ನನಗೆ ಗೊತ್ತು, ದಯವಿಟ್ಟು ತಾಳ್ಮೆ ಇಟ್ಕೊಳ್ಳಿ: Yash 19 ಚಿತ್ರದ ಬಗ್ಗೆ ರಾಕಿಭಾಯ್ ಹೀಗೆ ಅನ್ನೋದಾ!

Published : Nov 24, 2023, 02:30 AM IST
ನನಗೆ ಗೊತ್ತು, ದಯವಿಟ್ಟು ತಾಳ್ಮೆ ಇಟ್ಕೊಳ್ಳಿ: Yash 19 ಚಿತ್ರದ ಬಗ್ಗೆ ರಾಕಿಭಾಯ್ ಹೀಗೆ ಅನ್ನೋದಾ!

ಸಾರಾಂಶ

ರಾಕಿಂಗ್ ಸ್ಟಾರ್ ಯಶ್ ಅವರು ತಮ್ಮ ಯಶ್ 19 ಸಿನಿಮಾ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಅವರ ಮುಂದಿನ ಚಿತ್ರದ ಅಪ್‌ಡೇಟ್‌ಗಾಗಿ ಪ್ರೇಕ್ಷಕರು ಕಳೆದ ಒಂದೂವರೆ ವರ್ಷದಿಂದ ಕಾಯುತ್ತಿದ್ದಾರೆ. ಹೀಗಿರುವಾಗ ತಮ್ಮ ಮುಂದಿನ ಚಿತ್ರದ ಬಗ್ಗೆ ಯಶ್ ಪ್ರತಿಕ್ರಿಯೆ ನೀಡಿದ್ದಾರೆ.  

ರಾಕಿಂಗ್ ಸ್ಟಾರ್ ಯಶ್ ಅವರು ತಮ್ಮ ಯಶ್ 19 ಸಿನಿಮಾ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಅವರ ಮುಂದಿನ ಚಿತ್ರದ ಅಪ್‌ಡೇಟ್‌ಗಾಗಿ ಪ್ರೇಕ್ಷಕರು ಕಳೆದ ಒಂದೂವರೆ ವರ್ಷದಿಂದ ಕಾಯುತ್ತಿದ್ದಾರೆ. ಹೀಗಿರುವಾಗ ತಮ್ಮ ಮುಂದಿನ ಚಿತ್ರದ ಬಗ್ಗೆ ಯಶ್ ಪ್ರತಿಕ್ರಿಯೆ ನೀಡಿದ್ದಾರೆ. ಹೌದು! ಬಿಜಿಎಸ್ ಉತ್ಸವ 2023 ಕಾರ್ಯಕ್ರಮದಲ್ಲಿ ಯಶ್ ಭಾಗಿಯಾಗಿದ್ದಾರೆ. ಯಶ್‌19 ಅಪ್‌ಡೇಟ್ ಬಗ್ಗೆಯೂ ಮಾತನಾಡಿದ್ದಾರೆ. ರಾಕಿಭಾಯ್ ಖಡಕ್ ಲುಕ್‌ ನೋಡಿ ಅಭಿಮಾನಿಗಳು ಖುಷಿಯಾಗಿದ್ದಾರೆ. ಬಿಜಿಎಸ್ ಉತ್ಸವ 2023 ವೇದಿಕೆಯಲ್ಲೂ ಯಶ್ ತಮ್ಮ ಮುಂದಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. 

ಹೊಸಬರು ಸಾಕಷ್ಟು ಜನ ಚಿತ್ರರಂಗಕ್ಕೆ ಬರ್ತಿದ್ದಾರೆ. ಎಲ್ಲರ ಸಿನಿಮಾಗಳನ್ನು ನೋಡಿ ಬೆನ್ನುತಟ್ಟಿ. ನಮ್ಮ ಸಿನಿಮಾಗಳನ್ನು ನೋಡಿ ಬೆನ್ನುತಟ್ಟಿದ್ದಕ್ಕೆ ನಾವು ಇಲ್ಲಿದ್ದೀವಿ. ನನಗೆ ಗೊತ್ತು ನೀವೆಲ್ಲಾ ಮುಂದಿನ ಸಿನಿಮಾ ಅಪ್‌ಡೇಟ್ ಕೇಳ್ತಾ ಇದ್ದೀರಾ. ಒಂದಂತು ಹೇಳ್ತೀನಿ. ನಾನು ಕೂತಿದ್ದೀನಿ ಅಂದ್ರೆ ನೀವು ಕೊಟ್ಟ ಧೈರ್ಯದಿಂದ. ಹಾಗಂತ ರಿಲ್ಯಾಕ್ಸ್ ಆಗಿ ನಾನು ಕೂತಿಲ್ಲ. ನೀವು ಕೊಟ್ಟ ಸಕ್ಸಸ್ ಜವಾಬ್ದಾರಿ ಅಂತ ತಿಳ್ಕೊಂಡು ಇನ್ನು ಮುಂದೆ ಹೋಗಿ ಕೆಲಸ ಮಾಡಬೇಕು ಅಂತ ಮುಂದಿನ ಹಂತಕ್ಕೆ ನಾನು ಸಿದ್ಧನಾಗುತ್ತಿದ್ದೀನಿ. ಕೆಲಸ ಮಾಡ್ತೀನಿ. ನನಗೆ ಗೊತ್ತು. ತಾಳ್ಮೆ ಇರಲಿ. ನಾನು ಯಾವತ್ತೂ ಅನೌನ್ಸ್‌ಮೆಂಟ್ ಅಂತ ಹೇಳಲಿಲ್ಲ. 

'ಸ್ವಾತಿ ಮುತ್ತಿನ ಮಳೆ ಹನಿಯೇ' ಕತೆ ಏನು?: ನಿರ್ಮಾಪಕಿ ಆಗಿ ಲಾಂಚ್ ಆಗ್ತಿದ್ದಾರೆ ನಟಿ ರಮ್ಯಾ!

ತುಂಬಾ ಜನ ಅವರ ಖುಷಿಗೆ ಪ್ರತಿ ಹಬ್ಬ ಬಂದಾಗ, ಯಾವುದೇ ತಿಂಗಳು ಬಂದಾಗ ಈ ತಿಂಗ್ಳು ಅಪ್‌ಡೇಟು, ಈ ತಿಂಗ್ಳು ಅಪ್‌ಡೇಟ್ ಅಂತ ಹೇಳಿ ಹೇಳಿ ನಿಮಗೆ ಆ ತಾಳ್ಮೆ ಕಮ್ಮಿ ಆಗ್ತಿದೆ. ತಪ್ಪು ಸಂದೇಶ ರವಾನೆಯಾಗ್ತಿದೆ. ನಾನೇ ಹೇಳ್ತೀನಿ. ಸರಿಯಾಗಿ ಬೆಂದಮೇಲೆ ಅಡಿಗೆ ಬಡಿಸ್ಬೇಕು. ಮುಂಚೇನೆ ಮಾಡೋದು ನನಗೆ ಇಷ್ಟವಿಲ್ಲ. ದಯವಿಟ್ಟು ತಾಳ್ಮೆ ಇಟ್ಕೊಳ್ಳಿ. ಖಂಡಿತ ನೀವೆಲ್ಲ ಇಷ್ಟಪಡುವಂತಹ ಕೆಲಸ ಆಗುತ್ತದೆ ಎಂದು ನಟ ಯಶ್ ಹೇಳಿದ್ದಾರೆ. ಎರಡು ವರ್ಷಗಳಿಂದ ರಾಕಿಂಗ್ ಸ್ಟಾರ್ ಮುಂದಿನ ಸಿನಿಮಾ ಬಗ್ಗೆ ಚರ್ಚೆ ನಡೆಯುತ್ತಲೇ ಇದೆ. ಅಂತೆ ಕಂತೆ ಸುದ್ದಿಗಳು ಸಾಕಷ್ಟು ಹರಿದಾಡಿತ್ತು. ಆದರೆ ಅಧಿಕೃತವಾಗಿ ಯಾವುದೇ ಸುದ್ದಿ ಬರಲಿಲ್ಲ.

ಮೊದಲಿಗೆ ಯಶ್‌19 ಚಿತ್ರವನ್ನು ನರ್ತನ್ ನಿರ್ದೇಶನ ಮಾಡ್ತಾರೆ ಎನ್ನಲಾಗಿತ್ತು. ಬಳಿಕ ನಿರ್ದೇಶಕಿ ಗೀತು ಮೋಹನ್ ದಾಸ್ ಹೆಸರು ಚಾಲ್ತಿಗೆ ಬಂತು. ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆ ಸಿನಿಮಾ ನಿರ್ಮಾಣ ಮಾಡುತ್ತದೆ ಎನ್ನಲಾಯಿತು. ಈ ನಡುವೆ ಯಶ್ ಬಾಲಿವುಡ್‌ಗೆ ಹೋಗ್ತಾರೆ. 'ರಾಮಾಯಣ' ಚಿತ್ರದಲ್ಲಿ ರಾವಣನಾಗಿ ನಟಿಸುತ್ತಿದ್ದಾರೆ ಎನ್ನುವ ಮಾತುಗಳು ಕೇಳಿಬರ್ತಿದೆ. ಆದರೆ ಯಶ್ ಮಾತ್ರ ಮೌನವಾಗಿಯೇ ಇದ್ದಾರೆ. ಮುಂದಿನ ಚಿತ್ರಕ್ಕಾಗಿ ದೇಶ ವಿದೇಶ ಸುತ್ತಾಡುತ್ತಿದ್ದಾರೆ. ತಮ್ಮ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಘೋಷಣೆ ಮಾಡ್ತಾರಾ? ಕಾದು ನೋಡಬೇಕಿದೆ.

'ಮ್ಯಾಕ್ಸ್‌' ಸಿನಿಮಾದಲ್ಲಿ ಇವರೇ ವಿಲನ್: ಕಿಚ್ಚನ ಮುಂದೆ ಅಬ್ಬರಿಸುವವರು ಇವರೇ!

ಇನ್ನು ಯಶ್ ತಮ್ಮ ಮುಂದಿನ ಚಿತ್ರಕ್ಕಾಗಿ ತೆರೆಮರೆಯಲ್ಲಿ ಭರ್ಜರಿ ಕಸರತ್ತು ಮಾಡುತ್ತಿದ್ದಾರೆ. 'KGF' ಸರಣಿ ಬಳಿಕ ಮುಂದಿನ ಚಿತ್ರವನ್ನು ಬಹಳ ದೊಡ್ಡಮಟ್ಟದಲ್ಲೇ ಪ್ಲ್ಯಾನ್ ಮಾಡುತ್ತಿದ್ದಾರೆ. ಅದೇ ಕಾರಣಕ್ಕೆ ತಡವಾಗುತ್ತಿದೆ. ಯಶ್ ಮುಂದಿನ ಸಿನಿಮಾ ಬಗ್ಗೆ ಬಹಳ ಒತ್ತಡದಲ್ಲಿದ್ದಾರೆ ಎನ್ನುವ ವಾದವೂ ಇದೆ. ಆದರೆ ಇದನ್ನು ಒಪ್ಪಲು ಯಶ್ ಸಿದ್ಧರಿಲ್ಲ. ಒಳ್ಳೆ ಸಿನಿಮಾ ಮಾಡೋಕೆ ಆರಂಭಿಸೋಕೆ ಮತ್ತಷ್ಟು ಸಮಯ ಬೇಕು ಎಂದು ಪದೇ ಪದೇ ಹೇಳುತ್ತಾ ಬರುತ್ತಿದ್ದಾರೆ. ಮತ್ತೊಮ್ಮೆ ಅದೇ ಮಾತನ್ನು ಪುನರುಚ್ಚರಿಸಿದ್ದಾರೆ.
 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ವೆಡ್ಡಿಂಗ್ ಸೀಸನ್ ಶುರು, ಆದ್ರೆ ನನ್ನ ಮದುವೆ...... ಏನ್ ಹೇಳಿದ್ರು Sanvi Sudeep
ಡಿಸೆಂಬರ್‌ಗೆ ಸ್ಯಾಂಡಲ್‌ವುಡ್‌ ದಬ್ಬಾಳಿಕೆ: ಡೆವಿಲ್‌, 45, ಮಾರ್ಕ್‌ ಮೂವರು ಸೂಪರ್‌ಸ್ಟಾರ್‌ಗಳ ಮಹಾಯುದ್ಧ