ಮರಣೋತ್ತರ ಪರೀಕ್ಷೆ ಬಳಿಕ ನಿರ್ಮಾಪಕ ಸೌಂದರ್ಯ ಜಗದೀಶ್‌ ಮೃತದೇಹ ಹಸ್ತಾಂತರ

Published : Apr 14, 2024, 02:03 PM ISTUpdated : Apr 14, 2024, 04:12 PM IST
ಮರಣೋತ್ತರ ಪರೀಕ್ಷೆ ಬಳಿಕ ನಿರ್ಮಾಪಕ ಸೌಂದರ್ಯ ಜಗದೀಶ್‌ ಮೃತದೇಹ ಹಸ್ತಾಂತರ

ಸಾರಾಂಶ

ಆತ್ಮಹತ್ಯೆಗೆ ಶರಣಾಗಿರುವ ಸ್ಯಾಂಡಲ್‌ವುಡ್‌ ನಿರ್ಮಾಪಕ ಸೌಂದರ್ಯ ಜಗದೀಶ್‌ ಅವರು ಮರಣೋತ್ತರ ಪರೀಕ್ಷೆ ನಡೆಯದಿದ್ದು.  ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತ ಮಾಡಲಾಗಿದೆ.

ಬೆಂಗಳೂರು (ಏ.14): ಆತ್ಮಹತ್ಯೆಗೆ ಶರಣಾಗಿರುವ ಸ್ಯಾಂಡಲ್‌ವುಡ್‌ ನಿರ್ಮಾಪಕ ಸೌಂದರ್ಯ ಜಗದೀಶ್‌ ಅವರು ಮರಣೋತ್ತರ ಪರೀಕ್ಷೆ  ಬಳಿಕ ಮೃತ ದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.    ಸುಗಣ ಆಸ್ಪತ್ರೆಯಿಂದ ಮೃತದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿತ್ತು, ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಾಗಿದೆ. 

ಕನ್ನಡದ ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ!

ಮುಂದಿನ ಕಾರ್ಯಕ್ರಮ ಮತ್ತು ಅಂತಿಮ ದರ್ಶಕ್ಕಾಗಿ ಸೌಂದರ್ಯ ಜಗದೀಶ್ ಮನೆ ಮಹಾಲಕ್ಷ್ಮಿ ಲೇಔಟ್ ನ ನಿವಾಸದಲ್ಲಿ ಮೃತದೇಹದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ಬೇರೆ ಬೇರೆ ಉದ್ಯಮಗಳಲ್ಲಿ ತೊಡಗಿಸಿಕೊಂಡಿದ್ದ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನು ತಿಳಿದು ಬಂದಿಲ್ಲ.

ಬೆಳಿಗ್ಗೆ 10 ಗಂಟೆಗೆ ನಿವಾಸದಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಕುಟುಂಬಸ್ಥರು ಸುಗಣ ಆಸ್ಪತ್ರೆಗೆ ದಾಖಲು ಮಾಡಲು ಮುಂದಾದರು. ಆದರೆ ಆಸ್ಪತ್ರೆಗೆ ತರುವಷ್ಟರಲ್ಲೇ ಸೌಂದರ್ಯ ಜಗದೀಶ್ ಸಾವನ್ನಪ್ಪಿದ್ದರು. ಸದ್ಯ ಮೃತ ದೇಹವನ್ನು ರಾಮಯ್ಯ ಆಸ್ಪತ್ರೆಯಲ್ಲಿ ಇಡಲಾಗಿದೆ.

ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ ಹಿನ್ನೆಲೆ ಅವರ ಸ್ನೇಹಿತ ಶ್ರೇಯಸ್ ಪ್ರತಿಕ್ರಿಯೆ ನೀಡಿ, ಆತ್ಮಹತ್ಯೆ ಮಾಡಿಕೊಂಡಿರೋದು ನಿಜ. ಆದ್ರೆ ಯಾವ ಕಾರಣಕ್ಕೆ ಅನ್ನೋದು ಗೊತ್ತಿಲ್ಲ. ಅವರು ಮನೆಯಲ್ಲೇ ಆತ್ಮಹತ್ಯೆ ಗೆ ಯತ್ನಿಸಿದ್ದಾರೆ. ಕೂಡಲೇ ಮಹಾಲಕ್ಷ್ಮಿ ಲೇಔಟ್ ನಿಂದ  ಆಸ್ಪತ್ರೆ ಗೆ ಕರೆತರಲಾಯ್ತು. ಅಷ್ಟರಲ್ಲೇ ಜೀವ ಹೋಗಿದೆ. ಆತ್ಮಹತ್ಯೆ ಗೆ ನಿಖರ ಕಾರಣ ತಿಳಿದಿಲ್ಲ. ದಯವಿಟ್ಟು ಅನ್ಯತಾ ಭಾವಿಸಬೇಡಿ. ಅನಾವಶ್ಯಕ ಸುದ್ದಿಗಳನ್ನ ಹಬ್ಬಿಸಬೇಡಿ. ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತೆ. ನಂತರ ಅಂತ್ಯ ಕ್ರಿಯೆ ಯಾವಾಗ ಎಲ್ಲಿ ಅಂತ ಕುಟುಂಬಸ್ಥರ ಜೊತೆ ಚರ್ಚಿಸಿ ತಿಳಿಸುತ್ತೇವೆ ಎಂದಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ವೆಡ್ಡಿಂಗ್ ಸೀಸನ್ ಶುರು, ಆದ್ರೆ ನನ್ನ ಮದುವೆ...... ಏನ್ ಹೇಳಿದ್ರು Sanvi Sudeep
ಡಿಸೆಂಬರ್‌ಗೆ ಸ್ಯಾಂಡಲ್‌ವುಡ್‌ ದಬ್ಬಾಳಿಕೆ: ಡೆವಿಲ್‌, 45, ಮಾರ್ಕ್‌ ಮೂವರು ಸೂಪರ್‌ಸ್ಟಾರ್‌ಗಳ ಮಹಾಯುದ್ಧ