ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ನವರಂಗ್, ಊರ್ವಶಿ ಚಿತ್ರಮಂದಿರದ ಮಾಲಿಕ, ಕನ್ನಡ ಸಿನಿಮಾರಂಗದ ಖ್ಯಾತ ನಿರ್ಮಾಪಕ ಕೆ.ಸಿ.ಎನ್ ಮೋಹನ್ ನಿಧನರಾಗಿದ್ದಾರೆ.
ಸ್ಯಾಂಡಲ್ವುಡ್ನ ಖ್ಯಾತ ನಿರ್ಮಾಪಕ, ಅನೇಕ ನವರಂಗ್, ಊರ್ವಶಿ ಚಿತ್ರಮಂದಿರಗಳಮಾಲಿಕ ಕೆಸಿಎನ್ ಮೋಹನ್ ನಿಧನರಾಗಿದ್ದಾರೆ. ಸಿನಿಮಾರಂಗದಲ್ಲಿ ಹಲವು ವರ್ಷಗಳಿಂದ ಸಕ್ರಿಯರಾಗಿದ್ದ ಕೆಸಿಎನ್ ಮೋಹನ್ ನಿರ್ಮಾಪಕರಾಗಿ ಹಾಗೂ ಪ್ರದರ್ಶಕರಾಗಿ ಸಿನಿಮಾರಂಗಕ್ಕೆ ಸೇವೆ ಸಲ್ಲಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ನಿರ್ಮಾಪಕ ಕೆಸಿಎನ್ ಮೋಹನ್ ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮೋಹನ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯೆಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಿಡ್ನಿ ವೈಫಲ್ಯದಿಂದ ಕೆಸಿಎನ್ ಮೋಹನ್ ನಿಧನರಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಅವರಿಗೆ 63 ವರ್ಷ ವಯಸ್ಸಾಗಿತ್ತು.
ಕೆಸಿಎನ್ ಮೋಹನ್ ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ. ಹಲವಾರು ಸಿನಿಮಾಗಳನ್ನು ಕೆಸಿಎನ್ ಮೋಹನ್ ನಿರ್ಮಾಣ ಮಾಡಿದ್ದರು. ಸ್ಯಾಂಡಲ್ ವುಡ್ನ ದೊಡ್ಡ ದೊಡ್ಡ ಕಲಾವಿದ ಸಿನಿಮಾಗಳಿಗೆ ಬಂಡವಾಳ ಹೂಡಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ನವರಂಗ್, ಊರ್ವಶಿ ಚಿತ್ರಮಂದಿರಗಳ ಮಾಲೀಕರಾಗಿದ್ದ ಅವರು ಪ್ರದರ್ಶಕರಾಗಿ ಕನ್ನಡ ಚಿತ್ರರಂಗಕ್ಕೆ ಕೊಡುಗೆ ನೀಡಿದ್ದರು.
ಭೀಕರ ರಸ್ತೆ ಅಪಘಾತ: 'ದಿಲ್ ಸೆ ಬುರಾ ಲಗ್ತಾ ಹೇ' ಮೀಮ್ ಖ್ಯಾತಿಯ ಯೂಟ್ಯೂಬರ್ ದೇವರಾಜ್ ನಿಧನ
ನಟಿ ರಮ್ಯಾ ನಟನೆಯ ‘ಜೂಲಿ’, ‘ರಾಮರಾಜ್ಯದಲ್ಲಿ ರಾಕ್ಷಸರು’, ‘ಜಯಸಿಂಹ’, ‘ಧರ್ಮ ಯುದ್ಧ’, ಶಂಕರ್ ನಾಗ್ ನಟನೆಯ ‘ಭಲೇ ಚತುರ’ ಸೇರಿದಂತೆ ಮುಂತಾದ ಸಿನಿಮಾಗಳನ್ನು ಕೆಸಿಎನ್ ಮೋಹನ್ ನಿರ್ಮಾಣ ಮಾಡಿದ್ದರು. ಮೋಹನ್ ಅವರ ತಂದೆ ಕೆಸಿಎನ್ ಗೌಡ ಕೂಡ ನಿರ್ಮಾಪಕರಾಗಿ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು.
'ಪೊಗರು' ಸಿನಿಮಾದಲ್ಲಿ ನಟಿಸಿದ್ದ ಜರ್ಮನ್ ಬಾಡಿಬಿಲ್ಡರ್ ನಿಧನ: 30ನೇ ವಯಸ್ಸಿಗೆ ಪ್ರಾಣಬಿಟ್ಟ ಜೋ ಲಿಂಡ್ನರ್
ಡಾ. ರಾಜ್ಕುಮಾರ್ ನಟನೆಯ ಹಲವು ಸಿನಿಮಾಗಳಿಗೆ ಕೆಸಿಎನ್ ಗೌಡ ಅವರು ಬಂಡವಾಳ ಹೂಡಿದ್ದರು. ಕಪ್ಪು ಬಿಳುಪಿನಲ್ಲಿ ಮೂಡಿಬಂದಿದ್ದ ರಾಜ್ಕುಮಾರ್ ನಟನೆಯ ‘ಸತ್ಯ ಹರಿಶ್ಚಂದ್ರ’ ಮತ್ತು ‘ಕಸ್ತೂರಿ ನಿವಾಸ’ ಸಿನಿಮಾವನ್ನು ಕಲರ್ಗೆ ಪರಿವರ್ತಿಸಿ ಬಿಡುಗಡೆ ಮಾಡಿದ ಖ್ಯಾತಿ ಕೆಸಿಎನ್ ಮೋಹನ್ ಅವರಿಗೆ ಸಲ್ಲುತ್ತದೆ. ಮೋಹನ್ ಅವರ ಪತ್ನಿ ರೇಣುಕಾ ಮೋಹನ್ ಅವರು ನಿರ್ದೇಶಕಿಯಾಗಿ ಗುರುತಿಸಿಕೊಂಡಿದ್ದರು. ‘ಜೂಲಿ’ ಸಿನಿಮಾ ಮೂಡಿಬಂದಿದ್ದು ರೇಣುಕಾ ಅವರ ನಿರ್ದೇಶನದಲ್ಲಿ. 2017ರಲ್ಲಿ ರೇಣುಕಾ ನಿಧನರಾದರು.