ಕನ್ನಡದ ನಟಿ ತೇಜಸ್ವಿನಿ ಪ್ರಕಾಶ್‌ಗೆ ಪಿತೃ ವಿಯೋಗ

Suvarna News   | Asianet News
Published : Apr 24, 2020, 11:17 AM IST
ಕನ್ನಡದ ನಟಿ ತೇಜಸ್ವಿನಿ ಪ್ರಕಾಶ್‌ಗೆ ಪಿತೃ ವಿಯೋಗ

ಸಾರಾಂಶ

ನಟಿ ತೇಜಸ್ವಿನಿ ತಂದೆ ಪ್ರಕಾಶ್‌ ಅನಾರೋಗ್ಯದಿಂದ ಬಳಲುತ್ತಿದ್ದು, ಸಾಗರ್ ಅಪೊಲೊ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕನ್ನಡ ಚಿತ್ರರಂಗ ಸಿಂಪಲ್ ನಟಿ ತೇಜಸ್ವಿನಿ ತಂದೆ ಪ್ರಕಾಶ್‌ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಏಪ್ರಿಲ್ 23ರಂದು ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆ ಸಾಗರ್ ಅಪೊಲೊದಲ್ಲಿ ಕೊನೆ ಉಸಿರೆಳೆದಿದ್ದಾರೆ.

ಸಿಎಂ ಯೋಗಿ ಆದಿತ್ಯನಾಥ್‌ಗೆ ಪಿತೃ ವಿಯೋಗ, ತಾಯಿಗೆ ಭಾವುಕ ಪತ್ರ!

ಈ ಬಗ್ಗೆ ತೇಜಸ್ವಿನಿ ಫೇಸ್‌ಬುಕ್‌ ಖಾತೆಯಲ್ಲಿ 'RIP appa' ಎಂದು ಬರೆದುಕೊಂಡಿದ್ದಾರೆ. ಅವರ ಅಭಿಮಾನಿಗಳು ಪ್ರಕಾಶ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಶ್ರದ್ಧಾಂಜಲಿ ಸಲ್ಲಿಸಿ, ಮೃತರ ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ. 

 

ಕನ್ನಡ ಚಿತ್ರರಂಗದಲ್ಲಿ ಸರಳ ಜೀವನ ಮೆರೆದ ನಟಿ ತೇಜಸ್ವಿನಿ ಅಭಿನಯಿಸಿರುವ ಸಿನಿಮಾಗಳಲ್ಲವೂ ವೃತ್ತಿ ಜೀವನದಲ್ಲಿ ಹೆಸರು ತಂದು ಕೊಟ್ಟಿದೆ.  2007ರಲ್ಲಿ 'ಮಸಣದ ಮಕ್ಕಳು' ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದರು. ತಮ್ಮ ಮೊದಲ ಚಿತ್ರಕ್ಕೆ ಬೆಸ್ಟ್‌ ಡೆಬ್ಯೂ ಪ್ರಶಸ್ತಿ ಹಾಗೂ SICS ಬೆಸ್ಟ್‌ ನಟಿ ಪ್ರಶಸ್ತಿ ಪಡೆದುಕೊಂಡರು. ಇತ್ತೀಚಿಗೆ ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ನನ್ನ ಅರಸಿ ರಾಧೆ' ಧಾರಾವಾಹಿಯಲ್ಲಿ ಅಕ್ಕನ ಪಾತ್ರ ನಿಭಾಯಿಸಿದ್ದರು. ಈ ಹಿಂದೆ ತೇಜಸ್ವಿನಿ ಬಿಗ್ ಬಾಸ್‌ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ್ದರು. ಅಷ್ಟೇ ಅಲ್ಲದೇ ಈಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ರಾಬರ್ಟ್‌' ಚಿತ್ರದಲ್ಲೂ ಕಾಣಿಸಿಕೊಳ್ಳಲಿದ್ದಾರೆ.

ಸಿಎಂ ಯೋಗಿ ಆದಿತ್ಯನಾಥ್‌ಗೆ ಪಿತೃ ವಿಯೋಗ, ತಾಯಿಗೆ ಭಾವುಕ ಪತ್ರ!

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಆಂಧ್ರಪ್ರದೇಶದ X MLA Gummadi Narsaiah ಮನೆಗೆ ಹೋದಾಗ ನನ್ನ ತಂದೆ ಬಳಿಗೆ ಹೋದಂತಾಯ್ತು: Shiva Rajkumar
ಭಾರತೀಯ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಸಿನಿಮಾ: ‘45’ ಟ್ರೇಲರ್ ಬಿಡುಗಡೆಗೆ ಕೌಂಟ್‌ಡೌನ್