Breaking: ದ್ವಾರಕೀಶ್‌ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

Published : Apr 16, 2024, 10:57 PM ISTUpdated : Apr 16, 2024, 11:12 PM IST
Breaking: ದ್ವಾರಕೀಶ್‌ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಸಾರಾಂಶ

ಮಂಗಳವಾರ ನಿಧನರಾದ ಕನ್ನಡದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ್‌ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಏ.16): ಪ್ರಧಾನಿ ನರೇಂದ್ರ ಮೋದಿ ನಟ ದ್ವಾರಕೀಶ್‌ ಅವರ ನಿಧನಕ್ಕೆ ಸಂತಾಪ ಸೂಚಿಸಿ ಟ್ವೀಟ್‌ ಮಾಡಿದ್ದಾರೆ. ಹಿರಿಯ ನಟ ದ್ವಾರಕೀಶ್‌ ಅವರು ತಮ್ಮ 81ನೇ ವರ್ಷದಲ್ಲಿ ಸಾವು ಕಂಡರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿಯ ಸ್ವಗೃಹದಲ್ಲಿ ಬೆಳಗ್ಗೆ ನಿಧನರಾದರು. ನಟರಾಗಿ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದ ಅವರು ಚಿತ್ರ ನಿರ್ಮಾಣ ಹಾಗೂ ನಿರ್ದೇಶನದಲ್ಲಿಯೂ ಹೆಸರು ಮಾಡಿದ್ದರು. ಅವರ ನಿಧನಕ್ಕೆ ಸಂತಾಪ ಸೂಚಿಸಿ ಟ್ವೀಟ್‌ ಮಾಡಿರುವ ಮೋದಿ, 'ಚಲನಚಿತ್ರೋದ್ಯಮಕ್ಕೆ ದ್ವಾರಕೀಶ್ ಜಿ ಅವರ ಕೊಡುಗೆ ಅಪಾರವಾಗಿದೆ, ದಶಕಗಳ ಕಾಲ ಮರೆಯಲಾಗದ ಪಾತ್ರಗಳಲ್ಲಿ ಅವರು ನಟಿಸಿದ್ದಾರೆ ಮತ್ತು ಮಹೋನ್ನತ ಚಲನಚಿತ್ರಗಳನ್ನು ಅವರು ನೀಡಿದ್ದಾರೆ. ಪ್ರೇಕ್ಷಕರನ್ನು ಆಕರ್ಷಿಸುವ ಮತ್ತು ಯುವ ಪ್ರತಿಭೆಗಳನ್ನು ಬೆಂಬಲಿಸುವ ಅವರ ಸಾಮರ್ಥ್ಯವು ಕನ್ನಡ ಚಿತ್ರರಂಗವನ್ನು ರೂಪಿಸುವಲ್ಲಿ ಅವರ ಬಹುಮುಖಿ ಪಾತ್ರದ ಒಂದು ನೋಟವನ್ನು ನೀಡಿತು. ಅವರ ನಿಧನದಿಂದ ದುಃಖವಾಗಿದೆ. ಅವರ ಅಪೂರ್ವ ಪ್ರಯಾಣವನ್ನು ನಾವು ಸದಾ ಸ್ಮರಿಸುತ್ತೇವೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ' ಎಂದು ಮೋದಿ ಟ್ವೀಟ್‌ ಮಾಡಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ದ್ವಾರಕೀಶ್‌ ಅನಾರೋಗ್ಯಕ್ಕೆ ತುತ್ತಾಗಿದ್ದರು. 1942 ಆಗಸ್ಟ್‌ 19 ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದ್ದ ದ್ವಾರಕೀಶ್‌ ಅವರ ತಂದೆ ಶಾಮರಾವ್‌ ಹಾಗೂ ತಾಯಿ ಜಯಮ್ಮ. ಮೈಸೂರಿನ ಶಾರದಾ ವಿಲಾಸ್‌ ಹಾಗೂ ಬನುಮಯ್ಯ ಶಾಲೆಯಲ್ಲಿ ತಮ್ಮ ಪ್ರಾಥಮಿಕ ಶಿಕ್ಷಣವನ್ನು ದ್ವಾರಕೀಶ್‌ ಮುಗಿಸಿದ್ದರು. ಸಿಪಿಸಿ ಪಾಕಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮುಗಿಸಿದ್ದ ದ್ವಾರಕೀಶ್‌ ಬಳಿಕ ತಮ್ಮ ಸೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಆರಂಭಿಸಿದ್ದರು.

Breaking: ಕಳ್ಳ ಕುಳ್ಳ ಖ್ಯಾತಿಯ ನಟ ದ್ವಾರಕೀಶ್ ನಿಧನ

1963ರ ಸುಮಾರಿಗೆ ವ್ಯಾಪಾರ ಉದ್ಯಮ ಬಿಟ್ಟು ನಟನೆಯತ್ತ ಮುಖಮಾಡಿದ ದ್ವಾರಕೀಶ್‌ ಆ ಬಳಿಕ ಹಿಂದೆ ನೋಡಿದ್ದೇ ಇಲ್ಲ. ಸೋದರ ಮಾವ ಹುಣಸೂರು ಕೃಷ್ಣಮೂರ್ತಿ ಅವರ ಮೂಲಕ 1964ರಲ್ಲಿ ‘ವೀರ ಸಂಕಲ್ಪ’ ಚಲನಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ದ್ವಾರಕೀಶ್, ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ಈವರೆಗೂ ನೂರಾರು ಸಿನಿಮಾಗಳಲ್ಲಿ ನಟಿಸಿದ್ದಾರೆ.

ವಿಷ್ಣುವರ್ಧನ್‌ ಜೊತೆಗೆ ಬಿರುಕು ಮೂಡಿದ್ಯಾಕೆ? ದಾದಾ ಬಗ್ಗೆ ದ್ವಾರಕೀಶ್ ನಿಜವಾಗ್ಲೂ ಆ ಮಾತು ಹೇಳಿದ್ರಾ!

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ವೆಡ್ಡಿಂಗ್ ಸೀಸನ್ ಶುರು, ಆದ್ರೆ ನನ್ನ ಮದುವೆ...... ಏನ್ ಹೇಳಿದ್ರು Sanvi Sudeep
ಡಿಸೆಂಬರ್‌ಗೆ ಸ್ಯಾಂಡಲ್‌ವುಡ್‌ ದಬ್ಬಾಳಿಕೆ: ಡೆವಿಲ್‌, 45, ಮಾರ್ಕ್‌ ಮೂವರು ಸೂಪರ್‌ಸ್ಟಾರ್‌ಗಳ ಮಹಾಯುದ್ಧ