ಹಂಪಿ ಪ್ರವಾಸದಲ್ಲಿ ಸಿಲುಕಿರುವ ನಟಿ ಜಯಂತಿ ಹಾಗೂ ಪುತ್ರ ಫುಲ್‌ ಸೇಫ್‌!

Suvarna News   | Asianet News
Published : Apr 14, 2020, 03:53 PM IST
ಹಂಪಿ ಪ್ರವಾಸದಲ್ಲಿ ಸಿಲುಕಿರುವ ನಟಿ ಜಯಂತಿ ಹಾಗೂ ಪುತ್ರ ಫುಲ್‌ ಸೇಫ್‌!

ಸಾರಾಂಶ

ಲಾಕ್‌ಡೌನ್‌ ಮುನ್ನವೇ ಹಂಪಿ ಪ್ರವಾಸಕ್ಕೆ ತೆರಳಿದ್ದ  ಕನ್ನಡ ಚಿತ್ರರಂಗದ ಹಿರಿಯ ನಟಿ ಜಯಂತಿ ಹಾಗೂ ಪುತ್ರ ನಾವು ಸೇಫ್‌ ಆಗಿ ಇದ್ದೀವಿ ಎಂದು ಹೇಳಿಕೆ ನೀಡಿದ್ದಾರೆ.

ಕನ್ನಡ ಚಿತ್ರರಂಗದ ಅಭಿನಯ ಶಾರದೆ ಜಯಂತಿ ಹಾಗೂ ಪುತ್ರ  ಕೃಷ್ಣ ಕುಮಾರ್‌ ಹಂಪಿ ಪ್ರವಾಸಕ್ಕೆಂದು ತೆರಳಿ ಕೊರೋನಾ ಲಾಕ್‌ಡೌನ್‌ನಲ್ಲಿ ಸಿಲುಕಿಕೊಂಡಿದ್ದಾರೆ. ಈ ಬಗ್ಗೆ ಸ್ವತಃ ಜಯಂತಿ ಹಾಗೂ ಪುತ್ರ ಮಾತನಾಡಿದ್ದಾರೆ . 

' ಲಾಕ್‌ಡೌನ್‌ ಹೇರುವ ಮೊದಲೇ ಹಂಪಿಗೆ ಭೇಟಿ ಕೊಟ್ಟಿದ್ದೆವು. ಇಲ್ಲಿ ಬಂದ ನಂತರ ಲಾಕ್‌ಡೌನ್‌ ಘೋಷಣೆ ಮಾಡಿದರು. ಪ್ರಧಾನ ಮಂತ್ರಿಗಳ ಮಾತಿನಂತೆ ನಾವು ಇರುವ ಜಾಗದಲ್ಲೇ ಉಳಿದುಕೊಂಡಿದ್ದೇವೆ.  ಸದ್ಯಕ್ಕೆ ನಾವಿಲ್ಲಿ ಆರಾಮಾಗಿದ್ದೇವೆ ಯಾವುದೇ ತೊಂದರೆ ಆಗಿಲ್ಲ. ಪೊಲೀಸರು ಬಿಗಿ ಬಂದೋಬಸ್ತ್‌ ಮಾಡಿದ್ದಾರೆ  ಹೀಗಾಗಿ ನಾವು ಬೆಂಗಳೂರಿಗೆ ಹೋಗಲು ಸಹಾಯ ಮಾಡುವಂತೆ ಕೇಳಿಲ್ಲ' ಎಂದು ಮಾತನಾಡಿದ್ದಾರೆ. 

ಕೊರೋನಾ ದೂರವಾಗಲಿ.. ಸ್ವಾಮೀಜಿಗಳು ಮತ್ತು ನಾಯಕರಿಂದ ಇಷ್ಟಲಿಂಗ ಪೂಜೆ

ಜಯಂತಿ ಹಾಗೂ ಪುತ್ರ ಕೃಷ್ಣ ಕುಮಾರ್‌ ಹಂಪಿ ಸಮೀಪದಲ್ಲಿರುವ ಕಮಲಾಪುರದ ಮಯೂರ ಭುವನೇಶ್ವರಿ ಪ್ರವಾಸಿ ಮಂದಿರಲ್ಲಿ ಉಳಿದುಕೊಂಡಿದ್ದಾರೆ.  ಪರಿಸ್ಥಿತಿ ಗಂಭೀರಗೊಂಡ ಕಾರಣ ಇದ್ದಲ್ಲಿಯೇ ಇರಲು ತೀರ್ಮಾನ ಮಾಡಿದ್ದಾರೆ. ಈಗೀರುವ  ವಸತಿಯಲ್ಲಿ ಯಾವುದೇ ತೊಂದರೆಯಿಲ್ಲ  ಹಾಗೂ ಇರುವುದರಲ್ಲೇ ದಿನ ಕಳೆಯುತ್ತಿದ್ದೇವೆ ಎಂದು ಹೇಳಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Mark Movie: ಡಿಸೆಂಬರ್‌ನಲ್ಲಿ ಏಕಕಾಲಕ್ಕೆ ಸ್ಟಾರ್‌ಗಳ ಸಿನಿಮಾ ರಿಲೀಸ್;‌ ಕಿಚ್ಚ ಸುದೀಪ್‌ ಏನಂದ್ರು?
ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!