
ರಾಜೇಂದ್ರ ಸಿಂಗ್ ಬಾಬು ಪುತ್ರಿ ರೋಹಿಣಿ ಸಿಂಗ್ (ರಿಷಿಕಾ), ಸ್ನೇಹಿತೆ ಅರ್ಪಿತಾ ಹಾಗೂ ಕಾರು ಚಾಲಕ ಅರ್ಯ ಅವರಿಗೆ ಪೆಟ್ಟಾಗಿದ್ದು, ಶೇಷಾದ್ರಿಪುರ ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆದಿದ್ದಾರೆ. ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೆಸರುಘಟ್ಟದ ಗೆಳೆಯರ ಮನೆಯಿಂದ ರೋಹಿಣಿ ಸಿಂಗ್ ಹಾಗೂ ಆಕೆಯ ಸ್ನೇಹಿತೆ ಕಾರಿನಲ್ಲಿ ಬುಧವಾರ ಮುಂಜಾನೆ 6ರ ವೇಳೆಗೆ ಮನೆಗೆ ಮರಳುತ್ತಿದ್ದರು. ಮಾವಳ್ಳಿ ರಸ್ತೆಯಲ್ಲಿ ಅತಿವೇಗವಾಗಿ ಅರ್ಯ ಕಾರು ಚಾಲನೆ ಮಾಡಿಕೊಂಡು ಬಂದಿದ್ದಾನೆ. ಆಗ ಆರ್ಯುವೇದಿಕ್ ಕಾಲೇಜು ಸಮೀಪ ತಿರುವು ತೆಗೆದುಕೊಳ್ಳುವಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು, ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿದೆ. ತಕ್ಷಣವೇ ಗಾಯಾಳುಗಳನ್ನು ಸಾರ್ವಜನಿಕರು ಆಸ್ಪತ್ರೆಗೆ ದಾಖಲಿಸಿದ್ದರು. ಘಟನೆಯಲ್ಲಿ ರೋಹಿಣಿ ಹಾಗೂ ಅರ್ಪಿತಾ ಅವರಿಗೆ ಸಣ್ಣಪುಟ್ಟಗಾಯವಾಗಿದ್ದು, ಚಾಲಕನಿಗೆ ಗಂಭೀರ ಪೆಟ್ಟಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ನಟ ಜೈಜಗದೀಶ್ ಪುತ್ರಿ ಕಾರು
ಈ ಘಟನೆಗೆ ಕಾರು ಚಾಲಕನ ಅಜಾಗರೂಕ ಚಾಲನೆಯೇ ಕಾರಣವಾಗಿದೆ ಎಂದು ಆರೋಪಿಸಿ ರೋಹಿಣಿಸಿಂಗ್ ಶುಕ್ರವಾರ ಯಲಹಂಕ ಸಂಚಾರ ಠಾಣೆ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.