ಮುತ್ತೈದೆ ಸಾವಿನ ಭಾಗ್ಯ ಕಂಡ ಸ್ಪಂದನಾಗೆ ತಾಳಿ ಕಟ್ಟಿ ಕಳಿಸಿಕೊಟ್ಟ ವಿಜಯ್‌

Published : Aug 09, 2023, 04:35 PM ISTUpdated : Aug 10, 2023, 08:52 AM IST
ಮುತ್ತೈದೆ ಸಾವಿನ ಭಾಗ್ಯ ಕಂಡ ಸ್ಪಂದನಾಗೆ ತಾಳಿ ಕಟ್ಟಿ ಕಳಿಸಿಕೊಟ್ಟ ವಿಜಯ್‌

ಸಾರಾಂಶ

ಮುತ್ತೈದೆ ಸಾವಿನ ಭಾಗ್ಯ ಕಂಡ ಸ್ಪಂದನಾಗೆ ಈಡಿಗ ಸಮುದಾಯದ ಸಂಪ್ರದಾಯದಂತೆ ಪತಿ ವಿಜಯ್‌ ರಾಘವೇಂದ್ರ ಕೊನೆಯದಾಗಿ ತಾಳಿ ಕಟ್ಟಿ ಅಂತ್ಯಕ್ರಿಯೆ ವಿಧಿ ವಿಧಾನ ನೆರವೇರಿಸಿದರು.

ಬೆಂಗಳೂರು (ಆ.09): ನಟ ವಿಜಯ್‌ ರಾಘವೇಂದ್ರನ ಪತ್ನಿ ಸ್ಪಂದನಾ ಮುತ್ತೈದೆಯಾಗಿ ಸಾವನ್ನಪ್ಪಿದ್ದಾಳೆ. ಆದರೆ, ಈಡಿಗ ಸಮುದಾಯದ ಸಂಪ್ರದಾಯದಂತೆ ಕೊನೆಯದಾಗಿ ಸ್ಪಂದನಾ ಪತಿ ವಿಜಯ್‌ ರಾಘವೇಂದ್ರ ತಾಳಿಯನ್ನು ಕಟ್ಟಿ ಮುತ್ತೈದೆ ಭಾಗ್ಯವನ್ನು ನೀಡಿ ಅಂತ್ಯಕ್ರಿಯೆಯ ವಿಧಿವಿಧಾನ ನೆರವೇರಿಸಿದರು.

ಹಿಂದೂ ಧರ್ಮದ ಸಂಪ್ರದಾಯಗಳಂತೆ ಹಲವು ಸಮುದಾಯಗಳಲ್ಲಿ ವಿವಿಧ ಸಂಪ್ರದಾಯಗಳನ್ನು ಅನುಸರಿಸಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಇನ್ನು ಮುತ್ತೈದೆ ಸಾವು ಬರಲೆಂದು ಸಂಪ್ರದಾಯಸ್ಥ ಮಹಿಳೆಯರು ದೇವರಲ್ಲಿ ಕೇಳಿಕೊಳ್ಳುತ್ತಾರೆ. ಮುತ್ತೈದೆ ಸಾವು ಎಂದರೆ ಗಂಡ ಬದುಕಿರುವಾಗಲೇ ಪತ್ನಿ ಸಾವನ್ನಪ್ಪುವುದು ಆಗಿದೆ. ಮುತ್ತೈದೆಯಾಗಿ ಸಾವಿಗೀಡಾದ ಮಹಿಳೆಯರನ್ನು ಈಡಿಗ ಸಮುದಾಯ ಸೇರಿ ಹಲವು ಸಮುದಾಯಗಳಲ್ಲಿ ವಿವಿಧ ಸಂಪ್ರದಾಯಗಳನ್ನು ಪಾಲನೆ ಮಾಡಲಾಗುತ್ತದೆ. ಅದರಲ್ಲಿ ಕೊನೆಯದಾಗಿ ಮೃತ ಪತ್ನಿಗೆ ತಾಳಿ ಕಟ್ಟುವ ಸಂಪ್ರದಾಯವನ್ನೂ ಮಾಡಲಾಗುತ್ತಿದೆ.

ವಿಜಯ್‌-ಸ್ಫಂದನಾ ದಾಂಪತ್ಯಕ್ಕೆ ಯಾರ ಕೆಟ್ಟ ಕಣ್ಣು ಬಿತ್ತೋ ಅಂತಾರಲ್ಲ, ದೃಷ್ಟಿಯಾಗುತ್ತೆ ಅನ್ನೋದು ನಿಜಾನ?

ನಟ ವಿಜಯ್‌ ರಾಘವೇಂದ್ರನ ಪತ್ನಿ ಸ್ಪಂದನಾ ಕೂಡ ಮುತ್ತೈದೆಯಾಗಿ ಮೃತಪಟ್ಟಿದ್ದರಿಂದ ಈಡಿಗ ಸಮುದಾಯದ ಸಂಪ್ರದಾಯದಂತೆ ಸ್ಪಂದನಾಳ ಮೃತದೇಹಕ್ಕೆ ಕೊನೆಯದಾಗಿ ತಾಳಿ ಕಟ್ಟಿಸಿ ಮುತ್ತೈದೆಯರಿಂದ ಆರತಿ ಮಾಡಿಸಲಾಯಿತು. ನಂತರ, ಕೊನೆಯದಾಗಿ ಎಲ್ಲರೂ ಮತ್ತೈದೆ ಸ್ಪಂದನಾಳ ಮುಖವನ್ನು ನೋಡಿದ ನಂತರ, ಅವರ ಮೈಮೇಲಿದ್ದ ಎಲ್ಲ ಆಭರಣಗಳನ್ನೂ ಬಿಚ್ಚಿಕೊಳ್ಳಲಾಯಿತು. ನಂತರ, ಅಂತ್ಯಕ್ರಿಯೆಯ ಕೊನೆಯ ಸಂಸ್ಕಾರ ನೆರವೇರಿಸಲಾಯಿತು.ನಟ ವಿಜಯ್‌ ರಾಘವೇಂದ್ರನ ಪತ್ನಿ ಸ್ಪಂದನಾ ಮುತ್ತೈದೆಯಾಗಿ ಸಾವನ್ನಪ್ಪಿದ್ದಾಳೆ. ಆದರೆ, ಈಡಿಗ ಸಮುದಾಯದ ಸಂಪ್ರದಾಯದಂತೆ ಕೊನೆಯದಾಗಿ ಸ್ಪಂದನಾ ಪತಿ ವಿಜಯ್‌ ರಾಘವೇಂದ್ರ ತಾಳಿಯನ್ನು ಕಟ್ಟಿ ಮುತ್ತೈದೆ ಭಾಗ್ಯವನ್ನು ನೀಡಿ ಅಂತ್ಯಕ್ರಿಯೆಯ ವಿಧಿವಿಧಾನ ನೆರವೇರಿಸಿದರು.

ಹಿಂದೂ ಧರ್ಮದ ಸಂಪ್ರದಾಯಗಳಂತೆ ಹಲವು ಸಮುದಾಯಗಳಲ್ಲಿ ವಿವಿಧ ಸಂಪ್ರದಾಯಗಳನ್ನು ಅನುಸರಿಸಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಇನ್ನು ಮುತ್ತೈದೆ ಸಾವು ಬರಲೆಂದು ಸಂಪ್ರದಾಯಸ್ಥ ಮಹಿಳೆಯರು ದೇವರಲ್ಲಿ ಕೇಳಿಕೊಳ್ಳುತ್ತಾರೆ. ಮುತ್ತೈದೆ ಸಾವು ಎಂದರೆ ಗಂಡ ಬದುಕಿರುವಾಗಲೇ ಪತ್ನಿ ಸಾವನ್ನಪ್ಪುವುದು ಆಗಿದೆ. ಮುತ್ತೈದೆಯಾಗಿ ಸಾವಿಗೀಡಾದ ಮಹಿಳೆಯರನ್ನು ಈಡಿಗ ಸಮುದಾಯ ಸೇರಿ ಹಲವು ಸಮುದಾಯಗಳಲ್ಲಿ ವಿವಿಧ ಸಂಪ್ರದಾಯಗಳನ್ನು ಪಾಲನೆ ಮಾಡಲಾಗುತ್ತದೆ. ಅದರಲ್ಲಿ ಕೊನೆಯದಾಗಿ ಮೃತ ಪತ್ನಿಗೆ ತಾಳಿ ಕಟ್ಟುವ ಸಂಪ್ರದಾಯವನ್ನೂ ಮಾಡಲಾಗುತ್ತಿದೆ.

ಸ್ಪಂದನಾ ಇಲ್ಲದೆ ರಾಘು ಜೀವನ ಶೂನ್ಯ; ನಟ ಹರೀಶ್‌ ರಾಜ್‌

ನಟ ವಿಜಯ್‌ ರಾಘವೇಂದ್ರನ ಪತ್ನಿ ಸ್ಪಂದನಾ ಕೂಡ ಮುತ್ತೈದೆಯಾಗಿ ಮೃತಪಟ್ಟಿದ್ದರಿಂದ ಈಡಿಗ ಸಮುದಾಯದ ಸಂಪ್ರದಾಯದಂತೆ ಸ್ಪಂದನಾಳ ಮೃತದೇಹಕ್ಕೆ ಕೊನೆಯದಾಗಿ ತಾಳಿ ಕಟ್ಟಿಸಿ ಮುತ್ತೈದೆಯರಿಂದ ಆರತಿ ಮಾಡಿಸಲಾಯಿತು. ನಂತರ, ಕೊನೆಯದಾಗಿ ಎಲ್ಲರೂ ಮತ್ತೈದೆ ಸ್ಪಂದನಾಳ ಮುಖವನ್ನು ನೋಡಿದ ನಂತರ, ಅವರ ಮೈಮೇಲಿದ್ದ ಎಲ್ಲ ಆಭರಣಗಳನ್ನೂ ಬಿಚ್ಚಿಕೊಳ್ಳಲಾಯಿತು. ನಂತರ, ಅಂತ್ಯಕ್ರಿಯೆಯ ಕೊನೆಯ ಸಂಸ್ಕಾರ ನೆರವೇರಿಸಲಾಯಿತು.

ನಾವು ಮೃತದೇಹವನ್ನು ಸುಡುವಂತಿಲ್ಲ: ಇನ್ನು ಈಡಿಗ ಸಮುದಾಯದ ಮುತ್ತೈದೆ ಸಾವಿನ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಪ್ರಣಾವನಂದಶ್ರೀ ಸ್ವಾಮೀಜಿ ಅವರು, ಈಡಿಗ ಸಮುದಾಯದ ಸಂಪ್ರದಾಯದಂತೆ ಸ್ಪಂದನ ವಿಧಿ ವಿಧಾನ ನೇರವೇರಿಸಲಾಗಿದೆ. ಮನೆಯಲ್ಲಿಯೇ ಎಲ್ಲಾ ಸಂಪ್ರದಾಯವನ್ನು ಮಾಡಲಾಗಿದೆ. ಈಡಿಗ ಬಿಲ್ಲವ ಸಂಪ್ರದಾಯದಂತೆ ನಾರಾಯಣ ಗುರುಗಳು ಹೇಳಿದಂತೆ ಶಾಸ್ತ್ರ ಮಾಡಲಾಗಿದೆ. ನಾರಾಯಣ ಗುರುಗಳು ಹೇಳಿರುವಂತೆ ಬೆಳಿಗ್ಗೆ 9 ಗಂಟೆಗೆಯೊಳಗೆ ಎಲ್ಲವನ್ನೂ ಶಾಸ್ತ್ರ ಮಾಡಿ ಮುಗಿಸಲಾಗಿದೆ. ನಾವು ಮೃತದೇಹವನ್ನು ಹೂಳುವಂತಿಲ್ಲ ಸುಡಬೇಕೆಂದು ಸೂಚನೆ ನೀಡಿದ್ದಾರೆ. ಅದರಂತೆ ಸುಡಲಾಗಿದೆ. ಮಗ ಶೌರ್ಯ ಮತ್ತು ಕುಟುಂಬದ ಸದಸ್ಯರ ‌ಮೂಲಕ ವಿಧಿ ವಿಧಾನವನ್ನು ಮನೆ ಹತ್ತಿರ ಮಾಡಿಸಿದ್ದೇವೆ. ಮನೆಯಲ್ಲಿ 11 ದಿನಗಳ ಕಾಲ ಪೂಜೆಗಳು ನಡೆಯುತ್ತದೆ ಎಂದು ಮಾಹಿತಿ ನೀಡಿದರು. 

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಬೆಂಗಳೂರಲ್ಲೇ ಇದೆ ಟಾಕ್ಸಿಕ್ ಟೀಸರ್‌ನ ವಿದೇಶಿ ಜಗತ್ತು; ಕಾರು ಗುದ್ದಿದ ಶೂಟಿಂಗ್ ಸ್ಪಾಟ್ ರಿವೀಲ್ ಮಾಡಿದ ಅಲೆಮಾರಿ!
ಟಾಕ್ಸಿಕ್ ಚಿತ್ರದ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು: ಯಶ್‌ಗೆ ಕಾನೂನು ಸಂಕಷ್ಟ, ಫ್ಯಾನ್ಸ್‌ಗೆ ಆತಂಕ ಮೂಡಿಸಿದ ಪತ್ರ!