ರಾಜ್‌ ಮೊಮ್ಮಗನ ಸಿನಿಮಾ ರಿಲೀಸ್‌ಗೂ ಮುನ್ನವೇ ನಿರ್ಮಾಪಕ ಮೂರ್ತಿ ನಿಧನ!

Suvarna News   | Asianet News
Published : Jul 04, 2020, 10:22 AM IST
ರಾಜ್‌ ಮೊಮ್ಮಗನ ಸಿನಿಮಾ ರಿಲೀಸ್‌ಗೂ ಮುನ್ನವೇ ನಿರ್ಮಾಪಕ ಮೂರ್ತಿ ನಿಧನ!

ಸಾರಾಂಶ

ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ನಿರ್ಮಾಪಕ ಎನ್‌ಎಲ್‌ಎನ್‌ ಮೂರ್ತಿ ಬಿಜಿಎಸ್ ಆಸ್ಪತ್ರೆಯಲ್ಲಿ  ಕೊನೆ ಉಸಿರೆಳೆಸಿದ್ದಾರೆ.

ವಿನಯ್ ರಾಜ್‌ಕುಮಾರ್ ಅವರ ಅಭಿನಯನದ  ಬಹು ನಿರೀಕ್ಷಿತ್ ಸಿನಿಮಾ 'ಗ್ರಾಮಾಯಣ' ನಿರ್ಮಾಣ ಮಾಡಿದ ಮೂರ್ತಿ ನಿನ್ನೆ (ಜುಲೈ 3) ವಿಧಿವಶರಾಗಿದ್ದಾರೆ.

ಹಲವು ದಿನಗಳಿಂದ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಮೂರ್ತಿ ಅವರು, ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.  ಚಿಕಿತ್ಸೆ ಫಲಕಾರಿಯಾಗದೇ ಅಲ್ಲಿಯೇ ಕೊನೆ ಉಸಿರೆಳೆದಿದ್ದಾರೆ. ಮೂರ್ತಿ ಅವರ ತಾಯಿಯೂ ಗುರುವಾರ (ಜುಲೈ 2) ಅಸುನೀಗಿದ್ದರು.

'ಏಕ್ ದೋ ತೀನ್' ಖ್ಯಾತಿಯ ಬಾಲಿವುಡ್ ನೃತ್ಯ ಸಂಯೋಜಕಿ ಸರೋಜ್ ಖಾನ್ ನಿಧನ

ಕಾಮಿಡಿ ಸ್ಟಾರ್ ಶರಣ್‌ ಜೊತೆ ಸಿನಿಮಾ ಮಾಡಬೇಕೆಂಬ ಆಸೆ ಹೊತ್ತಿದ್ದ ಮೂರ್ತಿ,  ಈ ಹಿಂದೆ ಭಗತ್ ರಾಜ್‌ ಬಳಿ ಚಿತ್ರಕತೆ ಬರೆಸಿದ್ದರು. ಅಷ್ಟೇ ಅಲ್ಲದೆ ಶರಣ್‌ಗೆ ಕಥೆಯೂ ಹೇಳಿ ಆಗಿತ್ತು. ಆದರೆ ಸಿನಿಮಾ ಸೆಟ್ಟೇರುವ ಮುನ್ನವೇ ಮೂರ್ತಿ ಇನ್ನಿಲ್ಲ, ಎಂಬ ಸುದ್ದಿ ಕೇಳಿ ಚಿತ್ರರಂಗ ಶಾಕ್‌ನಲ್ಲಿದೆ.

ಬುಲೆಟ್ ಪ್ರಕಾಶ್ ಬೆನ್ನಲ್ಲೇ ಮತ್ತೊಬ್ಬ ಹಾಸ್ಯ ನಟನನ್ನು ಕಳೆದುಕೊಂಡ ಸ್ಯಾಂಡಲ್‌ವುಡ್!

ವಿನಯ್ ಅಭಿನಯದ ಗ್ರಾಮಾಯಣ ಚಿತ್ರದ ಟ್ರೇಲರ್‌ ಬಿಡುಗಡೆ ಆಗಿದ್ದು, ಸಿನಿಮಾ ಚಿತ್ರೀಕರಣ ಇನ್ನೂ ಬಾಕಿ ಉಳಿದಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
ಅಮ್ಮನಿಗೆ ಇರಿಟೇಟ್‌ ಮಾಡ್ಬೇಡ, ಕೂಗ್ತಾಳೆ ಅಂತ ಮಗನಿಗೆ ದರ್ಶನ್‌ ಹೇಳ್ತಾರೆ; ಪತ್ನಿ