ಕೌರವ ವಿತ್ ದರ್ಶನ್‌; ರಾಜಕೀಯವಲ್ಲ ಇದು ಸಿನಿಮಾವಂತೆ!

Published : Nov 09, 2020, 09:35 AM IST
ಕೌರವ ವಿತ್ ದರ್ಶನ್‌; ರಾಜಕೀಯವಲ್ಲ ಇದು ಸಿನಿಮಾವಂತೆ!

ಸಾರಾಂಶ

ರಾಜಕಾರಣಿ ಬಿಸಿ ಪಾಟೀಲ್‌ ಅವರನ್ನು ಭೇಟಿ ಮಾಡಿದ ಜಾಲೆಂಜಿಂಗ್ ಸ್ಟಾರ್. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಈ ಫೋಟೋ ಯಾವ ಸಂದರ್ಭದ್ದು ಗೊತ್ತಾ?

ಆರ್‌ಆರ್‌ ನಗರ ಚುನಾವಣೆ ನಂತರ ನಟ ದರ್ಶನ್‌ ಹಾಗೂ ರಾಜಕಾರಣಿಯಾದ ನಟ ಬಿ.ಸಿ. ಪಾಟೀಲ್‌ ಅವರನ್ನು ಭೇಟಿ ಮಾಡಿದ್ದಾರೆ. ಕೆಲವು ಸಮಯಗಳ ಕಾಲ ಹಲವು ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ. ಇಬ್ಬರನ್ನು ಒಟ್ಟಾಗಿ ನೋಡಿದ ಅಭಿಮಾನಿಗಳು ಯಾವುದೋ ಥ್ರಿಲ್ಲಿಂಗ್ ವಿಚಾರ ಕಾದಿದೆ ಎನ್ನುತ್ತಿದ್ದಾರೆ.

ಚುನಾವಣಾ ಅಖಾಡಕ್ಕೆ ಎಂಟ್ರಿ ಕೊಟ್ಟ ಡಿ-ಬಾಸ್ ವಿರುದ್ಧ ದೂರು! 

ಆರ್‌ಆರ್‌ ನಗರ ಉಪಚುನಾವಣೆಯಲ್ಲಿ ದರ್ಶನ್‌, ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಪ್ರಚಾರ ಮಾಡುವಾಗ ರಾಜಕೀಯ ನಾಯಕ ಬಿ.ಸಿ. ಪಾಟೀಲ್‌ ಕೂಡ ಜೊತೆಗಿದ್ದರು. ಅಲ್ಲದೇ ಕಳೆದ ವರ್ಷ ನಡೆದ ರಾಷ್ಟ್ರೀಯ ಯುವ ಉತ್ಸವದಲ್ಲಿ ದಚ್ಚು 'ಇಳಕಲ್ ಸೀರೆ ಅಂದ್ರೆ ಬಿ.ಸಿ. ಪಾಟೀಲ್ ನೆನಪಾಗುತ್ತಾರೆ' ಎಂದು ವೇದಿಕೆ ಮೇಲೆ ನೆನಪಿಸಿಕೊಂಡಿದ್ದರು.

ಫೋಟೋದಲ್ಲಿ ಪಾಟೀಲ್ ಹಾಗೂ ದರ್ಶನ್‌ ಜೊತೆ ಸಚಿವ ಎಸ್‌ ಟಿ ಸೋಮಶೇಖರ್‌ ಕೂಡ ಇದ್ದರು. ಎಲ್ಲರೂ ಒಟ್ಟಾಗಿ ಸೇರಿ ರಾಜಕೀಯ ಬೆಳವಣಿಗೆ ಹಾಗೂ ಸಿನಿಮಾ ಕ್ಷೇತ್ರದ ಬಗ್ಗೆ ಚರ್ಚಿಸಿದ್ದಾರೆ. ಇನ್ನು ಬಿಸಿ ಪಾಟೀಲ್‌ ಮತ್ತೆ ಸಿನಿಮಾ ಮಾಡುವ ಮನಸ್ಸು ಮಾಡಿದ್ದು, ದರ್ಶನ್‌ ಜೊತೆ  ಕೈ ಜೋಡಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ. 

ದರ್ಶನ್‌ ಹಾಗೂ ನಿಖಿಲ್‌ ನಡುವೆ ಏನಾಗಿದೆ?; ವೈರತ್ವಕ್ಕೆ ಉತ್ತರ ಸಿಕ್ತು! 

ಚಾಲೆಂಜಿಂಗ್ ಸ್ಟಾರ್ ದರ್ಶನ್ ಎಲ್ಲರೊಟ್ಟಿಗೆ ಉತ್ತಮ ಸಂಬಂಧ ಹೊಂದಿರುವುದನ್ನು ನೋಡಿ ಅಭಿಮಾನಿಗಳು ಕಾಮೆಂಟ್‌ ಮೂಲಕ ಸಂತಸ ವ್ಯಕ್ತ ಪಡಿಸಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ರಾಕೇಶ್ ಅಡಿಗ ಮದುವೆ ಫಿಕ್ಸ್: 'ನನಗೆ ಬೇಕಾದ ಹುಡುಗಿ ಸಿಕ್ಕಿದ್ದಾರೆ' ಎಂದ ಬಿಗ್‌ ಬಾಸ್ ಖ್ಯಾತಿಯ ನಟ!
BOSS Review: 'ಬಾಸ್' ಸಿನಿಮಾದಲ್ಲಿ ಇರೋದು ಯಾವ ಬಾಸ್‌? ಯಾವ ಕ್ರಿಕೆಟಿಗ..? ಕಥೆ ನೋಡಿ ನೀವೇ 'ಡಾಟ್' ಕನೆಕ್ಟ್ ಮಾಡ್ಕೊಳ್ಳಿ!