ಪತ್ರಕರ್ತೆಯಾಗಿ ತೆರೆ ಮೇಲೆ ಬರ್ತಿದ್ದಾರೆ ಕೃಷಿ ತಾಪಂಡ..! ಕಿಶೋರ್‌ ಪೊಲೀಸ್‌ ಪಾತ್ರದಲ್ಲಿ

Suvarna News   | Asianet News
Published : Sep 30, 2020, 09:19 AM ISTUpdated : Sep 30, 2020, 02:34 PM IST
ಪತ್ರಕರ್ತೆಯಾಗಿ ತೆರೆ ಮೇಲೆ ಬರ್ತಿದ್ದಾರೆ ಕೃಷಿ ತಾಪಂಡ..! ಕಿಶೋರ್‌ ಪೊಲೀಸ್‌ ಪಾತ್ರದಲ್ಲಿ

ಸಾರಾಂಶ

'ಐದು' ಸಿನಿಮಾ ತಂಡ ಸದ್ದಿಲ್ಲದೆ ಚಿತ್ರದ ಬಹುತೇಕ ಚಿತ್ರೀಕರಣ ಮುಗಿಸಿದ್ದಾರೆ.

ಕಿಶೋರ್‌ ಹಾಗೂ ನಟಿ ಕೃಷಿ ತಾಪಂಡ ಹೊಸ ಚಿತ್ರವೊಂದಕ್ಕೆ ಜೋಡಿಯಾಗಿ ಸದ್ದಿಲ್ಲದೆ ಚಿತ್ರದ ಬಹುತೇಕ ಚಿತ್ರೀಕರಣ ಮುಗಿಸಿದ್ದಾರೆ. ಚಿತ್ರದ ಹೆಸರು ‘ಐದು’. ಬೆಂಗಳೂರು ಹಾಗೂ ಮೈಸೂರಿನಲ್ಲಿ ಶೂಟಿಂಗ್‌ ನಡೆಸಿದ್ದು, ಇನ್ನೂ ಮೂರು ದಿನ ಮಾತ್ರ ಚಿತ್ರೀಕರಣ ಬಾಕಿ ಇರುವಾಗ ಅನಿವಾರ್ಯವಾಗಿ ಚಿತ್ರೀಕರಣ ಸ್ಥಗಿತವಾಗಿದೆ.

ಚಿತ್ರದ ಛಾಯಾಗ್ರಾಹಕರಿಗೆ ಕೊರೋನಾ ಪಾಸಿಟಿವ್‌ ಬಂದು ಚಿತ್ರೀಕರಣಕ್ಕೆ ಬ್ರೇಕ್‌ ನೀಡಿದ್ದಾರೆ. ಇದು ಎರಡು ಕಾಲಘಟ್ಟಗಳ ಕತೆ. 80 ಹಾಗೂ 90 ದಶಕದ ನಡುವೆ ನಡೆಯುವ ಕತೆ. ಈ ಹಳೆಯ ಕತೆಯನ್ನು ಮೈಸೂರಿನಲ್ಲಿ ಚಿತ್ರೀಕರಣ ಮಾಡಿದರೆ, ಪ್ರೆಸೆಂಟ್‌ ಕತೆಯನ್ನು ಬೆಂಗಳೂರಿನಲ್ಲಿ ಶೂಟಿಂಗ್‌ ಮಾಡಲಾಗಿದೆ.

ಹೊಸ 'ಸಿನಿ ಮನೆ' ಸೇರುವ ಬಗ್ಗೆ ಅನು ಸಿರಿಮನೆ ಮಾತು..!

ರಿವಾನ್‌ ವಿಕ್ರಮ್‌ ಈ ಚಿತ್ರದ ನಿರ್ದೇಶಕರು. ಈ ಕತೆಯಲ್ಲಿ ಕಿಶೋರ್‌ ಪೊಲೀಸ್‌ ಪಾತ್ರದಲ್ಲಿ ಕಾಣಿಸಿಕೊಂಡರೆ, ಕೃಷಿ ತಾಪಂಡ ಪತ್ರಕರ್ತೆಯಾಗಿ ನಟಿಸುತ್ತಿದ್ದಾರೆ. ಚಿತ್ರದ ಬಹುತೇಕ ಕತೆ ಇವರ ಸುತ್ತಲೇ ಸಾಗುತ್ತದೆ.

‘ಓಟಿಟಿಗೆ ಅಂತಲೇ ಮಾಡುತ್ತಿರುವ ಸಿನಿಮಾ. ಕ್ರೈಮ್‌ ಕತೆಯನ್ನು ಹೊಂದಿದ ಸಿನಿಮಾ. ನಾನು ತುಂಬಾ ದಿನಗಳ ನಂತರ ಒಪ್ಪಿಕೊಂಡಿರುವ ಸಿನಿಮಾ’ ಎನ್ನುತ್ತಾರೆ ನಟಿ ಕೃಷಿ ತಾಪಂಡ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ರಗಡ್‌ ಕಾಪ್‌, ಮ್ಯಾಕ್ಸಿಮಮ್‌ ಮಾಸ್‌.. 'ಮಾರ್ಕ್' ಕಥೆ ಬಗ್ಗೆ ಸ್ಫೋಟಕ ಸತ್ಯ ಬಿಚ್ಚಿಟ್ಟ ಕಿಚ್ಚ ಸುದೀಪ್!
ಸುದೀಪ್​ಗೆ ಸ್ತ್ರೀದೋಷ ಇದೆಯಾ? ಬಹು ದೊಡ್ಡ ರಹಸ್ಯ ರಿವೀಲ್​ ಮಾಡಿದ ಕಿಚ್ಚ ಹೇಳಿದ್ದೇನು?