ದರ್ಶನ್- ಸುದೀಪ್ ಮುಖಾಮುಖಿಗೆ ಸಿದ್ಧವಾಗಿದೆ ವೇದಿಕೆ!

Published : Mar 02, 2019, 06:14 PM IST
ದರ್ಶನ್- ಸುದೀಪ್ ಮುಖಾಮುಖಿಗೆ ಸಿದ್ಧವಾಗಿದೆ ವೇದಿಕೆ!

ಸಾರಾಂಶ

ಕಿಚ್ಚ ಸುದೀಪ್ ಹಾಗೂ ದರ್ಶನ್ ಮಧ್ಯೆ ಏನೂ ಇಲ್ಲ ಎಂದರೂ ಅವರಿಬ್ಬರೂ ಒಟ್ಟಿಗೆ ಕಾಣಿಸಿಕೊಳ್ಳುವುದು ಅಪರೂಪ. ಎಲ್ಲಿಯೂ ಒಟ್ಟಿಗೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ಆದರೆ ಇದೀಗ ಇಬ್ಬರೂ ಒಂದೇ ಕಡೆ ಮುಖಾಮುಖಿಯಾಗಲು ವೇದಿಕೆಯೊಂದು ಸಿದ್ಧವಾಗಿದೆ. 

ಬೆಂಗಳೂರು (ಮಾ. 02): ಕಿಚ್ಚ ಸುದೀಪ್ ಹಾಗೂ ದರ್ಶನ್ ಮಧ್ಯೆ ಏನೂ ಇಲ್ಲ ಎಂದರೂ ಅವರಿಬ್ಬರೂ ಒಟ್ಟಿಗೆ ಕಾಣಿಸಿಕೊಳ್ಳುವುದು ಅಪರೂಪ. ಎಲ್ಲಿಯೂ ಒಟ್ಟಿಗೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ಆದರೆ ಇದೀಗ ಇಬ್ಬರೂ ಒಂದೇ ಕಡೆ ಮುಖಾಮುಖಿಯಾಗಲು ವೇದಿಕೆಯೊಂದು ಸಿದ್ಧವಾಗಿದೆ. 

ಸಿನಿಮಾ ಆಗಲಿದೆ ವೀರಪುತ್ರ ಅಭಿನಂದನ್ ಸಾಹಸಗಾಥೆ

ಸಸ್ಪೆನ್ಸ್ ಥ್ರಿಲ್ಲರ್ ಖ್ಯಾತಿಯ ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದ ’ಉದ್ಘರ್ಷ’ ಸಿನಿಮಾ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ದರ್ಶನ್- ಸುದೀಪ್ ಮುಖಾಮುಖಿಯಾಗ್ತಾರಾ ಎಂಬ ಕುತೂಹಲ ಮೂಡಿಸಿದ್ದಾರೆ. 

ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಯಲ್ಲಿ ಉದ್ಘರ್ಷ ಚಿತ್ರ ತಯಾರಾಗಿದೆ. ಮಾರ್ಚ್ 5 ರಂದು ಟ್ರೇಲರ್ ಬಿಡುಗಡೆಯಾಗಲಿದೆ. ದರ್ಶನ್ ಈ ಟ್ರೇಲರ್ ರಿಲೀಸ್ ಮಾಡಲಿದ್ದಾರಂತೆ. ಈ ಚಿತ್ರದ ಟ್ರೇಲರ್ ಗೆ ಸುದೀಪ್ ಹಿನ್ನಲೆ ಧ್ವನಿ ನೀಡಿದ್ದಾರೆ. ಹಾಗಾಗಿ ಸುದೀಪ್ ಗೂ ಇದು ವಿಶೇಷವಾದ ಚಿತ್ರ. 

'ಯಜಮಾನ' ಪೈರಸಿ ಕಂಡು ಬಂದರೆ ಈ ಸಂಖ್ಯೆಗೆ ಸಂಪರ್ಕಿಸಿ

ಒಟ್ಟಿನಲ್ಲಿ ದರ್ಶನ್ ಹಾಗೂ ಸುದೀಪ್ ಇಬ್ಬರಿಗೂ ಉದ್ಘರ್ಷ ವಿಶೇಷವಾಗಿದ್ದು ಆ ಕಾರಣಕ್ಕಾದರೂ ಒಟ್ಟಿಗೆ ವೇದಿಕೆ ಹಂಚಿಕೊಳ್ಳುತ್ತಾರಾ ನೋಡಬೇಕಿದೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
ಟಾಕ್ಸಿಕ್ ಸಿನಿಮಾ ರಿಲೀಸ್ ಸಮೀಪಿಸುತ್ತಿದ್ದಂತೆ ಐಟಿ ಪ್ರಕರಣದಲ್ಲಿ ನಟ ಯಶ್‌ಗೆ ಹೈಕೋರ್ಟ್ ರಿಲೀಫ್