
ರಿಷಬ್ ಶೆಟ್ಟಿಯವರಿಂದ ಮುಂದುವರಿದ ದೇವಸ್ಥಾನದ ಭೇಟಿ
'ಕಾಂತಾರ 1' ಚಿತ್ರದ ಅಭೂತಪೂರ್ವ ಯಶಸ್ಸಿಗೆ ಕೃತಜ್ಞತೆ ಸಲ್ಲಿಸುತ್ತಿರುವ ನಟ ರಿಷಬ್ ಶೆಟ್ಟಿಯವರು (Rishab Shetty) ಕರ್ನಾಟಕದಲ್ಲಿ, ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ, ಬಿಹಾರದ ಮುಂಡೇಶ್ವರಿ ದೇವಸ್ಥಾನ, ಕಾಶಿ ವಿಶ್ವನಾಥ ದೇವಾಲಯ, ರಾಮೇಶ್ವರ ಸೇರಿದಂತೆ ಭಾರತದ ಹಲವು ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ಕಾಂತಾರ (Kantara Chapter 1) ಯಶಸ್ಸನಲ್ಲಿ ದೇವರು-ದೈವಗಳ ಬಲವಾದ ಆಶೀರ್ವಾದವಿದೆ ಎಮದು ನಂಬಿರುವ ರಿಷಬ್ ಶೆಟ್ಟಿಯವರು ಇಂದು ಹಾಸನಾಂಬಾ ದೇವಿಯ (Hasanamba Temple) ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದಿದ್ದಾರೆ.
ಹಾಸನಾಂಬ ದೇವಾಲಯವು ಭಾರತದ ಕರ್ನಾಟಕ ರಾಜ್ಯದ ಹಾಸನ ಜಿಲ್ಲೆಯಲ್ಲಿ ನೆಲೆಗೊಂಡಿರುವ ಒಂದು ಹಿಂದೂ ದೇವಾಲಯವಾಗಿದೆ , ಇದನ್ನು ಶಕ್ತಿ ದೇವತೆಗೆ ಸಮರ್ಪಿಸಲಾಗಿದೆ, ಇದನ್ನು ಅಂಬಾ ಅಥವಾ ಅಂಬೆ ಎಂದೂ ಕರೆಯುತ್ತಾರೆ, ಇದರರ್ಥ ತಾಯಿ. ಈ ದೇವಾಲಯವನ್ನು 12 ನೇ ಶತಮಾನದಲ್ಲಿ ನಿರ್ಮಿಸಲಾಯಿತು
ಕನ್ನಡದ ಹೆಮ್ಮೆಯ ನಟ-ನಿರ್ದೇಶಕ ರಿಷಬ್ ಶೆಟ್ಟಿಯವರು ಇಂದು, ಅಂದರೆ 19 ಅಕ್ಟೋಬರ್ 2025ರಂದು ಹಾಸನದಲ್ಲಿರುವ ಹಾಸನಾಂಬಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಅಲ್ಲಿ ಪೂಜೆಯಲ್ಲಿ ಪಾಲ್ಗೊಂಡು ಆಶೀರ್ವಾದ ಪಡೆದಿದ್ದಾರೆ. ಕಾಂತಾರ ಚಾಪ್ಟರ್ 1 ಸಿನಿಮಾದ ಅಭೂತಪೂರ್ವ ವಿಜಯಕ್ಕೆ, ಅಮೋಘ ಎನ್ನಿಸುವ ಗಳಿಕೆಗೆ ರಿಷಬ್ ಶೆಟ್ಟಿಯವರು ತಾವು ನಂಬಿದ ದೈವ-ದೇವರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದಾರೆ. ಇತ್ತೀಚೆಗಷ್ಟೇ ರಿಷಬ್ ಶೆಟ್ಟಿಯವರು ಮೈಸೂರಿನ ಚಾಮುಂಡೇಶ್ವರಿ ದೇವಿಯ ಸನ್ನಿಧಿಗೆ ಹೋಗಿ ನಮಿಸಿ, ತಮಗೆ ಹಾಗೂ ಕಾಂತಾರ ಸಿನಿಮಾ ತಂಡಕ್ಕೆ ಸಿಕ್ಕ ಯಶಸ್ಸಿಗೆ ದೇವಿ ಮುಂದೆ ತಲೆಬಾಗಿ ನಮಸ್ಕರಿಸಿ ಬಂದಿದ್ದಾರೆ. ಇದೀಗ, ಹಾಸನಾಂಬೆಗೆ ತಲೆಬಾಗಿ ಬಂದಿದ್ದಾರೆ.
ಕಾಂತಾರ ಸಿನಿಮಾ ಇಂದು ಜಗತ್ತಿನೆಲ್ಲೆಡೆ ಸಖತ್ ಸೌಂಡ್ ಮಾಡುತ್ತಿದೆ. ಈಗಾಗಲೇ ಕಾಂತಾರ ಸಿನಿಮಾ ಜಾಗತಿಕ ಕಲೆಕ್ಷನ್ ರೂ. 717.50 ಕೋಟಿ ಗಳಿಕೆ ಮಾಡಿ ನಾಗಾಲೋಟದಿಂದ ಮುನ್ನುಗ್ಗುತ್ತಿದೆ. ಈ ಸಿನಿಮಾದ ಗಳಿಕೆ ಇದೀಗ ಯಾವಮಟ್ಟದಲ್ಲಿ ಇದೆ ಎಂದರೆ ಬಿಡುಗಡೆಯಾಗಿ ಕೇವಲ 15 ದಿನಕ್ಕೆ ಬರೋಬ್ಬರಿ 717.50 ಕೋಟಿ ಗಳಿಸಿ ಈ ವರ್ಷದ ಎರಡನೇ ಅತೀ ದೊಡ್ಡ ಚಿತ್ರವಾಗಿ ಹೊರಹೊಮ್ಮಿದೆ. ಹೀಗೇ ಈ ಚಿತ್ರದ ಗಳಿಕೆ ಮುಂದುವರಿದರೆ, ಇದು 'ಕೆಜಿಎಫ್ 2' ಗಳಿಕೆಯನ್ನೂ ಮೀರಿ 'ನಂಬರ್ ಒನ್' ಸ್ಥಾನದಲ್ಲಿ ಕುಳಿತುಕೊಳ್ಳುವುದು ಪಕ್ಕಾ ಎನ್ನಬಹುದು.
ಅಂದಹಾಗೆ, ಕನ್ನಡದ ನಟ-ನಿರ್ದೇಶಕ ರಿಷಬ್ ಶೆಟ್ಟಿಯವರು ಸದ್ಯ ತಮ್ಮ ಸಿನಿಮಾದ ಸಕ್ಸಸ್ ಸಂಭ್ರಮವನ್ನು ದೇಶದ ವಿವಿಧ ದೇವಾಲಯಗಳಿಗೆ ಭೇಟಿ ನೀಡುವ ಮೂಲಕ ಆಚರಿಸುತ್ತಿದ್ದಾರೆ. ಬಿಹಾರದ ಮುಂಡೇಶ್ವರಿ ದೇವಿ ಭೇಟಿಯ ಬಳಿಕ, ಸದ್ಯ ಅವರು ಕಾಶಿ-ವಾರಣಾಸಿಯಲ್ಲಿ ಗಂಗಾರತಿಯಲ್ಲಿ ಪಾಲ್ಗೊಂಡು ನಮಿಸಿದ್ದಾರೆ, ಬಿಹಾರದಲ್ಲಿರುವ ಮುಂಡೇಶ್ವರಿ ದೇವಿಯ ಆಶೀರ್ವಾದ ಪಡೆದಿದ್ದಾರೆ. ಮುಂದೆ ಅವರು ಯಾವ ಟೆಂಟಪ್ಗೆ ಹೋಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. ಒಟ್ಟಿನಲ್ಲಿ, ಕನ್ನಡ ಸಿನಿಮಾ ಕಾಂತಾರ ಚಾಪ್ಟರ್ 1 ಇದೀಗ ಜಾಗತಿಕ ಮಟ್ಟದಲ್ಲಿ ಕನ್ನಡ-ಕರ್ನಾಟಕದ ಕೀರ್ತಿಪತಾಕೆಯನ್ನು ಹಾರಿಸಿ ಮೆರೆಯುತ್ತಿದೆ.
ಕಾಂತಾರ ಚಾಪ್ಟರ್ 1 ಸಿನಿಮಾದ ಬಳಿಕ ತಾವು ಈ ಮೊದಲೇ ಒಪ್ಪಿಕೊಂಡಿದ್ದ 'ಹನುಮಾನ್' ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಳ್ಳುವುದಾಗಿ ರಿಷಬ್ ಶೆಟ್ಟಿ ಹೇಳಿದ್ದಾರೆ. ಅದಕ್ಕೆ ತಾವೀಗ ಸೂಕ್ತ ತಯಾರಿ ಮಾಡಿಕೊಳ್ಳುತ್ತಿರುವುದಾಗಿ ಹೇಳಿರುವ ಅವರು, ಸಿಕ್ಕಿರುವ ಗ್ಯಾಪ್ನಲ್ಲಿ ದೇವಾಲಯಗಳಿಗೆ ಭೇಟಿ ನೀಡಿ ತಮ್ಮ ಭಕ್ತಿ ಹಾಗೂ ಸಂಸ್ಕಾರ ಮೆರೆಯುತ್ತಿದ್ದಾರೆ. ಏನೇ ಆಗಲಿ, ಕನ್ನಡದ ಸಿನಿಮಾವೊಂದು ಇಂದು ಈ ಮಟ್ಟಕ್ಕೆ ವಿಶ್ವಮಟ್ಟದಲ್ಲಿ ಸುದ್ದಿ ಮಾಡುತ್ತಿರುವುದು ಕನ್ನಡಿಗರೆಲ್ಲರಿಗೂ ಹೆಮ್ಮೆ ಮೂಡಿಸಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.