ನಟ ಸಂಚಾರಿ ವಿಜಯ್‌ ಬುಡಕಟ್ಟು ಜನರ ಬಗ್ಗೆ ಮುಂದಿಟ್ಟ ಬೇಡಿಕೆಯನ್ನು ಈಡೇರಿಸಿದ 'ಉಸಿರು' ತಂಡ!

Suvarna News   | Asianet News
Published : Jul 12, 2021, 11:18 AM IST
ನಟ ಸಂಚಾರಿ ವಿಜಯ್‌ ಬುಡಕಟ್ಟು ಜನರ ಬಗ್ಗೆ ಮುಂದಿಟ್ಟ ಬೇಡಿಕೆಯನ್ನು ಈಡೇರಿಸಿದ 'ಉಸಿರು' ತಂಡ!

ಸಾರಾಂಶ

ದಿವಂಗತ ಗೆಳೆಯನ ಕೊನೆ ಆಸೆ ಈಡೇರಿಸಿದ  'ಉಸಿರು' ತಂಡ. ಬುಡಕಟ್ಟು ಜನರ ಈ ತೊಂದರೆ ಬಗ್ಗೆ ಯಾರೂ ಗಮನ ಹರಿಸಿರಲಿಲ್ಲವೇ? 

ರಸ್ತೆ ಅಪಘಾತದಿಂದ ಕೊನೆಯುಸಿರೆಳೆದ ನಟ ಸಂಚಾರಿ ವಿಜಯ್, ಕೊರೋನಾ ವಾರಿಯರ್‌ ಆಗಿ ಕವಿರಾಜ್‌ ಅವರ 'ಉಸಿರು' ತಂಡದಲ್ಲಿ ಕೆಲಸ ಮಾಡುತ್ತಿದ್ದರು. ಸಭೆಯೊಂದರಲ್ಲಿ ಬುಡಕಟ್ಟು ಜನರ ಬಗ್ಗೆ ಚರ್ಚಿಸಿ ಮನವಿಯೊಂದನ್ನು ಮುಂದಿಟ್ಟಿದ್ದರು.

ನಾಗರಹೊಳೆ ಅಭಯಾರಣ್ಯದಲ್ಲಿರುವ ಬುಡಕಟ್ಟು ಜನರ ಗುಡಿಸಲುಗಳ ಮೇಲ್ಛಾವಣಿಗೆ ಹಾಕಲಾಗಿರುವ ಟಾರ್ಪಲಿನ್ ಹರಿದು ಹೋಗಿದೆ, ಹೀಗಾಗಿ ಅವರಿಗೆ ಹೊಸ ಟಾರ್ಪಲಿನ್ ಹಾಕಿಸಿಕೊಡಬೇಕು ಎಂದಿದ್ದರು. ಈ ಕೆಲಸ ನಡೆಯುವ ಮುನ್ನವೇ ಸಂಚಾರಿ ನಿಧನರಾದರು. 

ಜನರಿಗೆ ಸಹಾಯ ಮಾಡಬೇಕೆಂದು ವಿಜಯ್ ದಿನಕ್ಕೆ 10 ಮೆಸೇಜ್ ಮಾಡುತ್ತಿದ್ದರು: ಕವಿರಾಜ್ 

ಹೀಗಾಗಿ ಉಸಿರು ತಂಡ, ಗೆಳೆಯನ ಕೊನೆ ಆಸೆಯನ್ನು ಈಡೇರಿಸಬೇಕು ಎಂದು ನಾಗರಹೊಳೆ ಅಭಯಾರಣ್ಯಕ್ಕೆ ಭೇಟಿ ನೀಡಿ ಗುಡಿಸಲುಗಳ ಅಳತೆಯನ್ನು ಮೂರು ವಾರದ ಹಿಂದೆಯೇ ತೆಗೆದುಕೊಂಡು ಹೋಗಿದ್ದರು. ಮತ್ತೆ ಉಸಿರು ತಂಡದ ಸದಸ್ಯರ ಜೊತೆ ಕಾಡಿಗೆ ಭೇಟಿ ನೀಡಿದ ತಂಡ ಅರಣ್ಯ ಇಲಾಖೆಯ ಕೆಲವು ಸಿಬ್ಬಂದಿಗಳ ನೆರವಿನಿಂದ ಹೊಸ ಟಾರ್ಪಲಿನ್‌ ಹಾಕಿಸಿದ್ದಾರೆ. ಈ ಮೂಲಕ ಸಂಚಾರಿ ವಿಜಯ್ ಕೊನೆ ಆಸೆಯನ್ನು ಈಡೇರಿಸಿದ್ದಾರೆ. 

ಎಲ್ಲರೂ ಫುಡ್ ಕಿಟ್, ಆಕ್ಸಿಜನ್, ಬೆಡ್ ಚಿಂತೆಯಲ್ಲಿದ್ದಾಗ ವಿಜಯ್‌ಗೆ ಇಂಥ ಯೋಚನೆ ಬಂದಿರುವುದು ಗ್ರೇಟ್. ಯಾರೂ ಗಮನ ಹರಿಸದ ವಿಚಾರದೆಡೆ ವಿಜಯ್ ಗಮನಹರಿಸಿದ್ದರು  ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

BBK 12 ಗಿಲ್ಲಿ ನಟನ ಗುಣ ಹೇಳುತ್ತಲೇ Bigg Boss Winner ಯಾರೆಂದು​ ಹಿಂಟ್​ ಕೊಟ್ಟೇ ಬಿಟ್ರು ಶಿವರಾಜ್​ ಕುಮಾರ್!
BBK 12: ಗೆಲ್ತಾರಾ ಗಿಲ್ಲಿ ನಟ..? ಈ ಮಂಡ್ಯದ ಹೈದ ನಟರಾಜ್‌ನ ಪ್ಲಸ್ & ಮೈನಸ್ ಏನು? ಸೀಕ್ರೆಟ್ ರಿವೀಲ್..!