
ಉಡುಪಿ (ಆ.25) ಖ್ಯಾತ ಕಲಾ ನಿರ್ದೇಶಕ, ಸ್ಯಾಂಡಲ್ವುಡ್ ನಟ ದಿನೇಶ್ ಮಂಗಳೂರು ಇಂದು (ಆ.25) ನಿಧನರಾಗಿದ್ದಾರೆ. ಕುಂದಾಪುರ ಕೋಟೇಶ್ವರದ ಸರ್ಜನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಿನೇಶ್ ಮಂಗಳೂರು, ಚಿಕಿತ್ಸೆ ಫಲಕಾರಿಯಾದೇ ಮೃತಪಟ್ಟಿದ್ದಾರೆ. ಕೆಜಿಎಫ್, ಹರಿಕಥೆ ಅಲ್ಲ ಗಿರಿಕಥೆ, ರಿಕ್ಕಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪೋಷಕ ನಟರಾಗಿ ನಟಿಸಿದ್ದ ದಿನೇಶ್ ಮಂಗಳೂರು ನಿಧನಕ್ಕೆ ಹಲವರು ಕಂಬನಿ ಮಿಡಿದಿದ್ದಾರೆ.
ಕುಂದಾಪುರದ ಬಳಿ ಬಾಡಿಗೆ ಮನೆಯಲ್ಲಿದ್ದ ದಿನೇಶ್ ಮಂಗಳೂರು, ಅನಾರೋಗ್ಯದ ಕಾರಣ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಬಳಿಕ ಕುಂದಾಪುರದಲ್ಲಿ ನೆಲೆಸಿದ್ದರು. ಆದರೆ ಮತ್ತೆ ಕಳೆದ ವಾರ ತೀವ್ರ ಅಸ್ವಸ್ಥರಾಗಿದ್ದ ದಿನೇಶ್ ಮಂಗಳೂರು ಅವರನ್ನು ಕುಂದಾಪುರದ ಸರ್ಜನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಮಂಜಾನೆ ಸರ್ಜನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸಿದೆ ಮೃತಪಟ್ಟಿದ್ದಾರೆ. ಅಪಾರ ಅಭಿಮಾನಿಗಳ ಬಳಗ ಹೊಂದಿದ್ದ ದಿನೇಶ್ ಮಂಗಳೂರು, ಹಲವು ನಟ ನಟಿಯರ ಆತ್ಮೀಯರಾಗಿದ್ದರು.
ಕಲಾಭಿಮಾನಿಗಳ ಅಂತಿಮ ದರ್ಶನಕ್ಕೆ ಪಾರ್ಥೀವ ಶರೀರ ಬೆಂಗಳೂರಿಗೆ ರವಾನೆ ಮಾಡುವ ಸಾಧ್ಯತೆ ಇದೆ. ಈ ಕುರಿತು ದಿನೇಶ್ ಮಂಗಳೂರು ಕುಟುಂಬಸ್ಥರ ಜೊತೆ ಚರ್ಚಿಸಿ ನಿರ್ಧಾರ ಘೋಷಣೆಯಾಗಲಿದೆ. ಮಾಹಿತಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು, ಆಪ್ತರು, ಅಭಿಮಾನಿಗಳು ಕುಂದಾಪುರ ಸರ್ಜನ್ ಆಸ್ಪತ್ರೆಗೆ ದೌಡಾಯಿಸಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.