
ದೇಶಾದ್ಯಂತ ಸದ್ದು ಮಾಡಿದ ತಮಿಳುನಾಡಿನ ಪಾರಂಪರಿಕ ಆಚರಣೆ ಜಲ್ಲಿಕಟ್ಟು ಬಗ್ಗೆ ಕನ್ನಡ ಚಿತ್ರರಂಗದಲ್ಲಿ ಸಿನಿಮಾ ಮಾಡಲಾಗುತ್ತಿದೆ. ಕೆಲವು ತಿಂಗಳುಗಳ ಹಿಂದೆ ಬೆಂಗಳೂರಿನ ಕಾಳಿಕಾಂಬ ದೇವಾಲಯದ ಬಳಿ ಇರುವ ಸಭಾಂಗಣದಲ್ಲಿ ಅದ್ಧೂರಿಯಾಗಿ ಮುಹೂರ್ತ ಮಾಡಲಾಗಿತ್ತು.
ಇದೀಗ ಚಿತ್ರೀಕರಣ ಮುಗಿಸಿದ ತಂಡ ರಿಲೀಸ್ಗೆ ಸಿದ್ಧತೆ ನಡೆಸಿದೆ. ಸದ್ಯ ಈ ಚಿತ್ರ ಸೆನ್ಸರ್ ಮಂಡಳಿಯಿಂದ A ಸರ್ಟಿಫಿಕೇಟ್ ಪಡೆದುಕೊಂಡಿದೆ. ಆಲ್ವಿನ್ ಫ್ರಾನ್ಸಿಸ್ ನಿರ್ದೇಶನದ ‘ಜಲ್ಲಿಕಟ್ಟು’ ಚಿತ್ರಕ್ಕೆ ಸೆನ್ಸಾರ್ ಮಂಡಳಿ ‘ಎ’ ಸರ್ಟಿಫಿಕೇಟ್ ನೀಡಿದೆ. ಸುರೇಶ್ ನಿರ್ಮಿಸಿರುವ ಚಿತ್ರದಲ್ಲಿ ಪ್ರಭು ಸೂರ್ಯ, ಶಿಲ್ಪ, ನಿಖಿತಾ, ಶೋಭರಾಜ್, ಸುಚೇಂದ್ರ ಪ್ರಸಾದ್ ನಟಿಸಿದ್ದಾರೆ. ವೀರೇಶ್ ಛಾಯಾಗ್ರಹಣ, ವಿಜಯ್ ಯಾಡ್ರ್ಲಿ ಸಂಗೀತ, ನಾಗೇಶ್ ನೃತ್ಯ, ವೈಲೆಂಟ್ ವೇಲು ಅವರ ಸಾಹಸವಿದೆ.
ಚಿತ್ರಮಂದಿರಗಳಿಗೆ 100% ಸೀಟಿಂಗ್ ನೀಡಿದ್ದರೆ ಹಾಗೂ ಅಂದುಕೊಂಡಂತೆ ನಡೆದರೆ ಸಿನಿಮಾವನ್ನು ನವೆಂಬರ್ನಲ್ಲಿ ದೀಪಾವಳಿ ಹಬ್ಬಕ್ಕೆ ಬಿಡುಗಡೆ ಮಾಡುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.