ಯರ ಜೊತೆ ಗರ್ಭಪಾತ ಮಾಡಿಸಲು ಅಮ್ಜದ್ ​ಖಾನ್ ಮೊಹಮ್ಮದ್ ನಡೆಸಿರುವ ಮಾತುಕಥೆ ಈ ಕೇಸ್‌ಗೆ ಸಿಕ್ಕಿರುವ ಮೊದಲ ಸಾಕ್ಷಿ ಎನ್ನಲಾಗಿದೆ. 

ವಿಡಿಯೋದಲ್ಲಿರುವ ಮಾತು:

'ನನಗೆ ಅಮ್ಜದ್​ ಖಾನ್‌ಗೂ ಮದುವೆ ಆಗಿದೆ. ಆದರೆ ಎಲ್ಲೂ ಹೇಳಿಕೊಳ್ಳ ಬೇಡಿ ಗೌಪ್ಯವಾಗಿ ಇಡಬೇಕು ಎಂದು ಬೆದರಿಕೆ ಹಾಕಿದ್ದಾರೆ.ಮನೆ ತೆಗೆದುಕೊಳ್ಳಲು ನಾನೇ ಹಣಕಾಸಿನ ನೆರವು ನೀಡಿದ್ದೇನೆ. ಮದುವೆಗಿಂತ ಮೊದಲು ಲಾಕ್‌ಡೌನ್‌ ಟೈಂನಲ್ಲಿ ಅವನಿಗೆ ಏನೂ ಕಲಸ ಇರಲಿಲ್ಲ.ಕೆಲಸವಿಲ್ಲದೇ ಮನೆಯಲ್ಲಿ ಇದ್ದ, ಆಗ 30 ಲಕ್ಷ ಲೋನ್‌ ಕೊಡಿಸಿ 30 ಸಾವಿರದಂತೆ ಲೋನ್‌ ಕಟ್ಟಿದ್ದೇನೆ ಅವನಿಗೆ ಕೆಲಸವಿಲ್ಲದಿದ್ದರೂ ನಾನೇ ಸಾಕಿದ್ದೇನೆ ಮಗುವಿನ ತರಹ ಅವನಿಗೆ ಏನೂ ಆಗದಂತೆ ಜೋಪಾನವಾಗಿ ನೋಡಿಕೊಂಡಿದ್ದೀನಿ' ಎಂದು ಮಾತನಾಡಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ನಟ ದರ್ಶನ್​ ಭೇಟಿಗೆ ಕೋರ್ಟ್​ ಅಸ್ತು; ಇನ್ನೋರ್ವ ಆರೋಪಿಗೆ ಭಾರಿ ದಂಡ- ಆದೇಶದ ಡಿಟೇಲ್ಸ್ ಇಲ್ಲಿದೆ
Appu Birthday: ಪುನೀತ್​ ರಾಜ್ ಎದುರು ಅಂದು ರಶ್ಮಿಕಾ ಕನ್ನಡದಲ್ಲಿ ಹೀಗೆಲ್ಲಾ ಮಾತಾಡಿದ್ರಾ? ಆ ವಿಡಿಯೋ ವೈರಲ್​