'ಹಿಟ್ಲರ್‌' ಹೆಸರಿನಲ್ಲಿ ಭೂಗತ ಲೋಕದ ಕತೆ;ಟೈಟಲ್‌ ಲಾಂಚ್‌ ಮಾಡಿದ ಶ್ರೀಮುರಳಿ!

Kannadaprabha News   | Asianet News
Published : Nov 05, 2020, 04:43 PM IST
'ಹಿಟ್ಲರ್‌' ಹೆಸರಿನಲ್ಲಿ ಭೂಗತ ಲೋಕದ ಕತೆ;ಟೈಟಲ್‌ ಲಾಂಚ್‌ ಮಾಡಿದ ಶ್ರೀಮುರಳಿ!

ಸಾರಾಂಶ

ಕೆಜಿಎಫ್‌, ಜಂಟಲ್‌ಮನ್‌ ಮೊದಲಾದ ಚಿತ್ರಗಳಿಗೆ ಸಾಹಿತ್ಯ ರಚಿಸಿ ಹೆಸರು ಮಾಡಿದ್ದ ಕೊಪ್ಪಳದ ಕಿನ್ನಾಳ್‌ ರಾಜ್‌ ಮೊದಲ ಬಾರಿಗೆ ಕತೆ, ಚಿತ್ರಕತೆ, ಸಂಭಾಷಣೆ ಬರೆಯುವುದರ ಜೊತೆಗೆ ನಿರ್ದೇಶನದ ಅಖಾಡಕ್ಕೂ ಇಳಿದಿದ್ದಾರೆ.

ಸರ್ವಾಧಿಕಾರಿ ‘ಹಿಟ್ಲರ್‌’ ಹೆಸರನ್ನೇ ಟೈಟಲ್‌ ಮಾಡಿಕೊಂಡಿಕೊಂಡು ಕಿನ್ನಾಳ್‌ ರಾಜ್‌ ಭೂಗತ ಲೋಕದ ಕತೆ ಹೇಳಲಿದ್ದಾರೆ. ಶ್ರೀಮುರುಳಿ ಅವರು ಚಿತ್ರದ ಟೈಟಲ್‌ ಪೋಸ್ಟರ್‌ ಬಿಡುಗಡೆ ಮಾಡಿದ್ದಾರೆ. ಅನಾಥ ಹುಡುಗನೊಬ್ಬನ ಕಾನೂನುಬಾಹಿರ ಚಟುವಟಿಕೆಗಳು, ಅವನ ದರ್ಬಾರ್‌ಅನ್ನು ಈ ಚಿತ್ರ ಬಿಚ್ಚಿಡಲಿದೆ. ಭಾವನಾತ್ಮಕ ಸನ್ನಿವೇಶಗಳು, ಹಾಸ್ಯವೂ ಸೇರಿಕೊಂಡಿರುವ ಪಕ್ಕಾ ಮಾಸ್‌, ರೌಡಿಸಂ ಚಿತ್ರ ಇದಾಗಿದೆ ಎಂದು ಹೇಳಿಕೊಳ್ಳುತ್ತದೆ ಚಿತ್ರತಂಡ.

ಲೋಹಿತ್‌ ಚಿತ್ರದ ನಾಯಕ. ಸಸ್ಯ ನಾಯಕಿ. ಬಲರಾಜವಾಡಿ, ವರ್ಧನ್‌ ತೀರ್ಥಹಳ್ಳಿ, ವಿಜಯ್‌ ಚಂಡೂರ್‌, ವೈಭವ್‌ ನಾಗರಾಜ್‌, ಮನಮೋಹನ್‌ ರೈ, ಗಣೇಶ್‌ ರಾವ್‌ ಕೇಸರ್‌ಕರ್‌, ವೇದ ಹಾಸನ್‌ ಮುಂತಾದವರು ಬಣ್ಣ ಹಚ್ಚಿದ್ದಾರೆ. ಮೂರು ಹಾಡುಗಳಿಗೆ ಆಕಾಶ್‌ ಪರ್ವ ಸಂಗೀತ ನೀಡಿದ್ದಾರೆ.

ಛಾಯಾಗ್ರಹಣ ಜಿ.ವಿ. ನಾಗರಾಜ ಕಿನ್ನಾಳ, ಸಂಕಲನ ಗಣೇಶ್‌ ತೋರಗಲ್‌, ಸಾಹಿತ್ಯ ಪ್ರಮೋದ್‌ ಮರವಂತೆ, ಸಾಹಸ ಚಂದ್ರುಬಂಡೆ ಅವರದ್ದು. ಸದ್ಯ ಮಾತಿನ ಭಾಗದ ಚಿತ್ರೀಕರಣ ಮುಗಿದಿದ್ದು, ಹಾಡು, ಫೈಟ್‌ನ್ನು ಸಂಡೂರಿನಲ್ಲಿ ಚಿತ್ರೀಕರಣ ಮಾಡಲು ಯೋಚನೆ ರೂಪಿಸಲಾಗಿದೆ. ಗಾನಶಿವ ಮೂವೀಸ್‌ ಸಂಸ್ಥೆಯ ಮಮತಾ ಲೋಹಿತ್‌ ನಿರ್ಮಾಣ ಮಾಡುತ್ತಿರುವ ಚಿತ್ರವಿದು.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

BBK 12 ಗಿಲ್ಲಿ ನಟನ ಗುಣ ಹೇಳುತ್ತಲೇ Bigg Boss Winner ಯಾರೆಂದು​ ಹಿಂಟ್​ ಕೊಟ್ಟೇ ಬಿಟ್ರು ಶಿವರಾಜ್​ ಕುಮಾರ್!
BBK 12: ಗೆಲ್ತಾರಾ ಗಿಲ್ಲಿ ನಟ..? ಈ ಮಂಡ್ಯದ ಹೈದ ನಟರಾಜ್‌ನ ಪ್ಲಸ್ & ಮೈನಸ್ ಏನು? ಸೀಕ್ರೆಟ್ ರಿವೀಲ್..!