ಅವರ ಜೊತೆ ಮುಂದಿನ ಸಿನಿಮಾ ಮಾಡಲು ಕಾಯ್ತಿದ್ದೀನಿ: ಪ್ರಕಾಶ್ ರಾಜ್ ಹೇಳಿಕೆಗೆ ಕಿಚ್ಚ ಸುದೀಪ್ ರಿಯಾಕ್ಷನ್

Published : Apr 05, 2023, 03:19 PM IST
ಅವರ ಜೊತೆ ಮುಂದಿನ ಸಿನಿಮಾ ಮಾಡಲು ಕಾಯ್ತಿದ್ದೀನಿ: ಪ್ರಕಾಶ್ ರಾಜ್  ಹೇಳಿಕೆಗೆ ಕಿಚ್ಚ ಸುದೀಪ್ ರಿಯಾಕ್ಷನ್

ಸಾರಾಂಶ

ನಟ ಪ್ರಕಾಶ್ ರಾಜ್ ಮಾತಿಗೆ ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡಿದ್ದು ಅವರ ಜೊತೆ ಮುಂದಿನ ಸಿನಿಮಾ ಮಾಡಲು ಕಾಯ್ತಿದ್ದೀನಿ ಎಂದು ಸಿನಿಮೀಯಾ ಶೈಲಿಯಲ್ಲೇ ಉತ್ತರ ನೀಡಿದ್ದಾರೆ. 

ಸ್ಯಾಂಡಲ್‌ವುಡ್‌ ಸ್ಟಾರ್ ನಟ ಕಿಚ್ಚ ಸುದೀಪ್‌ ರಾಜಕೀಯಕ್ಕೆ ಎಂಟ್ರಿ ಕೊಡ್ತಾರೆ ಎನ್ನುವ ಸುದ್ದಿ  ಸಂಚಲನ ಮೂಡಿಸಿತ್ತು. ಸುದೀಪ್ ಬಿಜೆಪಿ ಪ್ರವೇಶ ಮಾಡುತ್ತಾರೆ ಎನ್ನುವುದು ರಾಜ್ಯರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಸುದೀಪ್ ಪತ್ರಿಕಾಗೋಷ್ಠಿ ನಡೆಸಿ ಕುತೂಹಲಕ್ಕೆ ತೆರೆ ಎಳೆದಿದ್ದಾರೆ. ಬಿಜೆಪಿಗೆ ಸೇರಲ್ಲ ಆದರೆ ಸಿಎಂ ಬೊಮ್ಮಾಯಿ ಅವರಿಗೆ ತನ್ನ ಬೆಂಬಲ ಎಂದು ಸುದೀಪ್ ಹೇಳಿದ್ದಾರೆ. ಸಿಎಂ ಹೇಳಿದರೆ ಯಾರ ಪರ ಬೇಕಾದರೂ ಪ್ರಚಾರ ಮಾಡುತ್ತೇನೆ ಎಂದು ಸುದೀಪ್ ಸ್ಪಷ್ಟಪಡಿಸಿದ್ದಾರೆ. 

ಇದೇ ವೇಳೆ ಕಿಚ್ಚ ಬಾಹುಭಾಷಾ ನಟ ಪ್ರಕಾಶ್ ರಾಜ್ ಮಾತಿಗೂ ಪ್ರತಿಕ್ರಿಯೆ ನೀಡಿದರು. ಪ್ರಕಾಶ್ ರಾಜ್ ಜೊತೆ ಸಿನಿಮಾ ಮಾಡಲು ಕಾಯುತ್ತಿದ್ದೀನಿ ಎಂದು ಹೇಳಿದ್ದಾರೆ. 'ಪ್ರಕಾಶ್ ರಾಜ್ ಜೊತೆ ರನ್ನ ಸಿನಿಮಾ ಮಾಡಿದ್ದೇನೆ. ಅವರ ಮೇಲೆ ತುಂಬಾ ಗೌರವವಿದೆ. ಮುಂದಿನ ಸಿನಿಮಾ ಅವರ ಜೊತೆ ಮಾಡಲು ಕಾಯುತ್ತಿದ್ದೇನೆ' ಎಂದು ಸಿನಿಮಾ ಶೈಲಿಯಲ್ಲೇ ಪ್ರತಿಕ್ರಿಯೆ ನೀಡಿದ್ದಾರೆ. 

ಸುದೀಪ್ ಬಿಜೆಪಿಗೆ; ಸುಳ್ಳು ಸುದ್ದಿ, ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ ಎಂದ ಪ್ರಕಾಶ್ ರಾಜ್

ಪ್ರಕಾಶ್ ರಾಜ್ ಹೇಳಿದ್ದೇನು?

ಕಿಚ್ಚನ ರಾಜಕೀಯ ಎಂಟ್ರಿ ಬಗ್ಗೆ ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ಸುಳ್ಳು ಸುದ್ದಿ ಹರಡಿಸುತ್ತಿದೆ ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ. ಕಿಚ್ಚ ಸುದೀಪ್ ತಮ್ಮನ್ನು ತಾವು ಮಾರಿಕೊಳ್ಳುವವರು ಅಲ್ಲ ಎಂದು ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದಾರೆ. ಕರ್ನಾಟಕದಲ್ಲಿ ಸೋಲುವ ಭಯದಲ್ಲಿ.. ಭ್ರಷ್ಟ BJP ಹರಡುತ್ತಿರುವ ಸುಳ್ಳು ಸುದ್ದಿ ಎಂದು ನಾನು ನಂಬುತ್ತೇನೆ.. ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ' ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ. 

ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ: ಕಿಚ್ಚ ಸುದೀಪ್ ಸ್ಪಷ್ಟನೆ

ಸಿಎಂ ಬೊಮ್ಮಾಯಿಗೆ ಬೆಂಬಲ ಎಂದ ಸುದೀಪ್ 

'ಚಿತ್ರರಂಗದ ಕಷ್ಟದ ದಿನಗಳಲ್ಲಿ ಕೆಲವೇ ಕೆಲವರು ನನ್ನ ಪರ ನಿಂತಿದ್ದರು, ಅವರಲ್ಲಿ ನನ್ನ ಪ್ರೀತಿಯ ಮಾಮ (ಸಿಎಂ ಬೊಮ್ಮಾಯಯಿ) ಕೂಡ ಒಬ್ಬರು. ಪ್ರಾರಂಭದಿಂದನೂ ಮಾಮ ಪರಿಚಯ ನನಗೆ. ಅವರ ವ್ಯಕ್ತಿತ್ವಕ್ಕೆ ನಾನು ತಲೆಬಾಗುತ್ತೇನೆ. ಆ ವ್ಯಕ್ತಿಗೆ ನಾನು ಬೆಂಬಲ ನೀಡುತ್ತೇನೆ. ಇದು ರಾಜಕೀಯ ಎಂಟ್ರಿ ಅಲ್ಲ, ವ್ಯಕ್ತಿ ಪರ ನಿಂತಿದ್ದೀನಿ ಅಷ್ಟೆ. ಎಲ್ಲರನ್ನೂ ಮೆಚ್ಚಿಸಿಕೊಂಡು ಒಳ್ಳೆಯವನಾಗಿ ಇರಬೇಕು ಅಂದಿಂದ್ರೆ ನಾನು ಇಲ್ಲಿಗೆ ಬರ್ತಿರ್ಲಿಲ್ಲ. ಬೊಮ್ಮಾಯಿ ಯಾವುದೇ ಪಕ್ಷ ಆಗಿದ್ದರೂ ನಾನು ಅವರ ನಿಂತ್ಕೊತ್ತಿದ್ದೆ' ಎಂದು ಸುದೀಪ್ ಹೇಳಿದ್ದಾರೆ. ಈ ಮೂಲಕ ಕಿಚ್ಚ ರಾಜಕೀಯ ಪ್ರವೇಶದ ಬಗ್ಗೆ ಇದ್ದ ಕುತೂಹಲಕ್ಕೆ ತೆರೆ ಎಳೆದಿದ್ದಾರೆ.  

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಬಿಗ್ ಬಜೆಟ್ '45' ಅದ್ದೂರಿ ಇವೆಂಟ್, ಕರ್ನಾಟಕದ ಏಳು ಜಿಲ್ಲೆಗಳ ಚಿತ್ರಮಂದಿರದಲ್ಲಿ ಇವೆಂಟ್ ನೇರ ಪ್ರಸಾರ!
ಸೂರ್ಯನಿಗೆ ಬಹಳ ಹೊತ್ತು ಗ್ರಹಣ ಹಿಡಿಯಲ್ಲ.. ನಾನ್ ಬರ್ತಿದ್ದೀನಿ ಚಿನ್ನ: ದರ್ಶನ್‌ ಟ್ರೈಲರ್ ಡೈಲಾಗ್‌ಗೆ ಅಪಾರ್ಥ?