ಮುತ್ತಪ್ಪ ರೈ ಜೀವನಾಧಾರಿತ ಸಿನಿಮಾ ಸದ್ಯಕ್ಕೆ ಸ್ಟಾಪ್

Suvarna News   | Asianet News
Published : Dec 31, 2020, 07:37 AM IST
ಮುತ್ತಪ್ಪ ರೈ ಜೀವನಾಧಾರಿತ ಸಿನಿಮಾ ಸದ್ಯಕ್ಕೆ ಸ್ಟಾಪ್

ಸಾರಾಂಶ

ಮುತ್ತಪ್ಪ ರೈ ಕುರಿತ ಚಿತ್ರಕ್ಕೆ ತಾತ್ಕಾಲಿಕ ಇತಿಶ್ರೀ | ‘ಎಂಆರ್‌’ ಚಿತ್ರ ಕೈಬಿಟ್ಟರವಿ ಶ್ರೀವತ್ಸ | ರೈ ಕುಟುಂಬದಿಂದ ಆಕ್ಷೇಪ ಹಿನ್ನೆಲೆ

ಬೆಂಗಳೂರು(ಡಿ.31): ರವಿ ಶ್ರೀವತ್ಸ ನಿರ್ದೇಶನದಲ್ಲಿ ಸೆಟ್ಟೇರಿದ್ದ ಮುತ್ತಪ್ಪ ರೈ ಜೀವನಾಧಾರಿತ ‘ಎಂಆರ್‌’ ಚಿತ್ರವನ್ನು ತಾತ್ಕಾಲಿಕವಾಗಿ ಕೈ ಬಿಡಲಾಗಿದೆ. ಈ ಕುರಿತು ಬುಧವಾರ ಮಾಧ್ಯಮಗಳ ಜತೆ ಮಾತನಾಡಿದ್ದಾರೆ.

ಚಿತ್ರದ ನಿರ್ದೇಶಕ ರವಿ ಶ್ರೀವತ್ಸ ಹಾಗೂ ನಿರ್ಮಾಪಕ ಶೋಭಾ ರಾಜಣ್ಣ ಅವರನ್ನೊಳಗೊಂಡ ಚಿತ್ರತಂಡ ‘ಎಂಆರ್‌ ಚಿತ್ರವನ್ನು ನಾವು ಈಗ ಮಾಡುತ್ತಿಲ್ಲ, ಮುತ್ತಪ್ಪ ರೈ ಅವರ ಜೀವನದ ಕತೆಯನ್ನು ಸಿನಿಮಾ ಮಾಡಬೇಕೆಂಬ ನಮ್ಮ ನಿರ್ಧಾರದಿಂದ ಹಿಂದಕ್ಕೆ ಸರಿಯುತ್ತಿದ್ದೇವೆ’ ಎಂದು ಹೇಳಿಕೊಂಡಿದೆ. ಚಿತ್ರಕ್ಕೆ ಎಂಆರ್‌ ಪ್ರೊಡಕ್ಷನ್‌ನ ಪದ್ಮನಾಭ ಹಾಗೂ ರೈ ಕುಟುಂಬ ಆಕ್ಷೇಪಿಸಿದ ಹಿನ್ನೆಲೆಯಲ್ಲಿ ಈ ತೀರ್ಮಾನ ತೆಗೆದುಕೊಂಡಿದೆ.

ವಿವಾದ ಏನು?:

ಶೋಭಾ ಪುತ್ರ ದೀಕ್ಷಿತ್‌ ನಾಯಕನಾಗಿ ಕಾಣಿಸಿಕೊಳ್ಳಬೇಕಿದ್ದ ‘ಎಂಆರ್‌’ ಹೆಸರಿನ ಚಿತ್ರ ಇದೇ ತಿಂಗಳು ಬಿಡದಿಯಲ್ಲಿ ಅದ್ಧೂರಿಯಾಗಿ ಸೆಟ್ಟೇರಿತ್ತು. ಈ ಚಿತ್ರಕ್ಕೆ ನಾಯಕಿ ಆಯ್ಕೆ ಕೂಡ ಆಗಿತ್ತು. ಎಂದುಕೊಂಡಂತೆ ಎಲ್ಲವೂ ಆಗಿದ್ದರೆ ಜನವರಿ ತಿಂಗಳಿನಿಂದ ಚಿತ್ರೀಕರಣ ಪ್ರಾರಂಭವಾಗುತ್ತಿತ್ತು.

ಆದರೆ ಎಂಆರ್‌ ಪ್ರೊಡಕ್ಷನ್‌ನ ನಿರ್ಮಾಪಕ ಪದ್ಮನಾಭ ಅವರು, ‘ಮುತ್ತಪ್ಪ ರೈ ಜೀವನವನ್ನು ಆಧರಿಸಿ ಯಾರೂ ಸಿನಿಮಾ ಮಾಡಬಾರದು, ನಾನು ಅವರ ಕತೆಯನ್ನು ಸಿನಿಮಾ ಮಾಡಬೇಕು ಎಂದುಕೊಂಡಿದ್ದೆ. ಮುಂದೆ ನಾನೇ ಮಾಡುತ್ತೇನೆ. ಮುತ್ತಪ್ಪ ರೈ ಅವರ ಜೀವನಾಧಾರಿತ ಚಿತ್ರ ಯಾರು ಮಾಡಬೇಕು ಎಂದು ನಿರ್ಧರಿಸುವ ಹಕ್ಕು ಅವರ ಮಕ್ಕಳಾದ ರಿಕ್ಕಿ ರೈ ಮತ್ತು ರಾಕಿ ರೈ ಅವರಿಗೆ. ಈಗ ಅವರು ನನಗೆ ಬೆಂಬಲವಾಗಿ ನಿಂತಿದ್ದಾರೆ. ಆದರೆ ರೈ ಅವರ ಕುಟುಂಬವನ್ನು ಸಂಪರ್ಕ ಮಾಡದೇ ರವಿ ಅವರು ಸಿನಿಮಾ ಮಾಡಲು ಹೊರಟಿರುವುದು ಸರಿಯಲ್ಲ, ಕೂಡಲೇ ಅವರು ಸಿನಿಮಾ ನಿಲ್ಲಿಸಬೇಕು’ ಎಂದಿದ್ದರು. ಜಯ ಕರ್ನಾಟಕ ಸಂಘಟನೆ, ರೈ ಅವರ ಕುಟುಂಬದ ವಕೀಲರ ಜತೆ ಅವರು ಮಾಧ್ಯಮಗಳ ಮುಂದೆ ಹೇಳಿದ್ದರು.

ಆರಂಭದಲ್ಲಿಯೇ ವಿವಾದದಲ್ಲಿ ಸಿಲುಕಿಕೊಂಡಿತು ಮುತ್ತಪ್ಪ ಬಯೋಪಿಕ್!

ಈ ಹಿನ್ನೆಲೆಯಲ್ಲಿ ರವಿ ಶ್ರೀವತ್ಸ, ಶೋಭಾ ರಾಜಣ್ಣ ಮತ್ತು ಚಿತ್ರತಂಡ, ಚಿತ್ರವನ್ನು ಕೈ ಬಿಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಆದರೆ ಮುಂದಿನ ದಿನಗಳಲ್ಲಿ ಪದ್ಮನಾಭ ಅವರು ಹೇಳಿದಂತೆ ಸಿನಿಮಾ ಮಾಡಿ ಬಿಡುಗಡೆ ಮಾಡಿದ ಮರು ದಿನವೇ ಮಹೂರ್ತ ನೆರವೇರಿಸಿ ನಾವು ಅಂದುಕೊಂಡಂತೆ ‘ಎಂಆರ್‌’ ಚಿತ್ರವನ್ನು ರೂಪಿಸುತ್ತೇವೆ ಎಂದು ತಿಳಿಸಿದರು.

ಜೊತೆಗೆ ಇದೇ ತಂಡದ ಜೊತೆಗೆ ‘ಡಿಆರ್‌’ ಎನ್ನುವ ಹೊಸ ಚಿತ್ರವನ್ನು ಘೋಷಿಸಿ, ಪೋಸ್ಟರ್‌ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಉಮೇಶ್‌ ಬಣಕಾರ್‌, ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಸಂಬರಗಿ ಮೊದಲಾದವರು ಇದ್ದರು.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Actress Amulya: ಮುದ್ದು ಮಕ್ಕಳು, ಗಂಡನ ಜೊತೆ ಪೋಸ್ ಕೊಟ್ಟ ಗೋಲ್ಡನ್ ಗರ್ಲ್
Mark Movie: ಡಿಸೆಂಬರ್‌ನಲ್ಲಿ ಏಕಕಾಲಕ್ಕೆ ಸ್ಟಾರ್‌ಗಳ ಸಿನಿಮಾ ರಿಲೀಸ್;‌ ಕಿಚ್ಚ ಸುದೀಪ್‌ ಏನಂದ್ರು?