Drishya 2 Release date Fixed: ರವಿಚಂದ್ರನ್-ನವ್ಯಾ ನಟನೆಯ ಸಿನಿಮಾ ರಿಲೀಸ್ ಡೇಟ್ ಫಿಕ್ಸ್

By Kannadaprabha NewsFirst Published Dec 8, 2021, 12:06 PM IST
Highlights

ಬಹು ನಿರೀಕ್ಷಿತ ದೃಶ್ಯ ಸಿನಿಮಾದ ಸೀಕ್ವೆಲ್ ದೃಶ್ಯ 2(Drishya 2) ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಫ್ಯಾಮಿಲಿ ಎಂಟರ್‌ಟೈನರ್ ಸಿನಿಮಾ ಕುರಿತು ಈಗಾಗಲೇ ಪ್ರೇಕ್ಷಕರು ಕುತೂಹಲದಿಂದ ಕಾಯುತ್ತಿದ್ದಾರೆ.

ಕ್ರೇಜಿಸ್ಟಾರ್ ರವಿಚಂದ್ರನ್(Ravichandran) ನಟನೆಯ ಫ್ಯಾಮಿಲಿ ಥ್ರಿಲ್ಲರ್ ‘ದೃಶ್ಯ 2’ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯು/ಎ ಸರ್ಟಿಫಿಕೇಟ್ ನೀಡಿದೆ. ಈ ಸಿನಿಮಾ ಡಿ.10ಕ್ಕೆ ರಾಜ್ಯಾ ದ್ಯಂತ ಬಿಡುಗಡೆ ಯಾಗಲಿದೆ. 2014ರಲ್ಲಿ ಈ ಸಿನಿಮಾದ ಮೊದಲ ಭಾಗ ‘ದೃಶ್ಯ’(Drishya) ಶೀರ್ಷಿಕೆಯಲ್ಲಿ ಬಿಡುಗಡೆಯಾಗಿ ಯಶಸ್ವಿಯಾಗಿತ್ತು. ರವಿಚಂದ್ರನ್ ರಾಜೇಂದ್ರ ಪೊನ್ನಪ್ಪನಾಗಿ ಮಿಂಚಿದ್ದರು. ಇದೀಗ ಈ ಸಿನಿಮಾದ ಸೀಕ್ವಲ್ ‘ದೃಶ್ಯ 2’ ತೆರೆಗೆ ಬರಲು ಕ್ಷಣಗಣನೆ ಆರಂಭವಾಗಿದೆ. ಪಿ ವಾಸು ನಿರ್ದೇಶನದ ಚಿತ್ರದಲ್ಲಿ ರಾಜೇಂದ್ರ ಪೊನ್ನಪ್ಪ ಕುಟುಂಬದ ಕಥೆಯೇ ಮುಖ್ಯವಾಗಿದ್ದು, ರವಿಚಂದ್ರನ್ ಕುಟುಂಬವಾಗಿ ನವ್ಯಾ ನಾಯರ್, ಆರೋಹಿ ನಾರಾಯಣ್, ಉನ್ನತಿ ಕಾಣಿಸಿಕೊಂಡಿದ್ದಾರೆ.

ಅನಂತ್‌ನಾಗ್ ಮುಖ್ಯಪಾತ್ರದಲ್ಲಿದ್ದಾರೆ. ಪ್ರಭು ಶಿವಾಜಿ, ಲಾಸ್ಯ ನಾಗರಾಜ್, ಸಾಧು ಕೋಕಿಲ ಮತ್ತಿತರರ ತಾರಾಗಣವಿದೆ. ಈ4 ಎಂಟರ್ ಟೈನ್‌ಮೆಂಟ್ ನಿರ್ಮಿಸುತ್ತಿರುವ ಚಿತ್ರಕ್ಕೆ ಸಿ ವಿ ಸಾರಥಿ ಕಾರ್ಯಕಾರಿ ನಿರ್ಮಾಪಕರು. ಮಲಯಾಳಂನ ‘ದೃಶ್ಯಂ 2’ ಚಿತ್ರದ ರೀಮೇಕ್ ಇದು.

Drishya 2: ರವಿಚಂದ್ರನ್ ನಟನೆಯ ದೃಶ್ಯ 2 ಸಿನಿಮಾ ಯಾಕೆ ನೋಡಬೇಕು?

ಕ್ರೇಜಿಸ್ಟಾರ್​ ವಿ.ರವಿಚಂದ್ರನ್ (V.Ravichandran) ಅಭಿನಯದ 'ದೃಶ್ಯ 2' (Drishya 2) ಚಿತ್ರದ ಟ್ರೇಲರ್ (Trailer) ಇತ್ತೀಚೆಗೆ ಬಿಡುಗಡೆಯಾಗಿ ಸಿನಿರಸಿಕರಿಂದ ಮೆಚ್ಚುಗೆಯನ್ನು ಪಡೆದಿತ್ತು. ಚಿತ್ರವು ಡಿಸೆಂಬರ್​ 10ರಂದು ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಈಗಾಗಲೇ ಘೋಷಿಸಿದೆ. ಈ ನಡುವೆ ಚಿತ್ರತಂಡ ಚಿತ್ರದ ಹಾಡೊಂದನ್ನು ಬಿಡುಗಡೆ ಮಾಡಿದೆ. 'ಮಳೆಬಿಲ್ಲೇ ಮರೆಯಾಗುವೇ ನೀ ಏಕೆ' (Malebille) ಎಂಬ ಲಿರಿಕಲ್ ಹಾಡನ್ನು ಚಿತ್ರತಂಡ ಜೀ ಮ್ಯೂಸಿಕ್ ಸೌಥ್ ಯುಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆ ಮಾಡಿದೆ. ಅನೂಪ್ ಭಂಡಾರಿ (Anup Bhandari) ಈ ಹಾಡಿಗೆ ಸಾಹಿತ್ಯ ರಚಿಸಿದ್ದು, ಹರಿಚರಣ್ (Haricharan) ಕಂಠಸಿರಿಯಲ್ಲಿ ಹಾಡು ಮೂಡಿಬಂದಿದೆ. ಅಜನೀಶ್‌ ಲೋಕನಾಥ್ (Ajaneesh Loknath) ಸಂಗೀತ ಸಂಯೋಜನೆ ಹಾಡಿಗಿದೆ.

"

'ದೃಶ್ಯ 2' ಚಿತ್ರದ ಈ ಹಾಡಿನ ಬಗ್ಗೆ ರವಿಚಂದ್ರನ್ ಅವರು ತಮ್ಮ ಇನ್‌ಸ್ಟಾಗ್ರಾಮ್ (Instagram) ಖಾತೆಯಲ್ಲಿ 'ನಮ್ಮವರು ನಮ್ಮ ನೆರಳಾಗಿ ಕಾದರೆ, ಇರದು ಯಾವ ತೊಂದರೆ! ಮಳೆಬಿಲ್ಲೇ ಹಾಡು ಬಿಡುಗಡೆಯಾಗಿದೆ' ಎಂದು ಬರೆದುಕೊಂಡು ಹಾಡಿನ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ. ಚಿತ್ರದ ಟ್ರೇಲರ್‌ನ್ನು ಇತ್ತೀಚೆಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kiccha Sudeep) ಬಿಡುಗಡೆ ಮಾಡಿದ್ದರು. ಜೊತೆಗೆ 'ದೃಶ್ಯ' (Drishya) ಮೊದಲ ಭಾಗದ ಸಿನಿಮಾ ಮಾತುಕತೆ ಆರಂಭವಾಗಿದ್ದು, ನಮ್ಮ 'ಮಾಣಿಕ್ಯ' ಚಿತ್ರದ ಚಿತ್ರೀಕರಣ ಸಮಯದಲ್ಲಿ. ನಾನು ರವಿ ಸರ್‌ಗೆ ಒಂದು ಚೆನ್ನಾಗಿರುವ ಮಲಯಾಳಂ ಕಥೆ ಬಂದಿದೆ ಕೇಳಿ ಅಂತ ಹೇಳಿದೆ. ಅವರು ಮೊದಲು ಕೇಳಲಿಲ್ಲ. ನಂತರ ಕೆಲವು ದಿನಗಳ ನಂತರ ಕಥೆ ಕೇಳಿದರು. ಹೀಗೆ 'ದೃಶ್ಯ' ಚಿತ್ರ ಆರಂಭವಾಯಿತು ಎಂದು ಸುದೀಪ್ ಟ್ರೇಲರ್ ಸಮಾರಂಭದಲ್ಲಿ ಹೇಳಿದ್ದರು.

ಮೋಹನ್‌ ಲಾಲ್ ಅಭಿನಯದ ಮಲಯಾಳಂನ ದೃಶ್ಯಂ ರಿಮೇಕ್

ಮಲಯಾಳಂನಲ್ಲಿ ನಟ ಮೋಹನ್‌ಲಾಲ್‌ (Mohanlal) ನಟಿಸಿದ್ದ 'ದೃಶ್ಯಂ 2' (Drishyam 2) ಚಿತ್ರದ ರಿಮೇಕ್‌ ಇದಾಗಿದೆ. ಇತ್ತೀಚೆಗೆ ಮಲಯಾಳಂನಲ್ಲಿ ಈ ಚಿತ್ರ ಬಿಡುಗಡೆಯಾಗಿ ಸೂಪರ್ ಹಿಟ್‌ ಆಗಿದೆ. ವಿಶೇಷವೆಂದರೆ ರಾಜೇಂದ್ರ ಪೊನ್ನಪ್ಪ ಪಾತ್ರದಲ್ಲಿ ಪಕ್ಕಾ ಫ್ಯಾಮಿಲಿ ಮ್ಯಾನ್​ ಆಗಿ ರವಿಚಂದ್ರನ್ ಕಾಣಿಸಿಕೊಂಡಿದ್ದಾರೆ. 'ದೃಶ್ಯ' ಮೊದಲ ಭಾಗದಲ್ಲಿ ನಾಯಕಿಯಾಗಿ ನಟಿಸಿದ್ದ ನವ್ಯ ನಾಯರ್ (Navya Nair)​ ಈ ಚಿತ್ರದಲ್ಲೂ ನಾಯಕಿಯಾಗಿ ನಟಿಸುತ್ತಿದ್ದಾರೆ. ರವಿಚಂದ್ರನ್ ಅವರ ಪುತ್ರಿ ಪಾತ್ರದಲ್ಲಿ ಆರೋಹಿ ನಾರಾಯಣ್ (Arohi Narayan)​ ಕಾಣಿಸಿಕೊಂಡಿದ್ದಾರೆ

click me!