ಕಾಕತಾಳೀಯವೋ ಶಾಪವೋ..? 'ಕುರುಕ್ಷೇತ್ರ'ದ ಈ ಇಬ್ಬರೂ ಈಗ ಜೈಲುಪಾಲು!

By Shriram BhatFirst Published Sep 16, 2024, 8:00 PM IST
Highlights

ಕುರುಕ್ಷೇತ್ರ ಸಿನಿಮಾ ಬಂದಿದ್ದೂ ಆಯ್ತು ಯಶಸ್ಸು ಕಂಡಿದ್ದು ಆಯ್ತು. ಆದ್ರೆ ಈಗ ಅಚ್ಚರಿ ಎಂಬಂತೆ, ಈ ಕುರುಕ್ಷೇತ್ರದ ನಾಯಕ ದರ್ಶನ್ ಮತ್ತು ನಿರ್ಮಾಪಕ ಮುನಿರತ್ನ ಇಬ್ಬರು ಕೂಡ ಜೈಲು ಸೇರಿದ್ದಾರೆ. ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲಿನಲ್ಲಿದ್ರೆ, ಮುನಿರತ್ನ ಅವರು ಜೀವ ಬೆದರಿಕೆ ಕೇಸ್ ನಲ್ಲಿ ಶನಿವಾರ ಅಂದರ್ ಆಗಿದ್ದಾರೆ.

ಸ್ಯಾಂಡಲ್‌ವುಡ್ ನಲ್ಲಿ 2019ರಲ್ಲಿ ತೆರೆಗೆ  ಬಂದ 'ಕುರುಕ್ಷೇತ್ರ' ಸಿನಿಮಾ ದೊಡ್ಡ ಯಶಸ್ಸು ಕಂಡಿದೆ. 3ಡಿ ಮೋಡಿಯಲ್ಲಿ ಈ ಪೌರಾಣಿಕ ಯುದ್ಧದ (Kurukshetra) ಸಿನಿಮಾವನ್ನು ನಿರ್ಮಾಪಕ ಮುನಿರತ್ನ ಅದ್ದೂರಿಯಾಗಿ ನಿರ್ಮಾಣ ಮಾಡಿದ್ರು. ದರ್ಶನ್ ಕುರುವಂಶದ ದೊರೆ ದುರ್ಯೋಧನನಾಗಿ ಅಬ್ಬರಿಸಿದ್ರು. ಅಚ್ಚರಿ ಅಂದ್ರೆ ಈ ಇಬ್ಬರು ಕೂಡ ಈಗ ಜೈಲಿನಲ್ಲಿದ್ದಾರೆ. ಹಾಗಾದ್ರೆ ಕುರುಕ್ಷೇತ್ರದ ಶಾಪವೇ ಇದರ ನಟ, ನಿರ್ಮಾಪಕರ ಜೈಲುವಾಸಕ್ಕೆ ಕಾರಣನಾ..? ಆ ಕುರಿತ ರೋಚಕ ಸ್ಟೋರಿ ಇಲ್ಲಿದೆ ನೋಡಿ.

ಸ್ಯಾಂಡಲ್ ವುಡ್ ನಿರ್ಮಾಪಕ ಮುನಿರತ್ನ ಜೈಲುಪಾಲು, ಕುರುಕ್ಷೇತ್ರದ ನಟ, ನಿರ್ಮಾಪಕರಿಗೆ ಬೆನ್ನುಬಿತ್ತಾ ಶಾಪ..?
ಯೆಸ್ ನಿರ್ಮಾಪಕ ಹಾಗೂ ಶಾಸಕ ಮುನಿರತ್ನ ಜೈಲು ಪಾಲಾಗಿದ್ದಾರೆ. ಜಾತಿನಿಂದನೆ ಹಾಗೂ ಜೀವ ಬೆದರಿಕೆ ಕೇಸ್ ನಲ್ಲಿ ಮುನಿರತ್ನರನ್ನ ಬಂಧಿಸಲಾಗಿದೆ. ಈ ಬಗ್ಗೆ ರಾಜಕೀಯ ಕೆಸರೆರಚಾಟಗಳು ನಡೀತಾ ಇವೆ. ಈ ರಾಜಕೀಯವನ್ನ ಪಕ್ಕಕ್ಕಿಟ್ಟು ನೋಡೋದಾದ್ರೆ ಕನ್ನಡ ಚಿತ್ರರಂಗದಲ್ಲಿ ಮುನಿರತ್ನ ಪ್ರತಿಷ್ಠಿತ ನಿರ್ಮಾಪಕ ಆಗಿದ್ದವರು. ಅಷ್ಟೇ ಅಲ್ಲ ನಿರ್ಮಾಪಕರ ಸಂಘದ ಅಧ್ಯಕ್ಷ ಕೂಡ ಆಗಿದ್ರು.

Latest Videos

ಫಿಲ್ಮ್ ಚೇಂಬರ್‌ನಲ್ಲಿ 'ಮೀಟೂ-ಫೈರ್' ವಾರ್; ಕಮೀಟಿ ಬೇಕಾ ಬೇಡ್ವಾ ಬಿಸಿಬಿಸಿ ಚರ್ಚೆ!

2002ರಲ್ಲಿ ಕಂಬಾಲಪಲ್ಲಿ ಅನ್ನೋ ಸಿನಿಮಾ ನಿರ್ಮಿಸೋ ಮೂಲಕ ಗಾಂಧಿನಗರಕ್ಕೆ ಎಂಟ್ರಿ ಕೊಟ್ಟ ಮುನಿರತ್ನ ಸ್ಯಾಂಡಲ್ ವುಡ್ ನ ಅನೇಕ ಬಿಗ್ ಹೀರೋ ಗಳ ಜೊತೆಗೆ ಸಿನಿಮಾ ಮಾಡಿದ್ರು. ಉಪೇಂದ್ರ ನಟನೆಯ ರಕ್ತಕಣ್ಣೀರು ಮತ್ತು ಕಠಾರಿವೀರ ಸುರಸುಂದರಾಂಗಿ ಸಿನಿಮಾಗಳ ನಿರ್ಮಾಪಕ ಇವರೇ.

2019ರಲ್ಲಿ ಮುನಿರತ್ನ ಕುರುಕ್ಷೇತ್ರ ಪೌರಾಣಿಕ ಯುದ್ಧಕಥೆಯನ್ನ ಬಿಗ್ ಸ್ಕ್ರೀನ್ ಮೇಲೆ ತರೋದಕ್ಕೆ ಪ್ಲಾನ್ ಮಾಡಿದ್ರು. ದುರ್ಯೋಧನ ಪಾತ್ರಕ್ಕೆ ದರ್ಶನ್ ನ ಕಾಸ್ಟ್ ಮಾಡಿಕೊಂಡ್ರು. ಬಹುಭಾಷಾ ನಟರುಗಳು, ತ್ರಿಡಿ ತಂತ್ರಜ್ಞಾನ.. ಆವತ್ತಿಗೆ ಅತ್ಯಂತ ದೊಡ್ಡ ಬಜೆಟ್ ಸಿನಿಮಾ ಆಗಿ ಮೂಡಿಬಂದಿತ್ತು ಕುರುಕ್ಷೇತ್ರ.

ಕುರುಕ್ಷೇತ್ರ ಬಂದಿದ್ದೂ ಆಯ್ತು ಯಶಸ್ಸು ಕಂಡಿದ್ದು ಆಯ್ತು. ಆದ್ರೆ ಈಗ ಅಚ್ಚರಿ ಅಂದ್ರೆ ಈ ಕುರುಕ್ಷೇತ್ರದ ನಾಯಕ ಮತ್ತು ನಟ ಇಬ್ಬರು ಕೂಡ ಜೈಲು ಸೇರಿದ್ದಾರೆ. ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಮೂರು ತಿಂಗಳಿಂದ ಜೈಲಿನಲ್ಲಿದ್ರೆ, ಮುನಿರತ್ನ ಜೀವ ಬೆದರಿಕೆ ಕೇಸ್ ನಲ್ಲಿ ಶನಿವಾರ ಅಂದರ್ ಆಗಿದ್ದಾರೆ.

ಕನ್ನಡ ಸಿನಿರಂಗಕ್ಕೆ ದೊಡ್ಡ ತಲೆನೋವು ತಂದಿಟ್ಟ ಮೀಟೂ, ಕಾಸ್ಟಿಂಗ್ ಕೌಚ್ ಭೂತ.., ಏನಾಗ್ತಿದೆ ನೋಡಿ..!

ಸಾಮಾನ್ಯವಾಗಿ ಕುರುಕ್ಷೇತ್ರ ನಾಟಕ ಮಾಡಿದ್ರೆ ಅದನ್ನ ಮಾಡಿದ ಕಲಾವಿದರಿಗೆ , ಆಯೋಜಕರಿಗೆ ತೊಂದರೆ ಆಗುತ್ತೆ ಅನ್ನೋ ಮಾತು ರಂಗಭೂಮಿಯಲ್ಲಿ ಇತ್ತು. ಇದೀಗ ಸಿನಿ ರಂಗದಲ್ಲೂ ಇದೇ ಮಾತು ಕೇಳಿ ಬರ್ತಾ ಇದೆ. ಮುನಿರತ್ನ ಮತ್ತು ದರ್ಶನ್ ಗೆ ಕುರುಕ್ಷೇತ್ರದ ಶಾಪವೇ ಅಂಟಿಕೊಂಡಿದೆ ಅನ್ನೋ ಮಾತುಗಳು ಕೇಳಿಬರ್ತಾ ಇವೆ. ಇದು ನಿಜವೋ ಇಲ್ಲವೋ ಗೊತ್ತಿಲ್ಲ.. ಒಟ್ನಲ್ಲಿ ಕಾಕತಾಳೀಯ ಅನ್ನುವಂತೆ ಈ ಕುರುಕ್ಷೇತ್ರ ಸಿನಿಮಾದ ನಟ, ನಿರ್ಮಾಪಕ ಇಬ್ಬರು ಕೃಷ್ಣ ಜನ್ಮ ಸ್ಥಾನ ಸೇರಿರೋದಂತೂ ಸತ್ಯ.!

click me!