
ಅವರ ಹೊಸ ಸಿನಿಮಾದ ಹೆಸರು ಗರುಡಗಮನ ವೃಷಭವಾಹನ. ಈ ಸಿನಿಮಾದಲ್ಲಿ ಇಬ್ಬರು ನಾಯಕರು. ಒಬ್ಬರು ಸ್ವತಃ ರಾಜ್ ಬಿ ಶೆಟ್ಟಿ. ಇನ್ನೊಬ್ಬರು ರಿಷಬ್ ಶೆಟ್ಟಿ. ‘ಇಲ್ಲಿ ಎರಡು ಪಾತ್ರಗಳಿವೆ. ಒಂದು ಕ್ರೋಧದ ಪ್ರತಿರೂಪ. ಶಿವ ಇದ್ದಂತೆ.ಇನ್ನೊಂದು ನಿಯಂತ್ರಣದ ಪ್ರತಿರೂಪ. ವಿಷ್ಣು ಇದ್ದಂತೆ.
ಈ ಇಬ್ಬರು ಒಂದಾದರೆ ಯಾವ ಹಂತಕ್ಕೆ ಬೆಳೆಯಬಹುದು ಅನ್ನುವುದೇ ಈ ಸಿನಿಮಾದ ಕತೆ. ಮೊದಲು ಹರಿಹರ ಎಂದು ಹೆಸರಿಡುವ ಆಲೋಚನೆ ಇತ್ತು. ಆದರೆ ಇವರು ಹರಿ ಹರ ಅಲ್ಲ. ಹರಿ ಹರನ ಅಂಶಗಳಿರುವ ಪಾತ್ರಗಳು. ಹಾಗಾಗಿ ಹೊಸ ಹೆಸರು ಇಡಲಾಗಿದೆ. ಗರುಡಗಮನ ಹರಿ, ವೃಷಭವಾಹನ ಹರ. ಮಂಗಳೂರು ಹಿನ್ನೆಲೆಯಲ್ಲಿ ನಡೆಯುವ ಗ್ಯಾಂಗ್ಸ್ಟರ್ ಸಿನಿಮಾ ಇದು.
ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಬಿಡಲು ರೆಡಿಯಾಗಿದ್ದಾರೆ ರಾಜ್ ಬಿ ಶೆಟ್ಟಿ!
ಚಿತ್ರೀಕರಣ ಪೂರ್ತಿಯಾಗಿದೆ. ಜೂನ್ನಲ್ಲಿ ಸಿನಿಮಾ ಬಿಡುಗಡೆ ಮಾಡುವ ಸಾಧ್ಯತೆ ಇದೆ’ ಎನ್ನುತ್ತಾರೆ ನಿರ್ದೇಶಕ ರಾಜ್ ಬಿ ಶೆಟ್ಟಿ. ಒಂದು ಮೊಟ್ಟೆಯ ಕತೆ ಚಿತ್ರದ ತಾಂತ್ರಿತ ತಂಡ ಇಲ್ಲೂ ಇದೆ. ಅಲ್ಲದೇ ರಾಜ್ ಬಿ ಶೆಟ್ಟಿ ಅವರ ಲೈಟರ್ ಬುದ್ಧ ತಂಡ ನಿರ್ಮಾಣದ ಹೊಣೆ ಹೊತ್ತಿದೆ. ಅವರಿಗೆ ರವಿ ರೈ, ವಚನ್ ಶೆಟ್ಟಿ ಸಾಥ್ ನೀಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.