ಕನ್ನಡ ಚಿತ್ರರಂದ ಖ್ಯಾತ ನಿರ್ಮಾಪಕ ಎಂ.ಚಂದ್ರಶೇಖರ್‌ ಕೊರೋನಾಗೆ ಬಲಿ

Suvarna News   | Asianet News
Published : Apr 29, 2021, 09:24 AM ISTUpdated : Apr 29, 2021, 09:30 AM IST
ಕನ್ನಡ ಚಿತ್ರರಂದ ಖ್ಯಾತ ನಿರ್ಮಾಪಕ ಎಂ.ಚಂದ್ರಶೇಖರ್‌ ಕೊರೋನಾಗೆ ಬಲಿ

ಸಾರಾಂಶ

ನಿಮಿಶಾಂಬಾ ಪ್ರೊಡಕ್ಷನ್‌ನ ಮೂಲಕ ಕನ್ನಡ ಚಿತ್ರರಂಗದ ಹಿಟ್ ಸಿನಿಮಾಗಳನ್ನು ನಿರ್ಮಾಣ ಮಾಡಿದ ಎಂ.ಚಂದ್ರಶೇಖರ್ ಅವರಿಗೆ ಕೊರೋನಾ ಸೋಂಕು ತಗುಲಿ ನಿಧನರಾಗಿದ್ದಾರೆ.

ಕೊರೋನಾ ಸೋಂಕಿನ ಎರಡನೇ ಅಲೆ ಕನ್ನಡ ಚಿತ್ರರಂಗದ ಮೇಲೆ ದೊಡ್ಡ ಪರಿಣಾಮ ಬೀರುತ್ತಿದೆ. ಸಿನಿಮಾ ಹಾಗೂ ಕಿರುತೆರೆ ಚಿತ್ರೀಕರಣಕ್ಕೆ ಬ್ರೇಕ್‌ ಬಿದ್ದಿರುವುದಲ್ಲದೆ ಸೋಂಕು ತಗುಲಿ ಖ್ಯಾತ ನಿರ್ಮಾಪಕರನ್ನು ಕಳೆದುಕೊಂಡಿದ್ದೇವೆ.

ನಿಮಿಶಾಂಬ ಪ್ರೊಡಕ್ಷನ್‌ನ ಮೂಲಕ  'ಅಣ್ಣಯ್ಯ','ಬಿಂದಾಸ್','ಏನೋ ಒಂಥರಾ','ರನ್ನ' ಸೇರಿ ಅನೇಕ ಸ್ಟಾರ್ ಸಿನಿಮಾಗಳನ್ನು ನಿರ್ಮಾಣ ಮಾಡಿದ ಎಂ.ಚಂದ್ರಶೇಖರ್ ಕೊರೋನಾ ಸೋಂಕು ತಲುಗು ಇಂದು ಬೆಳಗಿನಜಾವ ಸುಮಾರು 3-4ಗಂಟೆ ಸಮಯದಲ್ಲಿ ಇಹಲೋಕ ತ್ಯಜಿಸಿದ್ದಾರೆ. 

ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕೊರೋನಾದಿಂದ ನಿಧನ 

ಕಳೆದ 23 ದಿನಗಳ ಹಿಂದೆ ಚಂದ್ರಶೇಖರ್‌ ಅರವರಿಗೆ ಕೊರೋನಾ ಪಾಸಿಟಿವ್ ಎಂದು ತಿಳಿದು ಬಂದಿತ್ತು. ತಕ್ಷಣವೇ ಮಣಿಪಾಲ್ ಸೆಂಟರ್‌ಗೆ ದಾಖಲಾಗಿದ್ದರು. ಕೊರೋನಾ ಸೋಂಕಿನಿಂದ ಗುಣಮುಖರಾದರೂ, ಶ್ವಾಸಕೋಶ ಸಮಸ್ಯೆ ಉಲ್ಬಣಗೊಂಡು ಕೊನೆಯುಸಿರೆಳೆದಿದ್ದಾರೆ. 

ಇತ್ತೀಚಿಗೆ ನಿರ್ದೇಶಕ ಮಂಜು ಮಾಂಡವ್ಯ ಆಕ್ಷನ್ ಕಟ್ ಹೇಳುತ್ತಿರುವ ಚಿತ್ರಕ್ಕೆ ಚಂದ್ರಶೇಖರ್ ಬಂಡವಾಳ ಹಾಕುವುದಾಗಿ ಮಾತುಕತೆ ನಡೆದಿತ್ತು. ಚಿತ್ರಕ್ಕೆ ನಾಯಕನಾಗಿ ಉಪೇಂದ್ರ ಅಯ್ಕೆ ಆಗಿದ್ದರು. ಆದರೆ ವಿಧಿ ಆಟವೇ ಬೇರೆ ಆಗಿತ್ತು. ಕೆಲ ದಿನಗಳ ಹಿಂದೆ ಖ್ಯಾತ ನಿರ್ಮಾಪಕ ಕೋಟಿ ರಾಮು ಅವರನ್ನು ಚಿತ್ರರಂಗ ಕಳೆದುಕೊಂಡಿತ್ತು ಇದೀಗ ಚಂದ್ರಶೇಖರ್ ಅವರನ್ನ. ಎಂ.ಚಂದ್ರಶೇಖರ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸೋಣ.

ಕೊರೋನಾಕ್ಕೆ ಕೋಟಿ ನಿರ್ಮಾಪಕ ರಾಮು ಬಲಿ, ಮಾಲಾಶ್ರೀ ಪತಿ ಇನ್ನಿಲ್ಲ 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಸುದೀಪ್​ಗೆ ಸ್ತ್ರೀದೋಷ ಇದೆಯಾ? ಬಹು ದೊಡ್ಡ ರಹಸ್ಯ ರಿವೀಲ್​ ಮಾಡಿದ ಕಿಚ್ಚ ಹೇಳಿದ್ದೇನು?
Karna Serial: ಸಂಜಯ್‌ ಕುತಂತ್ರಕ್ಕೆ ಬಲಿಯಾದ ನಿತ್ಯಾ: ಈಗ ಕರ್ಣನ ಜೊತೆ ಅಸಲಿ ಮದುವೆ ಆಗ್ಲೇಬೇಕು! ನಿಧಿ ಕಥೆ ಏನು?