
ಬೆಂಗಳೂರು (ಆ.27): ಸ್ಯಾಂಡಲ್ವುಡ್ ಖ್ಯಾತ ನಿರ್ದೇಶಕ ಕಮ್ ನಿರ್ಮಾಪಕ ಕೆ ಪ್ರಭಾಕರ್ ನಿಧನರಾಗಿದ್ದಾರೆ. ಇಂದು ಮಧ್ಯಾಹ್ನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದರು. ಕೆಲ ದಿನಗಳ ಹಿಂದಷ್ಟೇ ಹೃದಯಾಘಾತಕ್ಕೆ ಒಳಗಾಗಿದ್ದ ಕೆ ಪ್ರಭಾಕರ್ ಅವರನ್ನು ಅಪೋಲೋ ಆಸ್ಪತ್ರೆ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಪಲಿಸದೆ ಇಂದು ನಿಧನರಾಗಿದ್ದಾರೆ.
ಕನ್ನಡಕ್ಕೆ ಸೂಪರ್ ಹಿಟ್ ಸಿನಿಮಾಗಳನ್ನ ಕೊಟ್ಟ ನಿರ್ಮಾಪಕರಾಗಿರುವ ಪ್ರಭಾಕರ್ ಅವರು ವಿಷ್ಣುವರ್ಧನ್, ಉಪೇಂದ್ರ, ಅಂಬರೀಶ್, ಶಶಿಕುಮಾರ್ ಅವರ ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ಅವಳೇ ನನ್ನ ಗೆಳತಿ, ಮುದ್ದಿನ ಮಾವ, ತುಂಬಿದ ಮನೆ, ಸೋಲಿಲ್ಲದ ಸರದಾರ, ಮುಂತಾದ ಹಿಟ್ ಚಿತ್ರಗಳನ್ನು ನಿರ್ಮಿಸಿದವರಲ್ಲಿ ಕೆ.ಪ್ರಭಾಕರ್ ಕೂಡ ಒಬ್ಬರು. ಶಿವರಾಜ್ ಕುಮಾರ್ ಮತ್ತು ರಾಧಿಕಾ ಕುಮಾರಸ್ವಾಮಿ ನಟನೆಯ 'ಅಣ್ಣ - ತಂಗಿ' ಚಿತ್ರಕ್ಕೂ ಇವರೇ ನಿರ್ಮಾಪಕರಾಗಿದ್ದರು. ಇದಲ್ಲದೆ ಗ್ಯಾಂಗ್ ಲೀಡರ್, ಸೇರಿದಂತೆ ಕನ್ನಡದಲ್ಲಿ ಹಲವು ಚಿತ್ರಗಳನ್ನು ನಿರ್ಮಾಣ ಮಾಡಿದ್ದು, ತೆಲುಗು ಚಿತ್ರರಂಗದಲ್ಲೂ ಕೂಡ ಹಲವು ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ.
ನಿರ್ಮಾಪಕ, ನಿರ್ದೇಶಕ ಕೆ. ಪ್ರಭಾಕರ್ ಗೆ 64 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಎನ್ಆರ್ ಕಾಲೋನಿಯಲ್ಲಿ ಕೆ ಪ್ರಭಾಕರ್ ನಿವಾಸವಿದ್ದು, ಮುಂದಿನ ಕಾರ್ಯಕ್ರಮಗಳ ಬಗ್ಗೆ ಹೆಚ್ಚಿ ಮಾಹಿತಿ ತಿಳಿದುಬಂದಿಲ್ಲ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.