ಕಾಂತಾರ ತಂಡಕ್ಕೆ ಬಿಗ್ ರಿಲೀಫ್; ರಿಷಬ್ ಶೆಟ್ಟಿ, ಕಿರಗಂದೂರು ಬಂಧನಕ್ಕೆ ಸುಪ್ರೀಂ ಕೋರ್ಟ್ ತಡೆ

Published : Feb 10, 2023, 12:29 PM ISTUpdated : Feb 10, 2023, 12:40 PM IST
ಕಾಂತಾರ ತಂಡಕ್ಕೆ ಬಿಗ್ ರಿಲೀಫ್; ರಿಷಬ್ ಶೆಟ್ಟಿ, ಕಿರಗಂದೂರು ಬಂಧನಕ್ಕೆ ಸುಪ್ರೀಂ ಕೋರ್ಟ್ ತಡೆ

ಸಾರಾಂಶ

ಕಾಂತಾರ ಸಿನಿಮಾದ ವರಾಹ ರೂಪಂ....ಹಾಡಿನ ವಿವಾದ ಇನ್ನೂ ಬಗೆ ಹರಿದಿಲ್ಲ.  ಕೇರಳ ಹೈ ಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ನಿರ್ಮಾಪಕ ವಿಜಯ್ ಕಿರಗಂದೂರು ಅವರಿಗೆ ಬಿಗ್ ರಿಲೀಸ್ ಸಿಕ್ಕಿದೆ.

ಕಾಂತಾರ ಸಿನಿಮಾದ ವರಾಹ ರೂಪಂ....ಹಾಡಿನ ವಿವಾದ ಇನ್ನೂ ಬಗೆ ಹರಿದಿಲ್ಲ. ಇದೀಗ ಕೇರಳ ಹೈ ಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಇದು ಕಾಂತಾರ ತಂಡಕ್ಕೆ ಸ್ವಲ್ಪ ನಿರಾಳವಾಗಿದೆ. ಕಾಂತಾರ ಸಿನಿಮಾದ ಸೂಪರ್ ಹಿಟ್ ವರಾಹ ರೂಪಂ... ಹಾಡಿನ ಮೇಲೆ ಕೃತಿ ಚೌರ್ಯದ ಆರೋಪ ಇತ್ತು. ಕೇರಳ ಮೂಲದ ತೈಕ್ಕುಡಂ ಬ್ರಿಡ್ಜ್ ಎಂಬ ಬ್ಯಾಂಡ್ ಕಾಂತಾರ ತಂಡದ ವಿರುದ್ಧ 'ನವರಸಂ' ಹಾಡನ್ನು ಕದ್ದಿದ್ದಾರೆ ಎಂದು ಕೃತಿಚೌರ್ಯದ ಆರೋಪ ಮಾಡಿ ಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳಾ ಹೈ ಕೋರ್ಟ್​​ ಹಾಡು ಬಳಸದಂತೆ ಆದೇಶಿಸಿತ್ತು. ಅಲ್ಲದೇ ನಿರ್ಮಾಪಕ ವಿಜಯ್ ಕಿರಗಂದೂರು ಹಾಗು ನಟ, ನಿರ್ದೇಶಕ ರಿಷಬ್ ಶೆಟ್ಟಿಯನ್ನು ಬಂಧಿಸುವಂತೆ ಆದೇಶಿಸಿತ್ತು. 

ಬಳಿಕ ರಿಷಬ್ ಶೆಟ್ಟ ಹಾಗು ವಿಜಯ್ ಕಿರಗಂದೂರು ಇಬ್ಬರೂ ಕೇರಳ ಹೈ ಕೋರ್ಟ್​ನಿಂದ ಜಾಮೀನು ಪಡೆದುಕೊಂಡಿದ್ದರು. ಬಳಿಕ ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಈಗ ಸುಪ್ರೀಂ ಕೋರ್ಟ್, ಕೇರಳ ಹೈ ಕೋರ್ಟ್ ಕೊಟ್ಟಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಸುಪ್ರೀಂ ಕೋರ್ಟ್, ನಟ ನಿರ್ದೇಶಕ ರಿಷಬ್ ಶೆಟ್ಟಿ, ನಿರ್ಮಾಪಕ ವಿಜಯ್ ಕಿರಗಂದೂರ್ ಗೆ ಮಧ್ಯಂತರ ರಕ್ಷಣೆ ನೀಡಿದೆ. ತನಿಖೆ ವೇಳೆ ಬಂಧಿಸದಂತೆ ಸುಪ್ರೀಂ ಸೂಚಿಸಿದೆ. ಅಲ್ಲದೆ ಇಬ್ಬರನ್ನೂ ಬಂಧಿಸದೆ ವಿಚಾರಣೆ ನಡೆಸುವಂತೆ ಹೇಳಿದೆ. 

'ಕಾಂತಾರ' ಹಾಡಿನ ವಿವಾದ; ಹೊಂಬಾಳೆಗೆ ಹಿನ್ನಡೆ, ಅರ್ಜಿ ವಜಾಗೊಳಿಸಿದ ಕೇರಳ ಹೈಕೋರ್ಟ್

ಕಾಂತಾರ' ಚಿತ್ರದ 'ವರಾಹ ರೂಪಂ' ಹಾಡನ್ನು ಪ್ರದರ್ಶಿಸಬಾರದು ಎಂದು ಕೇರಳ ಹೈಕೋರ್ಟ್ ವಿಧಿಸಿದ್ದ ಷರತ್ತನ್ನು ಸುಪ್ರೀಂ ಕೋರ್ಟ್ ಸಡಿಲಿಸಿದೆ. ಹಾಡಿನ ಮೇಲೆ ಹಕ್ಕುಸ್ವಾಮ್ಯ ಉಲ್ಲಂಘನೆ ಆರೋಪದ ತನಿಖೆಗೆ ವಿಜಯ್ ಕಿರಗಂದೂರು ಮತ್ತು ರಿಷಬ್ ಶೆಟ್ಟಿಯವರು ಫೆಬ್ರವರಿ 12 ಮತ್ತು 13ರಂದು ಹಾಜರಾಗುವ ವೇಳೆ ಅವರನ್ನು ಬಂಧಿಸಬಾರದೆಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ಈ ಮೂಲಕ ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ನಿರ್ಮಾಪಕ ವಿಜಯ್ ಕಿರಗಂದೂರು ಅವರಿಗೆ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ರಿಷಬ್ ಶೆಟ್ಟಿ ದೈವದ ಮುಂದೆ ಅತ್ಬಿಟ್ರಾ? ಅಳಬೇಡ ಅಂತ ಸಂತೈಸಿದ್ದೇಕೆ ಪಂಜುರ್ಲಿ ದೈವ?
ಆಂಧ್ರಪ್ರದೇಶದ X MLA Gummadi Narsaiah ಮನೆಗೆ ಹೋದಾಗ ನನ್ನ ತಂದೆ ಬಳಿಗೆ ಹೋದಂತಾಯ್ತು: Shiva Rajkumar