ಥ್ಯಾಂಕ್ಸ್ ಡಿಬಾಸ್: ದರ್ಶನ್‌ಗೆ ಧನ್ಯವಾದ ಹೇಳಿದ ಕರ್ನಾಟಕ ಅರಣ್ಯ ಇಲಾಖೆ

Published : Jun 06, 2021, 06:21 PM IST
ಥ್ಯಾಂಕ್ಸ್ ಡಿಬಾಸ್: ದರ್ಶನ್‌ಗೆ ಧನ್ಯವಾದ ಹೇಳಿದ ಕರ್ನಾಟಕ ಅರಣ್ಯ ಇಲಾಖೆ

ಸಾರಾಂಶ

ದಚ್ಚುಗೆ ಥ್ಯಾಂಕ್ಸ್ ಹೇಳಿದ ಕರ್ನಾಟಕ ಅರಣ್ಯ ಇಲಾಖೆ ಪ್ರಾಣಿ, ಪಕ್ಷಿಗಳನ್ನು ದತ್ತು ತೆಗೆದುಕೊಳ್ಳುವಂತೆ ಮನವಿ ಮಾಡಿದ್ದ ನಟ

ಕರ್ನಾಟಕ ಅರಣ್ಯ‌ ಇಲಾಖೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಧನ್ಯವಾದ ಹೇಳಿದ್ದಾರೆ. ಮೃಗಾಲಯದ ಪ್ರಾಣಿಗಳನ್ನು ದತ್ತು ಪಡೆಯುವಂತೆ ದರ್ಶನ್ ಜನರಲ್ಲಿ ಮನವಿ ಮಾಡಿದ್ದರು.

ಇದರಿಂದ ಹಲವಾರು‌ ಜನ‌ ದರ್ಶನ್ ಅಭಿಮಾನಿಗಳು ಪ್ರಾಣಿ ಪಕ್ಷಿಗಳನ್ನ ದತ್ತು ಪಡೆದಿದ್ದಾರೆ. ರಾಜ್ಯ ಅರಣ್ಯ ಇಲಾಖೆ ರಾಯಭಾರಿ ಆಗಿರೋ ದಚ್ಚುಗೆ ಕರ್ನಾಟಕ ಅರಣ್ಯ ಇಲಾಖೆ ಧನ್ಯವಾದ ತಿಳಿಸಿದೆ.

ಕರ್ನಾಟಕದ Zooನಲ್ಲಿ ಪ್ರಾಣಿ ದತ್ತು ಪಡೆಯುವಂತೆ ನಟ ದರ್ಶನ್ ಮನವಿ!.

ಶ್ರೀ ದರ್ಶನ್ ತೂಗುದೀಪರವರು ರಾಜ್ಯದ ಮೃಗಾಲಯಗಳ ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳುವ ಮತ್ತು ದೇಣಿಗೆ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ. ಅರಣ್ಯ ಇಲಾಖೆಯಿಂದ ಅವರಿಗೆ ಧನ್ಯವಾದಗಳು ಎಂದು ಅರಣ್ಯ ಇಲಾಖೆ ಫೇಸ್‌ಬುಕ್ ಪೋಸ್ಟ್ ಮೂಲಕ ಧನ್ಯವಾದ ತಿಳಿಸಿದೆ.

ಕೋವಿಡ್‌ ಲಾಕ್‌ಡೌನ್‌ನಿಂದ ಮೃಗಾಲಯಗಳು ಮುಚ್ಚಲಾಗಿದೆ ಇದರಿಂದ ಪ್ರಾಣಿಗಳು ಹಾಗೂ ಜೂ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ನಮ್ಮ ಕರ್ನಾಟಕದಲ್ಲಿ ಒಟ್ಟು 9 ಜೂಗಳದ್ದು, ಅಲ್ಲಿರುವ ಪ್ರಾಣಿಗಳನ್ನು ದತ್ತು ಪಡೆದು, ಒಂದು ವರ್ಷದ ಅವಧಿಗೆ ನೆರವಾಗಿ ನಿಲ್ಲಲು ಕನ್ನಡ ಚಿತ್ರರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನವಿ ಮಾಡಿಕೊಂಡಿದ್ದರು.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

BBK 12 Winner: 6 ತಿಂಗಳ ಹಿಂದೆ ಕಾಸಿಲ್ಲ- ಗಿಲ್ಲಿ ನಟನಿಗೆ ಈಗ ಹಣದ ಹೊಳೆ; ಕಿಚ್ಚ ಸುದೀಪ್‌ ಕೊಟ್ಟಿದ್ದೆಷ್ಟು?
ಭಾರತದ Bigg Boss ಇತಿಹಾಸದಲ್ಲೇ ದಾಖಲೆ ಸೃಷ್ಟಿಸಿದ ನಟ ಕಿಚ್ಚ ಸುದೀಪ್​- ಏನಿದು ರೆಕಾರ್ಡ್​?