KGF ತಾತ ಕೃಷ್ಣ ಜಿ.ರಾವ್ ಆಸ್ಪತ್ರೆಗೆ ದಾಖಲು; ಆರೋಗ್ಯ ಸ್ಥಿತಿ ಗಂಭೀರ

Published : Dec 01, 2022, 12:39 PM IST
KGF ತಾತ ಕೃಷ್ಣ ಜಿ.ರಾವ್ ಆಸ್ಪತ್ರೆಗೆ ದಾಖಲು; ಆರೋಗ್ಯ ಸ್ಥಿತಿ ಗಂಭೀರ

ಸಾರಾಂಶ

ಬೆಂಗಳೂರಿನ ಖಾಸಗಿ  ಆಸ್ಪತ್ರೆಗೆ ದಾಖಲಾದ ಕೆಜಿಎಫ್ ಖ್ಯಾತಿಯ ಕೃಷ್ಣಿ ಜಿ.ರಾವ್‌. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದೆ...

ಕನ್ನಡ ಚಿತತ್ರರಂಗದಲ್ಲಿ ಇತಿಹಾಸ ಸೃಷ್ಟಿ ಮಾಡಿದ ಕೆಜಿಎಫ್ ಸಿನಿಮಾದಲ್ಲಿ ಪಂಚ್ ಡೈಲಾಗ್ ಹೊಡೆಯುವ ಮೂಲಕ ವಿಶ್ವಾದ್ಯಂತ ಹೆಸರು ಮಾಡಿರುವ ಕೃಷ್ಣ ಜಿ.ರಾವ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಏಕಾಏಕಿ ಆರೋಗ್ಯದಲ್ಲಿ ಏರುಪೇರು ಕಂಡ ಕಾರಣ ಮಧ್ಯೆರಾತ್ರಿ ಬೆಂಗಳೂರಿನ ಸೀತಾ ಸರ್ಕಲ್ ಬಳಿ ಇರುವ ವಿನಾಯಕ ಆಸ್ಪತ್ರೆಗೆ ದಾಖಲಾಗಿದ್ದಾರೆ. 

ನಿನ್ನೆ ಸಂಬಂಧಿಕರ ಮನೆಗೆ ಹೋಗಿದ್ದ ಕೃಷ್ಣ ಅವರು ಸುಸ್ತಾದ ಕಾರಣ ಮಧ್ಯೆರಾತ್ರಿ ವಿನಾಯಕ ಆಸ್ಪತ್ರೆಗೆ ದಾಖಲಾಗಿದ್ದು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದಷ್ಟು ಬೇಗ ಗುಣಮುಖರಾಗಿ ಬರಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಸಿನಿ ನಂಟು:

'ನಿಮಗೊಂದು ಸಲಹೇ ಕೊಡ್ತೀನಿ. ನೀವು ಮಾತ್ರ ಅವನಿಗೆ ಅಡ್ಡ ನಿಲ್ಲೋಕೆ ಹೋಗಬೇಡು ಸರ್.. ' ಕೆಜಿಎಫ್ ಸಿನಿಮಾ ನೋಡಿದವರಿಗೆ ಈ ಡೈಲಾಗ್ ಗೊತ್ತಿರುತ್ತದೆ. ತಾತ ಹೇಳಿರುವ ಈ ಡೈಲಾಗ್ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಕೆಜಿಎಫ್ ಪಾರ್ಟ್-1 ಮತ್ತು ಪಾರ್ಟ್-2ನ್ಲೂ ಕಾಣಿಸಿಕೊಂಡಿರುವ ನಟ ಕೃಷ್ಣ ಜಿ ರಾವ್ ಅವರು ಕೆಜಿಎಫ್ ತಾತ ಅಂತನೆ ಫೇಮಸ್ ಆಗಿದ್ದಾರೆ. ಇದೀಗ ಕೆಜಿಎಫ್ ತಾತ ಹೀರೋ ಆಗಿ ಕನ್ನಡ ಅಭಿಮಾನಿಗಳ ಮುಂದೆ ಬರ್ತಿದ್ದಾರೆ.  ಕೃಷ್ಣ ಜಿ ರಾವ್ ನಟನೆಯ ಹೊಸ ಸಿನಿಮಾ ಈಗಾಗಲೇ ಅನೌನ್ಸ್ ಆಗಿದ್ದು  ರಿಲೀಸ್‌ಗೆ ತಂಡ ಕಾಯುತ್ತಿದೆ. 

ಹತ್ತು ತಲೆಯುಳ್ಳ ರಾವಣನ ಅವತಾರದಲ್ಲಿ ರಿಲೀಸ್ ಆಗಿರುವ ಫಸ್ಟ್ ಲುಕ್ ನಲ್ಲಿ ಕೃಷ್ಣ ಜಿ ರಾವ್ ಕಿರೀಟ, ಗ್ಲಾಸ್ ಹಾಕಿ ಫೋಸ್ ಕೊಟ್ಟಿದ್ದು, ನ್ಯಾನೋ ಕಾರು ಕೂಡ ಹೈಲೇಟ್ ಆಗಿದ್ದು, ಒಂದಷ್ಟು ಪ್ರತಿಭಾನ್ವಿತ ಕಲಾವಿದರು ಪೋಸ್ಟರ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಕಾಕ್ರೋಚ್ ಸುಧಿ, ಗಿರೀಶ್ ಶಿವಣ್ಣ, ಪ್ರಶಾಂತ್ ಸಿದ್ದಿ, ಆನಂತು, ಅಪೂರ್ವ ಸೇರಿದಂತೆ ಹಲವರು ಸಿನಿಮಾದಲ್ಲಿ ನಟಿಸ್ತಿದ್ದಾರೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಆರ್ಯನ್ ಖಾನ್‌ಗೆ ಝೈದ್ ಖಾನ್ ಸಪೋರ್ಟ್; ಆದ್ರೂ ಪಬ್ಲಿಕ್‌ ಪ್ಲೇಸ್‌ನಲ್ಲಿ 'ಮಿಡ್ಲ್ ಫಿಂಗರ್' ಎತ್ತಿದ್ದು ತಪ್ಪು ಅಂತಿರೋ ನೆಟ್ಟಿಗರು!
ರಿಷಬ್ ಶೆಟ್ಟಿ ದೈವದ ಮುಂದೆ ಅತ್ಬಿಟ್ರಾ? ಅಳಬೇಡ ಅಂತ ಸಂತೈಸಿದ್ದೇಕೆ ಪಂಜುರ್ಲಿ ದೈವ?